Lawyer Jagadish: ಲಾಯರ್ ಜಗದೀಶ್ಗೆ ದರ್ಶನ್ ಅಭಿಮಾನಿಗಳಿಂದ ಬಿತ್ತು ಗೂಸಾ ?!
ಎಲ್ಲಾ ವಿಷಯಗಳಿಗೂ ರಿಯಾಕ್ಟ್ ಮಾಡುತ್ತಿದ್ದ ಹಾಗೂ ವಿಡಿಯೋಗಳ ಮೂಲಕ ವೈರಲ್ ಆಗುತ್ತಿದ್ದ ಲಾಯರ್ ಜಗದೀಶ್ ಅವರಿಗೆ ನಟ ದರ್ಶನ್ ಅವರ ಅಭಿಮಾನಿಗಳು ಗೂಸಾ ಕೊಟ್ಟಿದ್ದಾರೆ ಎನ್ನಲಾಗಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಳೆದ ಕೆಲವು ದಿನಗಳಿಂದ ನಟ ದರ್ಶನ್ ಸೇರಿದಂತೆ ಹಲವರ ಬಗ್ಗೆ ಲಾಯರ್ ಜಗದೀಶ್ ಅವರು ಮಾತನಾಡಿದ್ದರು. ಇದೀಗ ಗುರುವಾರ ದರ್ಶನ್ ಅವರ ಅಭಿಮಾನಿಗಳು ಲಾಯರ್ ಜಗದೀಶ್ಗೆ ಹೊಡೆದಿದ್ದಾರೆ ಎನ್ನಲಾಗಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೊದಲ ದರ್ಶನ್ ಪರ ಮಾತನಾಡಿದ್ದ ಲಾಯರ್ ಜಗದೀಶ್ ಅವರು ಇತ್ತೀಚಿನ ದಿನಗಳಲ್ಲಿ ದರ್ಶನ್ ಅವರ ಅಭಿಮಾನಿಗಳು ಕೋಪಗೊಳ್ಳುವಂತೆ ಮಾತನಾಡಿದ್ದರು. ಇದೇ ಕಾರಣಕ್ಕೆ ಲಾಯರ್ ಜಗದೀಶ್ ಅವರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಆದರೆ ಜಗದೀಶ್ ಅವರು ಹಲವು ವಿಷಯಗಳ ಬಗ್ಗೆ ಹೋರಾಟ ಮಾಡಿದ್ದೂ ಇದೆ.
ಕನ್ನಡ ಬಿಗ್ಬಾಸ್ ಸೀಸನ್ 11ರ ಸ್ಪರ್ಧಿ ಲಾಯರ್ ಜಗದೀಶ್ ಅವರಿಗೆ ಆರೇಳು ಜನ ಸೇರಿಕೊಂಡು ಗುರುವಾರ ಹೊಡೆದಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಲಾಯರ್ ಜಗದೀಶ್ ಹಾಗೂ ಅಪರಿಚಿತ ಗುಂಪಿನ ನಡುವೆ ಮಾತಿನ ಚಕಮಕಿ ಹಾಗೂ ತಳ್ಳಾಟವಾಗಿದೆ. ಕೆಲವರು ಈ ಸಂದರ್ಭದಲ್ಲಿ ಲಾಯರ್ ಜಗದೀಶ್ ಅವರನ್ನು ಹೊಡೆಯದಂತೆ ತಡೆಯುವುದಕ್ಕೂ ಪ್ರಯತ್ನಪಟ್ಟಿದ್ದಾರೆ. ಜಗದೀಶ್ ಅವರ ಟೀ ಶರ್ಟ್ ಹಿಡಿದು ತಳ್ಳಾಡಲಾಗಿದೆ. ಅಲ್ಲದೆ ಟೀ ಶರ್ಟ್ ಕಿತ್ತು ಹಾಕಲಾಗಿದ್ದು, ಕೆಲವರು ಜಗದೀಶ್ಗೆ ಏಟು ಕೊಟ್ಟಿದ್ದಾರೆ.

ದರ್ಶನ್ ಅಭಿಮಾನಿಗಳಿಂದ ಸಂಭ್ರಮ: ಈ ವಿಡಿಯೋವನ್ನು ನೋಡಿ ದರ್ಶನ್ ಅಭಿಮಾನಿಗಳು ಕಮೆಂಟ್ನ ಮೂಲಕ ಸಂತೋಷ ಹಂಚಿಕೊಳ್ಳುತ್ತಿದ್ದಾರೆ. ಹೌದು ಡಿ ಬಾಸ್ನ ಬಗ್ಗೆ ಮಾತನಾಡಿದ್ದಕ್ಕೆ ಸರಿಯಾಗಿಯೇ ಆಗಿದೆ. ಇನ್ಮುಂದೆಯಾದರೂ ಡಿ ಬಾಸ್ ಹಾಗೂ ಅವರ ಅಭಿಮಾನಿಗಳ ತಂಟೆಗೆ ಬರಬೇಡಿ ಅಂತ ದರ್ಶನ್ ಅಭಿಮಾನಿಗಳು ಕಮೆಂಟ್ ಮಾಡಿದ್ದಾರೆ.
ವಿಡಿಯೋ ಮೂಲಕ ಲಾಯರ್ ಜಗದೀಶ್ ಸ್ಪಷ್ಟನೆ
ಇನ್ನು ಲಾಯರ್ ಜಗದೀಶ್ ಅವರಿಗೆ ಹಲ್ಲೆ ಮಾಡಲಾಗಿದೆ ಎನ್ನುವ ವಿಡಿಯೋ ವೈರಲ್ ಆಗಿರುವ ಬೆನ್ನಲ್ಲೇ ಈ ಸಂಬಂಧ ವಿಡಿಯೋ ಮೂಲಕ ಲಾಯರ್ ಜಗದೀಶ್ ಅವರು ಸ್ಪಷ್ಟನೆ ಕೊಟ್ಟಿದ್ದಾರೆ ಎನ್ನಲಾಗಿರುವ ವಿಡಿಯೋ ಸಹ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮಾತನಾಡಿರುವ ಅವರು ಬೆಂಗಳೂರಿನ ಕೊಡಿಗೆಹಳ್ಳಿ ವ್ಯಾಪ್ತಿಯ ವಿರೂಪಾಕ್ಷಪುರ ಗೇಟ್ ಸಮೀಪದ ನಮ್ಮ ಮನೆಯ ಕಾಂಪ್ಲೆಕ್ಸ್ನ ಮುಂಭಾಗದಲ್ಲಿ ರೋಡ್ ಬ್ಲಾಕ್ ಆಗಿರುವ ಬಗ್ಗೆ ನಾನು ಪೊಲೀಸರಿಗೆ ದೂರು ನೀಡಿದ್ದೆ. ಈ ಭಾಗದಲ್ಲಿ ಅಣ್ಣಮ್ಮ ದೇವಿಯ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಇದರಿಂದ ನಾವು ಇರುವ ಏರಿಯಾದ ರಸ್ತೆ ಬ್ಲಾಕ್ ಆಗಿದೆ. ಇದರ ಬಗ್ಗೆ ಪೊಲೀಸರಿಗೆ ಕಂಪ್ಲೇಂಟ್ ಮಾಡಿದ್ದೆ.
ಬೆಳಗ್ಗೆ ವಾಕಿಂಗ್ ಹೋದಾಗ 40 ಜನ ಪುಂಡರು ನನ್ನ ಜೊತೆ ಜಗಳ ಮಾಡಿದ್ದಾರೆ. ಈ ಪುಂಡರನ್ನು ಪೊಲೀಸರೇ ಕಳೆಸಿದ್ದಾರೆ ಎನ್ನುವ ಬಗ್ಗೆ ನನಗೆ ಅನುಮಾನ ಇದೆ ಅಂತಲೂ ಅವರು ಆರೋಪ ಮಾಡಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications