ನಾಯಕತ್ವ ಬದಲಾವಣೆ: ಸಿಎಂ ಯಡಿಯೂರಪ್ಪ ಸೈಲೆಂಟ್, ಮಠಾಧಿಪತಿಗಳು ವೈಲೆಂಟ್
ನಾಡಿನ ಧಾರ್ಮಿಕ ಪೀಠದ ಗುರುಗಳಿಗೆ ರಾಜಕೀಯದಲ್ಲಿ ಏನು ಕೆಲಸ? ಸಂವಿಧಾನದ ಪ್ರಕಾರ ಚುನಾಯಿತ ಪ್ರತಿನಿಧಿಗಳು ಯಾರು ಶಾಸಕಾಂಗ ಪಕ್ಷದ ನಾಯಕರಾಗ ಬೇಕು ಎನ್ನುವುದನ್ನು ನಿರ್ಧರಿಸುವುದು ನಮ್ಮ ನೆಲದ ಕಾನೂನು.
ಆದರೂ, ಸರಕಾರ ಯಾರದ್ದೇ ಇರಲಿ, ಯಾವ ಸಮುದಾಯದ ನಾಯಕನೇ ಇರಲಿ, ಮಠಾಧಿಪತಿಗಳ ಹಸ್ತಕ್ಷೇಪ ಹಿಂದಿನಿಂದಲೂ ಇದೆ. ಇದಕ್ಕೆ ಪ್ರತ್ಯಕ್ಷವಾಗಿ ಯಾವ ಪಕ್ಷದ ನಾಯಕರೂ ಪ್ರತಿರೋಧವನ್ನು ಒಡ್ಡುವುದಿಲ್ಲ.
ಅದರಂತೆಯೇ, ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರು ಕೆಳಗಿಳಿಯಲಿದ್ದಾರೆ ಎನ್ನುವ ಅನಧಿಕೃತ ಸುದ್ದಿ ವೇಗ ಪಡೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ ಮತ್ತೆ ಸ್ವಾಮೀಜಿಗಳು ಮುನ್ನಲೆಗೆ ಬಂದಿದ್ದಾರೆ.
ಪೀಠದಿಂದ ಕೂತೇ ಯಡಿಯೂರಪ್ಪನವರು ಬದಲಾಗಬಾರದು ಎಂದು ಹೇಳುತ್ತಿದ್ದ ಸ್ವಾಮೀಜಿಗಳು, ಮಂಗಳವಾರದಂದು (ಜುಲೈ 20) ಗುಂಪಾಗಿ ಬಂದು ಯಡಿಯೂರಪ್ಪನವರನ್ನು ಭೇಟಿಯಾಗಿ ಬಂದಿದ್ದಾರೆ. ಸಿಎಂ ಸ್ಥಾನದಿಂದ ಕೆಳಗಿಳಿಯಬಾರದು ಎಂದು ಒತ್ತಾಯಿಸಿದ್ದಾರೆ. ಆದರೆ, ಇದೆಲ್ಲಾ ಯಡಿಯೂರಪ್ಪನವರ ಕೈಯಲ್ಲಿ ಎಲ್ಲಿದೆ?

ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿಯವರ ನೇತೃತ್ವ
ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿಯವರ ನೇತೃತ್ವದಲ್ಲಿ ಬೆಂಗಳೂರಿನ ಕಾವೇರಿ ನಿವಾಸದಲ್ಲಿ 35 ಲಿಂಗಾಯತ ಪೀಠದ ಸ್ವಾಮೀಜಿಗಳು ಯಡಿಯೂರಪ್ಪನವರನ್ನು ಭೇಟಿಯಾಗಿ, ಸಿಎಂ ಸ್ಥಾನದಿಂದ ಇಳಿಯಬಾರದು ಎಂದಿದ್ದಾರೆ. ಹೈಕಮಾಂಡ್ ಸೂಚಿಸಿದಂತೆ ನಡೆದುಕೊಳ್ಳಬೇಕಾಗುತ್ತದೆ ಎನ್ನುವ ಉತ್ತರ ಮುಖ್ಯಮಂತ್ರಿಗಳಿಂದ ಬಂದಿದೆ.

ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು, ರಂಭಾಪುರಿ ಶ್ರೀಗಳು
ಇದಲ್ಲದೇ, ಇಂತಹ ಸಂದರ್ಭದಲ್ಲಿ ಯಡಿಯೂರಪ್ಪನವರನ್ನು ಕೆಳಗಿಳಿಯಲು ಸೂಚಿಸಬಾರದು ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಮತ್ತು ಮಾದಾರ ಚೆನ್ನಯ್ಯ ಪೀಠದ ಬಸವಮೂರ್ತಿ ಸ್ವಾಮೀಜಿಗಳು, ರಂಭಾಪುರಿ ಶ್ರೀಗಳು ಮುಂತಾದವರೂ ಒತ್ತಾಯಿಸಿದ್ದಾರೆ. ಇಷ್ಟಕ್ಕೇ ಮುಗಿದಿಲ್ಲ..

ಯಡಿಯೂರಪ್ಪನವರನ್ನು ಇಳಿಸಿದರೆ ಬಿಜೆಪಿ ಸರ್ವನಾಶವಾಗುತ್ತದೆ
ಯಡಿಯೂರಪ್ಪನವರನ್ನು ಇಳಿಸಿದರೆ ಬಿಜೆಪಿ ಸರ್ವನಾಶವಾಗುತ್ತದೆ ಎಂದು ಹೇಳಿದ್ದಾರೆ. ಹಿಂದೆ, ಬಿಎಸ್ವೈ ಕೆಜೆಪಿ ಕಟ್ಟಿದಾಗ ಪಕ್ಷದ ಸ್ಥಿತಿ ಏನಾಯಿತು ಎನ್ನುವುದನ್ನು ಒಮ್ಮೆ ನೆನೆಪಿಸಿಕೊಳ್ಳಿ ಎಂದು ಹೈಕಮಾಂಡಿಗೆ ಎಚ್ಚರಿಕೆ ನೀಡಿದ್ದಾರೆ. ಆ ಮೂಲಕ, ಬಿಜೆಪಿಗಿಂತ ಯಡಿಯೂರಪ್ಪನವರೇ ದೊಡ್ಡವರು ಎಂದು ಸಾರಿದ್ದಾರೆ.

ಯಡಿಯೂರಪ್ಪ ಎಂಡ್ ಟೀಂ ಸೈಲೆಂಟ್, ಧರ್ಮಗುರುಗಳು ಮಾತ್ರ ವೈಲೆಂಟ್
ಸಮುದಾಯದ ನಾಯಕ ಎಂದು ಯಡಿಯೂರಪ್ಪನವರನ್ನು ಬೆಂಬಲಿಸುತ್ತಿಲ್ಲ ಎನ್ನುವ ಹೇಳಿಕೆಯನ್ನು ಲಿಂಗಾಯತ ಪೀಠಾಧಿಪತಿಗಳು ಹೇಳುತ್ತಿದ್ದರೂ, ಸುಮಾರು ಐನೂರಕ್ಕೂ ಹೆಚ್ಚು ಧರ್ಮಗುರುಗಳು ಯಡಿಯೂರಪ್ಪನವರ ಪರ ನಿರ್ಣಯ ಆಂಗೀಕರಿಸುವ ಚಿಂತನೆ ನಡೆಸುತ್ತಿದ್ದಾರೆ. ಹಾಗಾಗಿ, ಸದ್ಯದ ಮಟ್ಟಿಗೆ ಯಡಿಯೂರಪ್ಪ ಎಂಡ್ ಟೀಂ ಸೈಲೆಂಟಾಗಿದ್ದರೂ, ಧರ್ಮಗುರುಗಳು ಮಾತ್ರ ವೈಲೆಂಟಾಗಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications