ನಾಯಕತ್ವದ ಕಿತ್ತಾಟ: ಆಖಾಡಕ್ಕೆ ಇಳಿದ ಹೈಕಮಾಂಡ್, ಸಿದ್ದು ಮತ್ತು ಡಿಕೆಶಿಗೆ ಬುಲಾವ್
ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ವಿಚಾರ ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಅನಾವಶ್ಯಕವಾಗಿ ಗೊಂದಲದ ಗೂಡಾಗಿ ಕೂತಿರುವುದರಿಂದ ಹೈಕಮಾಂಡ್ ಮಧ್ಯಪ್ರವೇಶಿಸಿದೆ.
ಈ ಸಂಬಂಧ ಕೆಪಿಸಿಸಿ ಮುಖಂಡರು ನೀಡುತ್ತಿರುವ ಬಹಿರಂಗ ಹೇಳಿಕೆಗಳು ಕಮ್ಮಿಯಾಗುತ್ತಾ ಬಂದಿದ್ದರೂ, ಒಳೊಗೊಳಗೆ ಇದರ ಬೇಗುದಿ ಹಾಗೆಯೇ ಕುದಿಯುತ್ತಿದೆ. ಪಕ್ಷದ ಆಂತರಿಕ ವಲಯದಲ್ಲಿ ಇನ್ನೂ ಇದು ಚರ್ಚೆಯ ವಿಷಯವಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಿವಾಸದಲ್ಲಿ ಬೆಂಗಳೂರು ಜನಪ್ರತಿನಿಧಿಗಳ ಸಭೆಯಲ್ಲಿ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಆಹ್ವಾನ ಇಲ್ಲದೇ ಇದ್ದದ್ದು, ನಾಯಕತ್ವದ ವಿಚಾರ ಇನ್ನೂ ಹೊಗೆಯಾಡುತ್ತಿದೆ ಎನ್ನುವುದಕ್ಕೆ ಸಾಕ್ಷಿ.
ಕೋರ್ಟ್ ಆದೇಶ ಏನಾದರೂ ಹೊರಬಿದ್ದಲ್ಲಿ ಬಿಬಿಎಂಪಿ ಚುನಾವಣೆ ಎದುರಾಗುವ ಸಾಧ್ಯತೆ ಇರುವುದರಿಂದ ಹೈಕಮಾಂಡ್ ಎಚ್ಚೆತ್ತುಕೊಂಡು, ಇಬ್ಬರು ಪ್ರಮುಖ ನಾಯಕರನ್ನು ದೆಹಲಿಗೆ ಬರುವಂತೆ ಹೈಕಮಾಂಡ್ ಸೂಚಿಸಿದೆ.

ಜಮೀರ್ ಅಹ್ಮದ್ ಅವರಿಂದ ಆರಂಭವಾದ ನಾಯಕತ್ವದ ವಿಚಾರ
ಜಮೀರ್ ಅಹ್ಮದ್ ಅವರಿಂದ ಆರಂಭವಾದ ನಾಯಕತ್ವದ ವಿಚಾರ ಹಲವು ಆಯಾಮಗಳನ್ನು ಪಡೆದುಕೊಂಡಿತ್ತು. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಪರ ಶಾಸಕರು ಹೇಳಿಕೆಗಳನ್ನು ನೀಡಲು ಆರಂಭಿಸಿದ್ದರು. ಒಂದು ಹಂತದಲ್ಲಿ ಈ ವಿಚಾರ ಇಬ್ಬರು ನಾಯಕರ ಪ್ರತಿಷ್ಠೆಯ ವಿಚಾರವಾಗಿ ಉರುಳಲು ಆರಂಭಿಸಿತ್ತು.

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿಗೆ ಬರುವಂತೆ ಸೂಚನೆ
ರಾಜ್ಯದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಹೈಕಮಾಂಡ್ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿಗೆ ಬರುವಂತೆ ಸೂಚಿಸಿದೆ. ಮಂಗಳವಾರ (ಜುಲೈ 20) ಇಬ್ಬರು ನಾಯಕರ ಜೊತೆಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಮಾಜಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ
ಮಾಜಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಸಿದ್ದರಾಮಯ್ಯ ಮತ್ತು ಡಿಕೆಶಿಯವರ ಜೊತೆ ಮಾತುಕತೆ ನಡೆಸಲಿದ್ದಾರೆ. ಮಂಗಳವಾರ ಬೆಳಗ್ಗೆ ಎಲ್ಲಾ ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರ ಸಭೆಯನ್ನು ರಾಹುಲ್ ಗಾಂಧಿ ಕರೆದಿದ್ದಾರೆ. ಹಾಗಾಗಿ, ಅಂದು ಸಂಜೆಯ ಮೇಲೆ ಇಬ್ಬರು ನಾಯಕರನ್ನು ರಾಹುಲ್ ಗಾಂಧಿ ಭೇಟಿಯಾಗಲಿದ್ದಾರೆ.
Recommended Video

ಕಾಂಗ್ರೆಸ್ಸಿಗೆ ಇದ್ದ ಒಂದು ಭರವಸೆಯಾದ ಕೇರಳದಲ್ಲೂ ಸೋಲು
ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ಸಿಗೆ ಇದ್ದ ಒಂದು ಭರವಸೆಯಾದ ಕೇರಳದಲ್ಲೂ ಚುನಾವಣೆಯಲ್ಲಿ ಸೋತ ನಂತರ, ಉಳಿದಿರುವ ಇನ್ನೊಂದು ರಾಜ್ಯವೆಂದರೆ ಕರ್ನಾಟಕ. ಹಾಗಾಗಿ, ರಾಜ್ಯದ ಇಬ್ಬರು ನಾಯಕರ ನಡುವೆ ಭಿನ್ನಾಭಿಪ್ರಾಯ ಉಂಟಾದರೆ ಚುನಾವಣೆಯ ಮೇಲೆ ಪರಿಣಾಮ ಬೀರಬಹುದು ಎನ್ನುವ ಕಾರಣಕ್ಕಾಗಿ ರಾಹುಲ್ ಗಾಂಧಿ ನೇರವಾಗಿ ಆಖಾಡಕ್ಕೆ ಇಳಿದಿದ್ದಾರೆ.
-
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು












Click it and Unblock the Notifications