ಪ್ರಮುಖ ಆಭರಣ ಮಳಿಗೆಗಳಲ್ಲಿ ತಪಾಸಣೆ: 172 ಪ್ರಕರಣ ದಾಖಲು
ಬೆಂಗಳೂರು, ನವೆಂಬರ್ 7: ಕಾನೂನು ಮಾಪನ ಶಾಸ್ತ್ರ ಇಲಾಖೆಯ ಕ್ಷೇತ್ರಾಧಿಕಾರಿಗಳು ರಾಜ್ಯದ ಅನೇಕ ಕಡೆ ಚಿನ್ನ ಬೆಳ್ಳಿ ಅಂಗಡಿಗಳಲ್ಲಿ ತಪಾಸಣೆ ನಡೆಸಿದರು.
ಆಭರಣ ಖರೀದಿ ಸಂದರ್ಭದಲ್ಲಿ ವಂಚನೆ ನಡೆದಿದೆ ಎಂದು ಗ್ರಾಹರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸೋಮವಾರ ಮತ್ತು ಮಂಗಳವಾರ ಆಭರಣ ಮಳಿಗೆಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಿದರು. ವಂಚನೆ ಕಂಡುಬಂದ ಅಂಗಡಿಗಳ ಮೇಲೆ ಮೊಕದ್ದಮೆ ಹೂಡಲಾಗಿದ್ದು, ದಂಡ ವಿಧಿಸಲಾಗಿದೆ.
ಬೆಂಗಳೂರಿನಲ್ಲಿ ಮಣಪ್ಪುರಂ ಜ್ಯುವೆಲರ್ಸ್, ರಾಜ್ ಡೈಮಂಡ್ಸ್, ಸುಲ್ತಾನ್ ಗೋಲ್ಡ್ ಮತ್ತು ಡೈಮಂಡ್ಸ್, ನವರತನ್ ಜ್ಯುವೆಲರ್ಸ್, ಗಣೇಶ್ ಜುವೆಲರ್ಸ್ ಮೇಲೆ 37 ಮೊಕದ್ದಮೆಗಳನ್ನು ದಾಖಲಿಸಿ, 44 ಸಾವಿರ ರೂ ದಂಡ ವಿಧಿಸಲಾಗಿದೆ.

ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರುಗಳಲ್ಲಿ 54 ಮೊಕದ್ದಮೆಗಳು ದಾಖಲಾಗಿದ್ದು, 37 ಸಾವಿರ ರೂ. ದಂಡ ವಿಧಿಸಲಾಗಿದೆ.
ಮೈಸೂರು, ಮಂಡ್ಯ, ಮಡಿಕೇರಿ, ಹಾಸನ, ಮಂಗಳೂರು, ಉಡುಪಿ, ಚಿಕ್ಕಮಗಳೂರುಗಳಲ್ಲಿ 26 ಪ್ರಕರಣಗಳು ದಾಖಲಾಗಿದ್ದು, 21,500 ರೂ ದಂಡ ವಿಧಿಸಲಾಗಿದೆ.
ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ, ಹುಬ್ಬಳ್ಳಿ, ಕಾರವಾರ ಜಿಲ್ಲೆಗಳಲ್ಲಿ 26 ಪ್ರಕರಣಗಳು ದಾಖಲಾಗಿವೆ. 7,000 ರೂ ದಂಡ ವಿಧಿಸಲಾಗಿದೆ.

ಕಲಬುರ್ಗಿ, ರಾಯಚೂರು, ಬಳ್ಳಾರಿ, ಬೀದರ್, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಗಳಿಂದ 20,500 ರೂ. ದಂಡ ಹಾಗೂ 13 ಮೊಕದ್ದಮೆಗಳು ದಾಖಲಾಗಿವೆ.
ರಾಜ್ಯದಾದ್ಯಂತ ಒಟ್ಟು 695 ಕಡೆ ತಪಾಸಣೆಗಳನ್ನು ಮಾಡಲಾಗಿದ್ದು, 172 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications