ಸಿದ್ದರಾಮಯ್ಯನವರ ಅವಧಿಯಲ್ಲಿ ಮೈಸೂರು ದಸರಾ ಉದ್ಘಾಟಿಸಿ ನಿಸಾರ್ ಅಹಮದ್ ಹೇಳಿದ್ದು ಹೀಗೆ..
ನಿತ್ಯೋತ್ಸವದ ಕವಿಯೆಂದೇ ಹೆಸರಾಗಿರುವ ಪ್ರೊ. ಕೆ.ಎಸ್.ನಿಸಾರ್ ಅಹಮದ್, ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಭಾನುವಾರ (ಮೇ 3) ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 84ವರ್ಷ ವಯಸ್ಸಾಗಿತ್ತು.
73ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ನಿಸಾರ್ ಅಹಮದ್, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ, 2017ರಲ್ಲಿ ಮೈಸೂರು ದಸರಾ ಉದ್ಘಾಟಿಸಿದ್ದರು.
ಈ ವೇಳೆ ಭಾಷಣ ಮಾಡಿದ್ದ ನಿಸಾರ್ ಅಹಮದ್, "ಹಜ್ ಮುಸ್ಲಿಮರಿಗೆ, ಕುಂಭಮೇಳ ಹಿಂದೂಗಳಿಗೆ, ಆದರೆ, ಮೈಸೂರು ದಸರಾ, ಎಲ್ಲಾ ಜಾತಿ ಧರ್ಮದವರಿಗೆ" ಎಂದಿದ್ದರು.

"ನನ್ನ ಹಲವು ಕಾಲದ ಮಿತ್ರರೂ ಆಗಿರುವ, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೃಪೆಯಿಟ್ಟು ನನಗೆ ಈ ಅವಕಾಶವನ್ನು ಕೊಟ್ಟಿದ್ದಾರೆ. ತಾಯಿ ಚಾಮುಂಡಿಯ ಮುಂದೆ ನಿಂತು ಮಾತನಾಡುವ ನೈತಿಕ ಸ್ಥೈರ್ಯ ನನಗೆ ಇದೆಯೋ ಇಲ್ಲವೋ ಗೊತ್ತಿಲ್ಲ" ಎಂದು ನಿಸಾರ್ ಅಹಮದ್ ಹೇಳಿದ್ದರು.
"ವಿಜಯನಗರ ಕಾಲದಿಂದ, ನಾಲ್ಕುನೂರು ವರ್ಷಗಳ ಇತಿಹಾಸವಿರುವ ಈ ಉತ್ಸವವನ್ನು ಉದ್ಘಾಟಿಸಲು ನನಗೆ ಆಹ್ವಾನ ಬಂದಾಗ, ನನಗೆ ಭಯವಾಗಿತ್ತು. ಯಾವುದೋ ಕಾಲದ ಸಂಸ್ಕಾರ ನನ್ನಲ್ಲಿ ಉಳಿದಿದ್ದರಿಂದ, ಈ ಅವಕಾಶ ನನಗೆ ಸಿಕ್ಕಿತು' ಎಂದು ನಿಸಾರ್ ಅಹಮದ್ ಹೇಳಿದ್ದರು.

"ನನ್ನ ಜೀವಮಾನದಲ್ಲಿ ನನಗೆ ಸಿಕ್ಕ ಅತ್ಯಂತ ಸ್ಮರಣೀಯ ದಿನ ಇದಾಗಿದೆ. ತಾಯಿ ಚಾಮುಂಡಿ ದೊಡ್ಡ ಶಕ್ತಿಯವಳು. ಅವಳ ಸನ್ನಿಧಾನದಲ್ಲಿ ನನಗೆ ಸಿಕ್ಕ ಈ ಗೌರವವನ್ನು ಎಂದಿಗೂ ಮರೆಯಲಾರೆ" ಎಂದು ನಿಸಾರ್ ಅಹಮದ್, ಭಾವೋದ್ವೇಗಕ್ಕೊಳಗಾಗಿ ಹೇಳಿದ್ದರು.
"ದಸರಾ ಸರಕಾರೀ ವ್ಯಾಪ್ತಿಯಲ್ಲಿ ನಡೆಯುವ ಕಾರ್ಯಕ್ರಮ. ಇದು ಮುಂದಿನ ದಿನಗಳಲ್ಲಿ ಇನ್ನೂ ಚೆನ್ನಾಗಿ ಬೆಳೆಯಲಿ. ಹಜ್ ನಲ್ಲಿ ಮುಸ್ಲಿಮರು, ಕುಂಭ ಮೇಳದಲ್ಲಿ ಹಿಂದುಗಳು. ಆದರೆ ಮೈಸೂರು ದಸರಾದಲ್ಲಿ ಮಾತ್ರ ಧರ್ಮಗಳ ಮಿತಿಯೇ ಇಲ್ಲದೆ ಎಲ್ಲರೂ ತಾಯಿ ಚಾಮುಂಡಿ ದೇವಿ ಆಶೀರ್ವಾದ ಪಡೆದು ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸುತ್ತಾರೆ" ಎಂದು ನಿಸಾರ್ ಅಹಮದ್ ಹೇಳಿದ್ದರು.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications