ಪರಿಷತ್ ಚುನಾವಣೆ: ಅಭ್ಯರ್ಥಿ ಹಿಂದಕ್ಕೆ, ಲಕ್ಷ್ಮಣ ಸವದಿ ಹಾದಿ ಸುಗಮ
ಬೆಂಗಳೂರು, ಫೆಬ್ರವರಿ 15: ವಿಧಾನಪರಿಷತ್ ಚುನಾವಣೆ ಕಣದಲ್ಲಿದ್ದ ಪಕ್ಷೇತರ ಅಭ್ಯರ್ಥಿ ಅನಿಲ್ ಕುಮಾರ್ ಅವರು ಕಣದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದು, ಡಿಸಿಎಂ ಲಕ್ಷ್ಮಣ ಸವದಿ ಹಾದಿ ಸುಗಮವಾಗಿದೆ.
ಚುನಾವಣೆಯಲ್ಲಿ ಸೋತರೂ ಮಂತ್ರಿಯಾಗಿರುವ ಲಕ್ಷ್ಮಣ ಸವದಿ ಅವರು ನಿಯಮಗಳ ಅನುಸಾರ ಮಂತ್ರಿಯಾದ ಆರು ತಿಂಗಳ ಒಳಗಾಗಿ ಚುನಾವಣೆ ಗೆಲ್ಲಲೇ ಬೇಕಾಗಿತ್ತು. ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಘೋಷಣೆಯಾದ ಚುನಾವಣೆಗೆ ನಾಮಪತ್ರ ಸಲ್ಲಿದ್ದರು.
ವಿಧಾನಪರಿಷತ್ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಆಗುವ ಕನಸು ಕಾಣುತ್ತಿದ್ದ ಲಕ್ಷ್ಮಣ ಸವದಿ ವಿರುದ್ಧವಾಗಿ ಅನಿಲ್ ಕುಮಾರ್ ಅವರು ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದರು. ಇದು ಲಕ್ಷ್ಮಣ ಸವದಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.

ಸೋತರೂ ಮಂತ್ರಿ ಸ್ಥಾನ ಗಿಟ್ಟಿಸಿಕೊಂಡ ಲಕ್ಷ್ಮಣ ಸವದಿ ಮೇಲೆ ಈಗಾಗಲೇ ಬಿಜೆಪಿ ಒಳಗೆ ಕೆಲವರು ಅಸಮಾಧಾನ ಹೊಂದಿದ್ದರು. ಚುನಾವಣೆ ನಡೆದರೆ ನಮ್ಮವರೇ ನನ್ನನ್ನು ಸೋಲಿಸುವ ಸಾಧ್ಯತೆ ಇದೆ ಎಂದು ಅರಿತ ಲಕ್ಷ್ಮಣ ಸವದಿ ಅನಿಲ್ ಕುಮಾರ್ ಅವರು ನಾಮಪತ್ರ ಹಿಂಪಡೆಯುವಂತೆ ಮಾಡಲು ಸತತ ಪ್ರಯತ್ನ ಮಾಡಿದ್ದರು.
ಸ್ವಾಮೀಜಿಗಳು, ಕೆಲವು ಹಿರಿಯ ನಾಯಕರುಗಳಿಂದ ಹೇಳಿಸಿದ ಬಳಿಕ ಈಗ ಅನಿಲ್ ಕುಮಾರ್ ಅವರು ನಾಮಪತ್ರ ಹಿಂಪಡೆದುಕೊಳ್ಳಲು ನಿರ್ಧರಿಸಿದ್ದಾರೆ. ಆ ಮೂಲಕ ಲಕ್ಷ್ಮಣ ಸವದಿ ಹಾದಿ ಸುಗಮವಾಗಿದೆ.
ಪೂರ್ವನಿಗದಿಯಂತೆ ಫೆಬ್ರವರಿ 17 ರಂದು ವಿಧಾನಪರಿಷತ್ಗೆ ಚುನಾವಣೆ ನಡೆಯಬೇಕಿತ್ತು. ಆದರೆ ಅನಿಲ್ ಕುಮಾರ್ ಅವರು ನಾಮಪತ್ರ ಹಿಂಪಡೆದರೆ ಮತದಾನ ನಡೆಯದೇ ಲಕ್ಷ್ಮಣ ಸವದಿ ಅವರನ್ನು ವಿಜೇತರೆಂದು ಘೋಷಿಸುವ ಸಾಧ್ಯತೆ ಇದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications