ಪರಿಷತ್ ಚುನಾವಣೆ: ಅಭ್ಯರ್ಥಿ ಹಿಂದಕ್ಕೆ, ಲಕ್ಷ್ಮಣ ಸವದಿ ಹಾದಿ ಸುಗಮ
ಬೆಂಗಳೂರು, ಫೆಬ್ರವರಿ 15: ವಿಧಾನಪರಿಷತ್ ಚುನಾವಣೆ ಕಣದಲ್ಲಿದ್ದ ಪಕ್ಷೇತರ ಅಭ್ಯರ್ಥಿ ಅನಿಲ್ ಕುಮಾರ್ ಅವರು ಕಣದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದು, ಡಿಸಿಎಂ ಲಕ್ಷ್ಮಣ ಸವದಿ ಹಾದಿ ಸುಗಮವಾಗಿದೆ.
ಚುನಾವಣೆಯಲ್ಲಿ ಸೋತರೂ ಮಂತ್ರಿಯಾಗಿರುವ ಲಕ್ಷ್ಮಣ ಸವದಿ ಅವರು ನಿಯಮಗಳ ಅನುಸಾರ ಮಂತ್ರಿಯಾದ ಆರು ತಿಂಗಳ ಒಳಗಾಗಿ ಚುನಾವಣೆ ಗೆಲ್ಲಲೇ ಬೇಕಾಗಿತ್ತು. ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಘೋಷಣೆಯಾದ ಚುನಾವಣೆಗೆ ನಾಮಪತ್ರ ಸಲ್ಲಿದ್ದರು.
ವಿಧಾನಪರಿಷತ್ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಆಗುವ ಕನಸು ಕಾಣುತ್ತಿದ್ದ ಲಕ್ಷ್ಮಣ ಸವದಿ ವಿರುದ್ಧವಾಗಿ ಅನಿಲ್ ಕುಮಾರ್ ಅವರು ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದರು. ಇದು ಲಕ್ಷ್ಮಣ ಸವದಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.

ಸೋತರೂ ಮಂತ್ರಿ ಸ್ಥಾನ ಗಿಟ್ಟಿಸಿಕೊಂಡ ಲಕ್ಷ್ಮಣ ಸವದಿ ಮೇಲೆ ಈಗಾಗಲೇ ಬಿಜೆಪಿ ಒಳಗೆ ಕೆಲವರು ಅಸಮಾಧಾನ ಹೊಂದಿದ್ದರು. ಚುನಾವಣೆ ನಡೆದರೆ ನಮ್ಮವರೇ ನನ್ನನ್ನು ಸೋಲಿಸುವ ಸಾಧ್ಯತೆ ಇದೆ ಎಂದು ಅರಿತ ಲಕ್ಷ್ಮಣ ಸವದಿ ಅನಿಲ್ ಕುಮಾರ್ ಅವರು ನಾಮಪತ್ರ ಹಿಂಪಡೆಯುವಂತೆ ಮಾಡಲು ಸತತ ಪ್ರಯತ್ನ ಮಾಡಿದ್ದರು.
ಸ್ವಾಮೀಜಿಗಳು, ಕೆಲವು ಹಿರಿಯ ನಾಯಕರುಗಳಿಂದ ಹೇಳಿಸಿದ ಬಳಿಕ ಈಗ ಅನಿಲ್ ಕುಮಾರ್ ಅವರು ನಾಮಪತ್ರ ಹಿಂಪಡೆದುಕೊಳ್ಳಲು ನಿರ್ಧರಿಸಿದ್ದಾರೆ. ಆ ಮೂಲಕ ಲಕ್ಷ್ಮಣ ಸವದಿ ಹಾದಿ ಸುಗಮವಾಗಿದೆ.
ಪೂರ್ವನಿಗದಿಯಂತೆ ಫೆಬ್ರವರಿ 17 ರಂದು ವಿಧಾನಪರಿಷತ್ಗೆ ಚುನಾವಣೆ ನಡೆಯಬೇಕಿತ್ತು. ಆದರೆ ಅನಿಲ್ ಕುಮಾರ್ ಅವರು ನಾಮಪತ್ರ ಹಿಂಪಡೆದರೆ ಮತದಾನ ನಡೆಯದೇ ಲಕ್ಷ್ಮಣ ಸವದಿ ಅವರನ್ನು ವಿಜೇತರೆಂದು ಘೋಷಿಸುವ ಸಾಧ್ಯತೆ ಇದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications