ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಷತ್ ಚುನಾವಣೆ: ಅಭ್ಯರ್ಥಿ ಹಿಂದಕ್ಕೆ, ಲಕ್ಷ್ಮಣ ಸವದಿ ಹಾದಿ ಸುಗಮ

|
Google Oneindia Kannada News

ಬೆಂಗಳೂರು, ಫೆಬ್ರವರಿ 15: ವಿಧಾನಪರಿಷತ್ ಚುನಾವಣೆ ಕಣದಲ್ಲಿದ್ದ ಪಕ್ಷೇತರ ಅಭ್ಯರ್ಥಿ ಅನಿಲ್ ಕುಮಾರ್ ಅವರು ಕಣದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದು, ಡಿಸಿಎಂ ಲಕ್ಷ್ಮಣ ಸವದಿ ಹಾದಿ ಸುಗಮವಾಗಿದೆ.

ಚುನಾವಣೆಯಲ್ಲಿ ಸೋತರೂ ಮಂತ್ರಿಯಾಗಿರುವ ಲಕ್ಷ್ಮಣ ಸವದಿ ಅವರು ನಿಯಮಗಳ ಅನುಸಾರ ಮಂತ್ರಿಯಾದ ಆರು ತಿಂಗಳ ಒಳಗಾಗಿ ಚುನಾವಣೆ ಗೆಲ್ಲಲೇ ಬೇಕಾಗಿತ್ತು. ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಘೋಷಣೆಯಾದ ಚುನಾವಣೆಗೆ ನಾಮಪತ್ರ ಸಲ್ಲಿದ್ದರು.

ವಿಧಾನಪರಿಷತ್ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಆಗುವ ಕನಸು ಕಾಣುತ್ತಿದ್ದ ಲಕ್ಷ್ಮಣ ಸವದಿ ವಿರುದ್ಧವಾಗಿ ಅನಿಲ್ ಕುಮಾರ್ ಅವರು ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದರು. ಇದು ಲಕ್ಷ್ಮಣ ಸವದಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.

Legislative Assembly Election: Candidate Took Nomination Back

ಸೋತರೂ ಮಂತ್ರಿ ಸ್ಥಾನ ಗಿಟ್ಟಿಸಿಕೊಂಡ ಲಕ್ಷ್ಮಣ ಸವದಿ ಮೇಲೆ ಈಗಾಗಲೇ ಬಿಜೆಪಿ ಒಳಗೆ ಕೆಲವರು ಅಸಮಾಧಾನ ಹೊಂದಿದ್ದರು. ಚುನಾವಣೆ ನಡೆದರೆ ನಮ್ಮವರೇ ನನ್ನನ್ನು ಸೋಲಿಸುವ ಸಾಧ್ಯತೆ ಇದೆ ಎಂದು ಅರಿತ ಲಕ್ಷ್ಮಣ ಸವದಿ ಅನಿಲ್ ಕುಮಾರ್ ಅವರು ನಾಮಪತ್ರ ಹಿಂಪಡೆಯುವಂತೆ ಮಾಡಲು ಸತತ ಪ್ರಯತ್ನ ಮಾಡಿದ್ದರು.

ಸ್ವಾಮೀಜಿಗಳು, ಕೆಲವು ಹಿರಿಯ ನಾಯಕರುಗಳಿಂದ ಹೇಳಿಸಿದ ಬಳಿಕ ಈಗ ಅನಿಲ್ ಕುಮಾರ್ ಅವರು ನಾಮಪತ್ರ ಹಿಂಪಡೆದುಕೊಳ್ಳಲು ನಿರ್ಧರಿಸಿದ್ದಾರೆ. ಆ ಮೂಲಕ ಲಕ್ಷ್ಮಣ ಸವದಿ ಹಾದಿ ಸುಗಮವಾಗಿದೆ.

ಪೂರ್ವನಿಗದಿಯಂತೆ ಫೆಬ್ರವರಿ 17 ರಂದು ವಿಧಾನಪರಿಷತ್‌ಗೆ ಚುನಾವಣೆ ನಡೆಯಬೇಕಿತ್ತು. ಆದರೆ ಅನಿಲ್ ಕುಮಾರ್ ಅವರು ನಾಮಪತ್ರ ಹಿಂಪಡೆದರೆ ಮತದಾನ ನಡೆಯದೇ ಲಕ್ಷ್ಮಣ ಸವದಿ ಅವರನ್ನು ವಿಜೇತರೆಂದು ಘೋಷಿಸುವ ಸಾಧ್ಯತೆ ಇದೆ.

English summary
Karnataka legislative assembly election: Independent candidate Anil Kumar set to take back his nomination. It will help Lakshman Savadi to elect unanimously.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X