ಶಿಕ್ಷಕ, ಪದವೀಧರ ಕ್ಷೇತ್ರದ ಚುನಾವಣೆ: ಮತದಾನದ ಅವಧಿ ವಿಸ್ತರಣೆಗೆ ಮನವಿ
ಬೆಂಗಳೂರು, ಜೂ.3: ಶಿಕ್ಷಕ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯ ಮತದಾನದ ಅವಧಿಯನ್ನು ಎರಡು ತಾಸುಗಳ ಕಾಲ ವಿಸ್ತರಣೆ ಮಾಡುವಂತೆ ರಾಜ್ಯ ಬಿಜೆಪಿ ವತಿಯಿಂದ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಇಂದು ಮನವಿ ಸಲ್ಲಿಸಲಾಯಿತು. ಪಕ್ಷದ ರಾಜ್ಯ ವಕ್ತಾರ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮತ್ತು ಚುನಾವಣಾ ಆಯೋಗ ವಿಭಾಗದ ರಾಜ್ಯ ಸಂಚಾಲಕ ದತ್ತಗುರು ಹೆಗಡೆ ಅವರು ಈ ಕುರಿತು ಮನವಿ ಸಲ್ಲಿಸಿದರು.
ಇದೇ ತಿಂಗಳು 13 ರಂದು ಶಿಕ್ಷಕರ ಎರಡು ಕ್ಷೇತ್ರಕ್ಕೆ ಹಾಗೂ ಪದವೀಧರರ ಎರಡು ಕ್ಷೇತ್ರಕ್ಕೆ ಚುನಾವಣೆ ಘೋಷಣೆ ಆದ ಹಿನ್ನೆಲೆಯಲ್ಲಿ ಈ ಕೆಳಗಿನ ಸಾಂದರ್ಭಿಕ ಸಮಸ್ಯೆಗಳಿಂದ ಮತದಾನದ ಅವಧಿ ವಿಸ್ತರಣೆ ಸೂಕ್ತ ಅನ್ನಿಸುತ್ತದೆ ಎಂದು ಗಮನ ಸೆಳೆಯಲಾಯಿತು.
ಎಲ್ಲಾ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯ ಮತದಾರರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಶಿಕ್ಷಕರೂ ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೊಂದಾವಣೆ ಮಾಡಿಕೊಂಡಿದ್ದು, ಹಲವು ಶಿಕ್ಷಕರು ಪದವೀಧರ ಕ್ಷೇತ್ರದ ಅಭ್ಯರ್ಥಿಗೆ ಮತ ಚುನಾವಣೆಯ ಅರ್ಹತೆ ಹೊಂದಿದ್ದು, ಶಿಕ್ಷಕ ಕ್ಷೇತ್ರದ ಅಭ್ಯರ್ಥಿಗೆ ಮತ್ತು ಪದವೀಧರ ಕ್ಷೇತ್ರದ ಅಭ್ಯರ್ಥಿಗೆ ಮತ ಚಲಾಯಿಸುತ್ತಾರೆ. ರಾಜ್ಯದ ಹಲವು ಮತಗಟ್ಟೆಗಳ ಕೋಣೆಯಲ್ಲಿ ಶಿಕ್ಷಕ ಮತ್ತು ಪದವೀಧರ ಕ್ಷೇತ್ರದ ಅಭ್ಯರ್ಥಿಗಳಿಗೆ ಮತ ಹಾಕಬೇಕಾದ ಸಂದರ್ಭದಲ್ಲಿ ಒಬ್ಬ ಮತದಾರ ಮತದಾನದ ಕೋಣೆಯಿಂದ ಹೊರ ಬರುವ ಸಮಯ ವಿಳಂಬವಾಗುತ್ತದೆ ಎಂದು ಮನವಿ ತಿಳಿಸಿದೆ.

ಕೋವಿಡ್ ನಿಯಮಾನುಸಾರ ಮತದಾನ ಮಾಡುವುದು ಅನಿವಾರ್ಯವೆನ್ನುವುದು ಹಿಂದಿನ ಅನುಭವದಿಂದ ತಿಳಿಯುವುದು ಬಹಳ ಮುಖ್ಯ. ಹಲವು ಕಡೆ ಮತಗಟ್ಟೆಗಳು ಮತದಾರನ ಊರು-ಮನೆಯಿಂದ 15-20 ಕಿಲೋ ಮೀಟರ್ ದೂರವಿದ್ದು, ಮತದಾನಕ್ಕೆ ಬರಲು ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದೆ. ಶಿಕ್ಷಕರಲ್ಲದವರು, ಪದವೀಧರರಲ್ಲದವರು ನಕಲಿ (ಡುಪ್ಲಿಕೇಟ್) ಮತದಾರರು ಮತದಾನಕ್ಕೆ ಬರುತ್ತಾರೆ ಎಂಬುದನ್ನು ಹಿಂದಿನ ಚುನಾವಣೆಯ ಅನುಭವ ತಿಳಿಸಿದೆ. ಕಾರಣ ಪ್ರತಿಯೊಬ್ಬ ಮತದಾನ ಅರ್ಹತೆಯನ್ನು ಪರಿಶೀಲಿಸಿ ಮತದಾನ ಮಾಡಲು ಅನುವು ಮಾಡಿಕೊಡಬೇಕಾದ ಅನಿವಾರ್ಯತೆಯಿದೆ ಎಂದು ತಿಳಿಸಲಾಗಿದೆ.
ಶಿಕ್ಷಕ ಅಭ್ಯರ್ಥಿಗೆ ಹಾಗೂ ಪದವೀಧರ ಕ್ಷೇತ್ರದ ಅಭ್ಯರ್ಥಿಗೆ ಮತ ಹಾಕಲು ಎರಡು ಬ್ಯಾಲೆಟ್ ಪೇಪರ್ ಕೊಡಲಾಗುತ್ತದೆ. ಈ ಕೆಲಸಕ್ಕೂ ಸಮಯ ಬೇಕಾಗುತ್ತದೆ. ಎರಡೂ ಕ್ಷೇತ್ರದ ಅಭ್ಯರ್ಥಿಗಳಿಗೆ ಮತದಾನ ಮಾಡುವ ಮತದಾರರು ಎರಡು ಬೆರಳುಗಳಿಗೆ (ತೋರ ಬೆರಳು ಹಾಗೂ ಮಧ್ಯದ ಬೆರಳು) ಶಾಯಿ ಹಾಕಲಾಗುವುದು ಎಂದು ತಿಳಿದಿದೆ. ಆದರೆ ಶಿಕ್ಷಕ ಕ್ಷೇತ್ರಕ್ಕೆ ಮತ ಚುನಾಯಿಸಿದ ಮತದಾರನಿಗೆ ಯಾವ ಬೆರಳಿಗೆ ಪದವೀಧರ ಕ್ಷೇತ್ರದ ಅಭ್ಯರ್ಥಿಗೆ ಮತ ಹಾಕಿದವರು ಯಾವ ಬೆರಳಿಗೆ ಶಾಯಿ ಹಾಕಿಸಿಕೊಳ್ಳಬೇಕು ಎನ್ನುವ ತಿಳುವಳಿಕೆ ಮತದಾರನಿಗೆ ಲಭ್ಯವಿಲ್ಲ ಎಂದು ವಿವರಿಸಲಾಗಿದೆ.

ಎರಡು ತಾಸು ವಿಸ್ತರಿಸಿ:
Recommended Video
ಸದ್ಯ ಚುನಾವಣಾ ವೇಳಾಪಟ್ಟಿ ಪ್ರಕಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದನಾ ನಡೆಯುತ್ತದೆ. ಆದರೆ, ಮೇಲಿನ ಎಲ್ಲಾ ಸಂಗತಿಯನ್ನು ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಸೂಕ್ತ ತಿಳುವಳಿಕೆ ನೀಡಬೇಕು ಹಾಗೂ ಮತದಾನದ ಅವಧಿ ವಿಸ್ತರಣೆ ಮಾಡುವುದು ಅತ್ಯಂತ ನ್ಯಾಯಯುತ ಎಂದು ತಿಳಿಸುತ್ತಾ, ಈ ದಿಸೆಯಲ್ಲಿ ಯೋಚಿಸಿ ಹೆಚ್ಚಿನ ಸಮಯ ಅಂದರೆ ಬೆಳಿಗ್ಗೆ 8 ಗಂಟೆಯಿಂದ ಸಾಯಂಕಾಲ 6 ಗಂಟೆಯ ವರೆಗೆ ವಿಸ್ತರಿಸಬೇಕು ಎಂದು ಮನವಿ ಮಾಡಲಾಗಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications