ಎಂಎಲ್ಸಿ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಜಯ, ಎಸ್ಆರ್ ಪಾಟೀಲ್ ವಿಶ್ವಾಸ
ಬಾಗಲಕೋಟೆ, ಡಿಸೆಂಬರ್, 28: ವಿಧಾನ ಪರಿಷತ್ ಚುನಾವಣೆಯಲ್ಲಿ ಜಯಶಾಲಿಯಾಗುವ ಭರವಸೆ ವ್ಯಕ್ತಪಡಿಸಿದ ಮಾಹಿತಿ ತಂತ್ರಜ್ಞಾನ ಸಚಿವ ಎಸ್ಆರ್ ಪಾಟೀಲ್ ಈ ಬಾರಿ ಕಾಂಗ್ರೆಸ್ ಪಕ್ಷ ಜಯಬೇರಿ ಸಾಧಿಸಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೀಳಗಿ ಪಟ್ಟಣ ಪಂಚಾಯತಿ ಮತಗಟ್ಟೆಯಲ್ಲಿ ಡಿಸೆಂಬರ್ 27ರ ಭಾನುವಾರ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಮತ ಚಲಾವಣೆ ಮಾಡಿ ಮಾತನಾಡಿದ ಸಚಿವ ಎಸ್ಆರ್ ಪಾಟೀಲ್, ವಿಜಯಪುರ ಜಿಲ್ಲೆಯ ಜನ ಈ ಹಿಂದಿನ ಚುನಾವಣೆಗಳಲ್ಲಿ ಗೆಲ್ಲಿಸಿದ್ದಾರೆ. ಜನರ ಪ್ರೀತಿ-ವಿಶ್ವಾಸಕ್ಕೆ ಎಂದೂ ವ್ಯತ್ಯಯ ಉಂಟಾಗದಂತೆ ನಡೆದುಕೊಂಡಿದ್ದೇನೆ. ಮುಂದೆಯೂ ಅವರ ನಿರೀಕ್ಷೆ ಸುಳ್ಳು ಮಾಡುವುದಿಲ್ಲ. ಈ ಬಾರಿ ಅವಳಿ ಜಿಲ್ಲೆಯ ಜನ ಇನ್ನೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುತ್ತಾರೆ ಎಂದು ಸಚಿವ ಪಾಟೀಲ್ ಹೇಳಿದರು.[ಮತಪತ್ರ ಪ್ರದರ್ಶಿಸಿ ಗೋಜಿಗೆ ಸಿಕ್ಕಿದ ಜಿಲ್ಲಾ ಪಂಚಾಯತಿ ಸದಸ್ಯ]

ಬಾಗಲಕೋಟೆಯನ್ನೂ ಒಳಗೊಂಡ ದ್ವಿಸದಸ್ಯತ್ವ ಹೊಂದಿರುವ ವಿಜಯಪುರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತತವಾಗಿ ಮೂರುಬಾರಿ ಆಯ್ಕೆಯಾಗಿದ್ದ ಪಾಟೀಲರು ನಾಲ್ಕನೇ ಬಾರಿ ಪುನರಾಯ್ಕೆ ಬಯಸಿ ಚುನಾವಣಾ ಕಣದಲ್ಲಿದ್ದಾರೆ. ಡಿಸೆಂಬರ್ 30ರಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.[ನನ್ನನ್ನು ಗೆಲ್ಲಿಸಿ, ಸರ್ಕಾರದ ಬೆವರಿಳಿಸುತ್ತೇನೆ: ವಾಟಾಳ್]
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಜನರಲ್ಲಿ, ಸರ್ಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಹಾಗಾಗಿ ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುತ್ತಾರೆ. ಇದರಲ್ಲಿ ಯಾರಿಗೂ ಅನುಮಾನವೇ ಬೇಡ ಎಂದು ಹೇಳಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications