ಪರಿಷತ್ ಫೈಟ್ : ಉಡುಪಿಯಲ್ಲಿ ಕಾಂಗ್ರೆಸ್ಗೆ ಬಂಡಾಯದ ಬಿಸಿ
ಉಡುಪಿ, ಡಿಸೆಂಬರ್ 07 : ವಿಧಾನ ಪರಿಷತ್ ಚುನಾವಣೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರತಾಪಚಂದ್ರ ಶೆಟ್ಟಿ. ಆದರೆ, ಕಾಂಗ್ರೆಸ್ ನಾಯಕರಾದ ಜಯಪ್ರಕಾಶ್ ಹೆಗ್ಡೆ ಮತ್ತು ಭುಜಂಗ ಶೆಟ್ಟಿಯವರು ಸೋಮವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಟಿಕೆಟ್ ಹಂಚಿಕೆ ನಂತರ ಎದ್ದಿರುವ ಅಸಮಾಧಾನ ಕ್ಷೇತ್ರದಲ್ಲಿ ಇನ್ನೂ ಶಮನವಾಗಿಲ್ಲ. ಅಭ್ಯರ್ಥಿ ಬದಲಾಗದೇ ಯಾವುದೇ ಕಾರಣಕ್ಕೆ ನಮ್ಮ ನಾಮಪತ್ರ ವಾಪಾಸ್ ಪಡೆಯುವುದಿಲ್ಲ ಎಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳಾದ ಜಯಪ್ರಕಾಶ್ ಹೆಗ್ಡೆ ಹಾಗೂ ಭುಜಂಗ ಶೆಟ್ಟಿ ಅವರು ಪಟ್ಟು ಹಿಡಿದು ಕುಳಿತಿದ್ದಾರೆ. [ಪಕ್ಷೇತರರಾಗಿ ಜಯಪ್ರಕಾಶ್ ಹೆಗ್ಡೆ ಸ್ಪರ್ಧೆ]

ಸೋಮವಾರ ಮಧ್ಯಾಹ್ನ ಬ್ರಹ್ಮಾವರದಿಂದ ಬೃಹತ್ ಕಾರ್ಯಕರ್ತರ ಜಾಥಾ ಮೂಲಕ ಮಂಗಳೂರಿಗೆ ತೆರಳಿ ಉಭಯ ನಾಯಕರು ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಬದಲಾವಣೆ ಮಾಡಬೇಕು ಎಂದು ಉಭಯ ನಾಯಕರು ಒತ್ತಾಯಿಸಿದ್ದಾರೆ. [ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ]
ಅಭ್ಯರ್ಥಿಯನ್ನು ಬದಲಾವಣೆ ಮಾಡಲು ಇನ್ನೂ ಅವಕಾಶ ಇರುವುದರಿಂದ ಕಾದು ನೋಡುವ ತಂತ್ರಕ್ಕೆ ಜಯಪ್ರಕಾಶ್ ಹೆಗ್ಡೆಯವರು ಮೊರೆ ಹೋಗಿದ್ದಾರೆ. ಸ್ಥಳೀಯ ಆಡಳಿತದ ಪ್ರತಿನಿಧಿಗಳ ಅಪಾರ ಬೆಂಬಲಗಳಿಸಿರುವ ಹೆಗ್ಡೆಯವರು ನಾಮಪತ್ರ ವಾಪಸ್ ಪಡೆಯೋಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಉಡುಪಿಯಲ್ಲಿ ಮಾತನಾಡಿದ ಜಯಪ್ರಕಾಶ್ ಹೆಗ್ಡೆಯವರು 'ಪಕ್ಷದಲ್ಲಿ ನಿಷ್ಕ್ರೀಯವಾಗಿರುವ ಪ್ರತಾಪಚಂದ್ರ ಶೆಟ್ಟಿ ಅವರಿಗೆ ಹೈಕಮಾಂಡ್ ಟಿಕೆಟ್ ನೀಡುವ ಮೂಲಕ ಪಕ್ಷದ ನಿಷ್ಟಾವಂತರಿಗೆ ವಂಚನೆ ಮಾಡಿದೆ' ಎಂದು ಆರೋಪಿಸಿದ್ದಾರೆ.
ಭುಜಂಗಶೆಟ್ಟಿ ಅವರು, 'ಕಾಂಗ್ರೆಸ್ನಲ್ಲಿ ಯಾರೂ ಅಭ್ಯರ್ಥಿಗಳೇ ಇಲ್ಲವೇ ಎಂದು ಪ್ರಶ್ನಿಸಿದ್ದು, ತನಗೆ 16 ವರ್ಷ ಬರೀ ಭರವಸೆ ಕೊಟ್ಟು ಹೈಕಮಾಂಡ್ ಹಾಗೂ ಕಾಂಗ್ರೆಸ್ ನಾಯಕರು ವಂಚಿಸಿದ್ದಾರೆ' ಎಂದು ದೂರಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications