ನೈಸ್ ಅಕ್ರಮದ ತನಿಖೆ ಮಾಡಲಿದೆ ಸದನ ಸಮಿತಿ
ಬೆಂಗಳೂರು, ಜು.25 : ಎಲ್ಲಾ ಪಕ್ಷದ ಶಾಸಕರ ಒತ್ತಡಕ್ಕೆ ಮಣಿದಿರುವ ಸರ್ಕಾರ ಬುಹುಕೋಟಿ ಮೌಲ್ಯದ ನೈಸ್ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ನಿರ್ಧರಿಸಿದೆ. ನೈಸ್ ಅಕ್ರಮಗಳ ತನಿಖೆಗೆ ಸದನ ಸಮಿತಿ ರಚಿಸುವುದಾಗಿ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ವಿಧಾನಸಭೆಯಲ್ಲಿ ಗುರುವಾರ ತಿಳಿಸಿದ್ದಾರೆ.
ಎರಡು ದಿನಗಳಿಂದ ವಿಧಾನಸಭೆಯಲ್ಲಿ ನೈಸ್ ಕಂಪನಿ ಅಕ್ರಮಗಳ ಬಗ್ಗೆ ಚರ್ಚೆ ನಡೆಯುತ್ತಿತ್ತು. ರಸ್ತೆ, ಟೌನ್ ಶಿಪ್ಗಾಗಿ ಸಹಸ್ರಾರು ಕೋಟಿ ರೂ. ಮೌಲ್ಯದ ಭೂಮಿ ಪಡೆದಿರುವ ನಂದಿ ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ (ನೈಸ್) ಸಂಸ್ಥೆ ಭೂಮಿಯನ್ನು ಸದ್ಭಳಕೆ ಮಾಡಿಲ್ಲ ಎಂದು ಎಲ್ಲಾ ಪಕ್ಷದ ಶಾಸಕರು ಆರೋಪಿಸಿದ್ದರು.

ಗುರುವಾರದ ಕಲಾಪದಲ್ಲಿ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಈ ಕುರಿತು ಮಾತನಾಡಿ, ಪ್ರತಿಪಕ್ಷಗಳ ಬಹುತೇಕ ಶಾಸಕರು ನೈಸ್ ಕಂಪನಿಯ ಅಕ್ರಮಗಳನ್ನು ಎಳೆಎಳೆಯಾಗಿ ಬಿಡಿಸಿಟ್ಟು, ತನಿಖೆಗೆ ಆಗ್ರಹಿಸಿದ್ದಾರೆ. ಸಾರ್ವಜನಿಕರಲ್ಲೂ ಈ ಬಗ್ಗೆ ಹಲವಾರು ಅನುಮಾನಗಳಿವೆ ಎಂದು ಹೇಳಿದರು.
ವಿಧಾನಸಭೆಗೆ ನೈಸ್ ಸಂಸ್ಥೆಯ ಅಶೋಕ್ ಖೇಣಿ ತಮ್ಮಲ್ಲಿ ದಾಖಲೆಗಳಿದ್ದು, ಎಲ್ಲಾ ಸಂಶಯಗಳನ್ನೂ ಬಗೆಹರಿಸುವುದಾಗಿ ಕಡತವನ್ನು ತರುತ್ತಾರೆ. ಆದ್ದರಿಂದ ಎಲ್ಲಾ ಅನುಮಾನಗಳಿಗೆ ತೆರೆ ಎಳೆಯಲು ಸರ್ಕಾರ ಸದನ ಸಮಿತಿ ರಚಿಸಲು ತೀರ್ಮಾನಿಸಿದೆ ಎಂದು ಹೇಳಿದ ಸಚಿವರು, ಸಮಿತಿ ವಿವರವಾದ ವರದಿಯನ್ನು ನೀಡಲಿದೆ ಎಂದರು. [ಮತ್ತೆ ನೈಸ್ ರೋಡಿಗಿಳಿದ ದೇವೇಗೌಡರು]
ಯಾರ ಕೈಗೊಂಬೆಯಲ್ಲ : ಸರ್ಕಾರ ಮತ್ತು ಸದನ ಸಮಿತಿ ಯಾರ ಕೈಗೊಂಬೆಯಲ್ಲ. ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಯೋಜನೆಯಲ್ಲಿ ಅಕ್ರಮ ನಡೆದಿದ್ದರೆ, ಸತ್ಯ ಹೊರಬರಲಿ ಎಂಬ ಆಶಯದಿಂದ ಸದನ ಸಮಿತಿ ರಚಿಸಲಾಗಿದೆ ಎಂದು ಸಚಿವ ಮಹದೇವಪ್ಪ ಸ್ಪಷ್ಟಪಡಿಸಿದರು. [ಹೆಂಗಿತ್ತು ಸೋಂಪುರ ಗ್ರಾಮ ಹೇಗಾಯ್ತು ಗೊತ್ತಾ]
ನೈಸ್ ವಿವಾದದ ಕುರಿತು : ಬೆಂಗಳೂರು-ಮೈಸೂರು ಮಧ್ಯೆ ಸುಗಮ ಸಂಚಾರಕ್ಕೆ ರಸ್ತೆ ಯೋಜನೆ ಅನುಷ್ಠಾನಗೊಳಿಸಲು ನಂದಿ ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಕಂಪನಿ (ನೈಸ್) ಜತೆಗೆ 1997ರಲ್ಲಿ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿತ್ತು.
ಸರ್ಕಾರಿ ಭೂಮಿಯನ್ನು ಉಚಿತವಾಗಿ ಹಾಗೂ ರೈತರ ಭೂಮಿಯನ್ನು ಕೆಐಎಡಿಬಿಯಿಂದ ವಶಪಡಿಸಿಕೊಂಡು ಯೋಜನೆಗಾಗಿ ನೀಡುವ ಹೊಣೆಗಾರಿಕೆ ಸರ್ಕಾರದ ಮೇಲಿತ್ತು. ನಿಗದಿತ ಅವಧಿಯಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ, 30 ವರ್ಷಗಳ ಕಾಲ ನಿರ್ವಹಣೆ ಮಾಡುವುದು ನೈಸ್ ಸಂಸ್ಥೆಯ ಜವಾಬ್ದಾರಿಯಾಗಿತ್ತು.
ನಂತರ ಯೋಜನೆಯಲ್ಲಿ ಹಲವಾರು ಬದಲಾವಣೆಗಳಾದವು. ಪೆರಿಫೆರಿಲ್ ರಸ್ತೆ, ಬೆಂಗಳೂರು-ಮೈಸೂರು ರಸ್ತೆ ಅಕ್ಕ ಪಕ್ಕದಲ್ಲಿ ಟೌನ್ ಶಿಪ್ ನಿರ್ಮಾಣದ ಯೋಜನೆ ಪ್ರಸ್ತಾವನೆಯೂ ಈ ಯೋಜನೆಗೆ ಸೇರ್ಪಡೆಗೊಂಡಿತು. ಇದು ನಂತರ ದೊಡ್ಡ ವಿವಾದವಾಗಿದೆ.
ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಪಡೆದ ನೈಸ್ ಸಂಸ್ಥೆ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದೆ ಎಂಬುದು ಜನರ ಮತ್ತು ಶಾಸಕರ ಆರೋಪ. ಯೋಜನೆ ಇದುವರೆಗೂ ಪೂರ್ಣಗೊಂಡಿಲ್ಲ. ಈ ಮಧ್ಯೆ ನೈಸ್ ಕಂಪನಿ ನಿರ್ಮಿಸಿರುವ ಕೆಲವು ಕಿ.ಮೀ ರಸ್ತೆಗೆ ಹೆಚ್ಚಿನ ಟೋಲ್ ಸಂಗ್ರಹಣೆ ಮಾಡುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications