Lentil Price Hike: ಗ್ರಾಹಕರ ಜೇಬು ಸುಡುತ್ತಿದೆ ತೊಗರಿ ಬೇಳೆ: ದಿಢೀರ್ ಬೆಲೆ ಏರಿಕೆಗೆ, ಕಾರಣವೇನು
Lentil Price Hike: ಕರ್ನಾಟಕದಲ್ಲಿ ಬೇಸಿಗೆಗೆ ಮೊದಲೇ ತೊಗರಿ ಬೇಳೆ ಬೆಲೆ ಭರ್ಜರಿ ಹೆಚ್ಚಳವಾಗಿದೆ. ಮುಂದಿನ ದಿನಗಳಲ್ಲಿ ತೊಗರಿ ಬೇಳೆ ಬೆಲೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಬೇಸಿಗೆ ಪ್ರಾರಂಭವಾಗುವುದಕ್ಕಿಂತ ಮುಂಚೆಯೇ ಕರ್ನಾಟಕದಲ್ಲಿ ವಿವಿಧ ತಳಿಯ ತೊಗರಿ ಬೇಳೆ ಸೇರಿದಂತೆ ಬೇಳೆ, ಕಾಳುಗಳ ಬೆಲೆ ಹೆಚ್ಚಳವಾಗಿದೆ.
ಕರ್ನಾಟಕದಲ್ಲಿ ತೊಗರಿ ಬೇಳೆ ದರ ಏರಿಕೆಯಾಗಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ತೊಗರಿ ಬೇಳೆ ಬೆಲೆಯು 135 ರೂಪಾಯಿಯವರೆಗೆ ತಲುಪಿದೆ. ಬೇಸಿಗೆಯ ಆರಂಭಕ್ಕೂ ಮುನ್ನವೇ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ಮುಟ್ಟಿದಂತೆ ಆಗಿದೆ. ಕಲಬುರಗಿ, ವಿಜಯಪುರ ಸೇರಿದಂತೆ ವಿವಿಧ ಭಾಗದಲ್ಲಿ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಬೇಳೆಗೆ ಕ್ವಿಂಟಾಲ್ಗೆ 8,000 ರೂ. ನಿಗದಿಪಡಿಸಲಾಗಿದೆ. ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ ತೊಗರಿ ಬೇಳೆ ಬೆಲೆಯು ಕಳೆದ ಒಂದು ತಿಂಗಳ ಅವಧಿಯಲ್ಲೇ 1,300 ರೂಪಾಯಿಯಷ್ಟು ಹೆಚ್ಚಳವಾಗಿದೆ. ತೊಗರಿ ಬೇಳೆ ಬೆಲೆಯು ರೈತರಲ್ಲಿ ಮಂದಹಾಸ ಮೂಡಿಸಿದ್ದರೆ, ಗ್ರಾಹಕರಿಗೆ ಹೊರೆಯಾಗಿ ಬದಲಾಗಿದೆ.

ತೊಗರಿ ಬೇಳೆಯು ಕರ್ನಾಟಕದ ವಿವಿಧ ಭಾಗದಲ್ಲಿ ಪ್ರತಿ ಕೆಜಿಗೆ 110 ರೂಪಾಯಿಯಿಂದ 135 ರೂಪಾಯಿಗೆ ಹೆಚ್ಚಳವಾಗಿದೆ. ಕರ್ನಾಟಕ ಸರ್ಕಾರವು 2025 - 2026ನೇ ಸಾಲಿಗೆ ಪ್ರತಿ ಕ್ವಿಂಟಾಲ್ ತೊಗರಿಗೆ 7,550 ಕನಿಷ್ಠ ಬೆಂಬಲ ಬೆಲೆ ಹಾಗೂ 450 ರೂಪಾಯಿ ಹೆಚ್ಚುವರಿ ಪ್ರೋತ್ಸಾಹಧನ ಸೇರಿದಂತೆ ಒಟ್ಟು 8,000 ರೂಪಾಯಿ ನಿಗದಿಪಡಿಸಿದೆ. ತೊಗರಿ ಬೇಳೆಯ ಈ ಹಂಗಾಮಿನ ಕಟಾವು ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಅಂತಿಮ ಹಂತಕ್ಕೆ ಬಂದಿದೆ. 2025ರ ಡಿಸೆಂಬರ್ನಿಂದಲೇ ಆವಕ ಶುರುವಾಗಿದೆ.
ತೊಗರಿ ಬೇಳೆ ಬೆಲೆ ಹೆಚ್ಚಳಕ್ಕೆ ಕಾರಣವೇನು
ಇನ್ನು ತೊಗರಿ ಬೇಳೆ ಬೆಲೆಯು ಮಾರುಕಟ್ಟೆಯಲ್ಲಿ ಏಕಾಏಕಿ ಹೆಚ್ಚಳವಾಗಿರುವುದಕ್ಕೆ ಎರಡು ಕಾರಣಗಳಿವೆ. ಮೊದಲನೆಯದಾಗಿ ಈ ಬಾರಿ ತೊಗರಿ ಬೇಳೆ ಇಳುವರಿ ಕಡಿಮೆಯಾಗಿದೆ. ಅಲ್ಲದೇ ತೊಗರಿ ಬೇಳೆಗೆ ಈ ಬಾರಿ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆಯೂ ಇರುವುದರಿಂದ ಬೆಲೆ ಹೆಚ್ಚಳವಾಗುತ್ತಿದೆ. ಈಗಾಗಲೇ ವಿವಿಧ ಬೇಳೆಕಾಳುಗಳು ಹಾಗೂ ತರಕಾರಿಗಳ ಬೆಲೆಯೂ ಹೆಚ್ಚಳವಾಗಿದ್ದು, ಬೇಸಿಗೆಗೆ ಮೊದಲೇ ಗ್ರಾಹಕರ ಜೇಬು ಸುಡುತ್ತಿದೆ.
ತೊಗರಿ ಬೆಳೆಗೆ 12000 ಬೆಂಬಲ ಬೆಲೆ ನಿಗದಿಗೆ ಆಗ್ರಹ
ಇನ್ನು ಕರ್ನಾಟಕ ಸರ್ಕಾರವು 2025 - 2026ನೇ ಸಾಲಿನ ಬಜೆಟ್ನಲ್ಲಿ ತೊಗರಿ ಬೆಳೆಗಾರರಿಗೆ ಬಲ ತುಂಬುವ ಉದ್ದೇಶದಿಂದಾಗಿ ಹೆಚ್ಚುವರಿ ಪ್ರೋತ್ಸಾಹ ಧನವನ್ನು ನೀಡಿತ್ತು. ಕನಿಷ್ಠ ಬೆಂಬಲ ಬೆಲೆ ಯೋಜನೆಯ ಅಡಿಯಲ್ಲಿ ತೊಗರಿ ಬೇಳೆಯ ಪ್ರತಿ ಕ್ವಿಂಟಾಲ್ಗೆ 7,550 ರೂಪಾಯಿಯೊಂದಿಗೆ 450 ರೂಪಾಯಿ ಹೆಚ್ಚುವರಿ ಪ್ರೋತ್ಸಾಹ ಧನ ನಿಗದಿ ಮಾಡಲಾಗಿತ್ತು. ಅಲ್ಲದೇ ಇದಕ್ಕಾಗಿ ಬರೋಬ್ಬರಿ 138 ಕೋಟಿ ರೂಪಾಯಿ ಅನುದಾನ ಮೀಸಲಿರಿಸಿರುವುದಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು. ರೈತರು ಕಳೆದ ವರ್ಷವೇ ತೊಗರಿ ಬೇಳೆಗೆ ಕನಿಷ್ಠ 12,000 ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದ್ದರು. ಈಗಲೂ ರೈತರು ಕರ್ನಾಟಕ ಸರ್ಕಾರವು ತೊಗರಿ ಬೇಳೆಗೆ ನಿಗದಿ ಮಾಡಿರುವ ಬೆಂಬಲ ಬೆಲೆ ಸಾಕಾಗುತ್ತಿಲ್ಲ. ಕನಿಷ್ಠ 12,000 ರೂ.ರಿಂದ 12,500 ರೂ. ನಿಗದಿ ಮಾಡಬೇಕು ಎಂದು ರೈತರು ಆಗ್ರಹಿಸುತ್ತಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications