Leopard in Nelamangala: ನೆಲಮಂಗಲದ ಮಂಜುನಾಥ್ ಎಂಬುವವರ ಜಮೀನಿನಲ್ಲಿ ಚಿರತೆ ಪತ್ತೆ
ಬೆಂಗಳೂರು ಜನವರಿ 17: ಬೆಂಗಳೂರಿನಲ್ಲಿ ಚಿರತೆ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದೆ. ಇಂದು ಒಂದು ಪ್ರದೇಶದಲ್ಲಿ ಕಾಣಿಸಿಕೊಂಡ ಚಿರತೆ ಮತ್ತೊಂದು ದಿನ ಇನ್ಯಾವುದೋ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಇದನ್ನು ಪತ್ತೆ ಮಾಡುವುದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಕಳೆದ ದಿನ ನೆಲಮಂಗಲದಲ್ಲಿ ಚಿರತೆ ದೃಶ್ಯ ಸೆರೆಯಾಗಿದೆ.
ಹೌದು.. ಕಳೆದ ದಿನ ರಾತ್ರಿ ನೆಲಮಂಗಲದ ಮಂಜುನಾಥ್ ಎಂಬುವವರ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಸಿಸಿಟಿವಿಯಲ್ಲಿ ಚಿರತೆ ದೃಶ್ಯ ಸೆರೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಮಧ್ಯರಾತ್ರಿ ಮಂಜುನಾಥ್ ಎಂಬುವವರ ಜಮೀನಿನಲ್ಲಿ ಚಿರತೆ ಚಲನವಲನ ಕಂಡು ಬಂದಿದೆ. ಆದರೆ ಈ ಚಿರತೆಯಿಂದ ಯಾವುದೇ ಹಾನಿಯಾಗಿಲ್ಲ. ಚಿರತೆ ಕಾಣಿಸಿಕೊಂಡಾಗಿನಿಂದಲೂ ಜನ ನಿದ್ದೆಗೆಡುವಂತಾಗಿದೆ. ಮನೆಯಿಂದ ಹೊರಬರಲು ಭಯಪಡುವಂತಾಗಿದೆ.

ಬನಶಂಕರಿಯಲ್ಲಿ ಚಿರತೆ ಪ್ರತ್ಯಕ್ಷ
ಇನ್ನೂ ಇತ್ತೀಚೆಗೆ ಬೆಂಗಳೂರಿನ ಬನಶಂಕರಿಯಲ್ಲಿ ಚಿರತೆ ಹಾಗೂ ಅದರ ಮರಿಗಳ ಓಟಾಟದ ದೃಶ್ಯ ಕಂಡು ಜನ ಬೆಚ್ಚಿಬಿದ್ದಿದ್ದಾರೆ. ಬನಶಂಕರಿಯ ಆರನೇ ಹಂತದ ಮೊದಲೇ ಬ್ಲಾಕ್ನ ತುರಹಳ್ಳಿ ಫಾರೆಸ್ಟ್ ಬಳಿ ತಾಯಿ ಮತ್ತು ಮರಿ ಚಿರತೆ ಪ್ರತ್ಯಕ್ಷವಾಗಿದೆ. ಇವುಗಳು ಈಗಾಗಲೇ ಹತ್ತಕ್ಕೂ ಹೆಚ್ಚು ನಾಯಿ, ಮೇಕೆ, ಕುರಿಯನ್ನು ಕೊಂದು ಹಾಕಿದೆ ಎಂದು ಸ್ಥಳಿಯರು ಆರೋಪ ಮಾಡಿದ್ದಾರೆ. ಈ ಹಿಂದೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಚಿರತೆ ದಾಳಿ ಮಾಡಿದ ವರದಿಯಾಗಿತ್ತು. ಹೀಗಾಗಿ ಸಂಜೆ ರಾತ್ರಿಯಾದರೆ ಸಾಕು ಜನ ಹೊರಬರಲು ಭಯಪಡುತ್ತಿದ್ದಾರೆ.
ಅಷ್ಟೇ ಅಲ್ಲದೆ ಮಕ್ಕಳು, ವಯಸ್ಸಾದವರು ಹಾಗೂ ಕೆಲಸದಿಂದ ಮನೆಗೆ ತೆರಳುವ ಉದ್ಯೋಗಿಗಳು ಹಗಲು ಹೊತ್ತಿನಲ್ಲಿ ಓಡಾಡಲು ಅಂಜುತ್ತಿದ್ದಾರೆ. ಆಟೋ ಚಾಲಕರು ಹಾಗೂ ಡೆಲಿವರಿ ಬಾಯ್ಸ್, ಕ್ಯಾಬ್ ಡ್ರೈವರ್ಸ್ ಸಂಜೆ ವೇಳೆ ಈ ಪ್ರದೇಶದಲ್ಲಿ ಓಡಾಡಲು ಹಿಂದೇಟು ಹಾಕುತ್ತಿದ್ದಾರೆ.
ಚಿರತೆಯ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದನ್ನು ಆಧರಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಮುಜಾಗೃತಾ ಕ್ರಮವಾಗಿ ಎಚ್ಚರಿಕೆಯನ್ನು ವಹಿಸಿದ್ದಾರೆ. ಚಿರತೆ ಅಥವಾ ಅದರ ಮಕ್ಕಳಿಗೆ ಸಾರ್ವಜನಿಕರು ಯಾವುದೇ ತೊಂದರೆಯನ್ನು ಕೊಡಬಾರದು. ಭಯಕ್ಕೆ ಅದರ ಮೇಲೆ ಕಲ್ಲು ಮುಂತಾದವುಗಳನ್ನು ಎಸೆಯುವುದನ್ನು ಮಾಡಿದರೆ, ಅದನ್ನು ಪ್ರಚೋದಿಸಿದಂತಾಗುತ್ತದೆ. ಅದರ ಪಾಡಿಗೆ ಅದನ್ನು ಬಿಟ್ಟರೆ, ಅದು ಅರಣ್ಯಕ್ಕೆ ವಾಪಸ್ ಹೋಗುತ್ತದೆ ಎಂದು ಅಧಿಕಾರಿಗಳು ಜನರಲ್ಲಿ ಮನವಿ ಮಾಡಿದ್ದಾರೆ.
ಮೈಸೂರು ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ
ಇನ್ನೂ ಮೈಸೂರು ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಸೆರೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಸ್ಥಗಿತಗೊಳಿಸಿದೆ. ಕಳೆದ ಹತ್ತು ದಿನಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಚಿರತೆ ಮಾತ್ರ ಯಾರ ಕಣ್ಣಿಗೂ ಕಾಣಿಸಿಕೊಂಡಿಲ್ಲ. ಡ್ರೋನ್ ಕ್ಯಾಮೆರಾ, ಕ್ಯಾಮೆರಾ ಟ್ರ್ಯಾಪ್, ಕ್ಯಾಂಪಸ್ನಲ್ಲಿರುವ ಸಿಸಿಟಿವಿ ಕ್ಯಾಮೆರಾ ಹಾಗೂ ಕೂಂಬಿಂಗ್ ಸಮಯದಲ್ಲಿ ಚಿರತೆಯ ಯಾವುದೇ ಚಲನವಲನ ಕಂಡು ಬಂದಿಲ್ಲ. ಹೀಗಾಗಿ ಕಾರ್ಯಚರಣೆಯನ್ನು ಸ್ಥಗಿತಗೊಳಿಸಲಾಗಿದೆ.
ಚಿರತೆ ಸೆರೆ ಕಾರ್ಯಾಚರಣೆಗಾಗಿ ಮೈಸೂರು ಪ್ರಾದೇಶಿಕ ವಿಭಾಗದ ಒಟ್ಟು 70 ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಚಿರತೆ ಕಾರ್ಯ ಪಡೆ, ಆನೆ ಕಾರ್ಯ ಪಡೆ ಸಿಬ್ಬಂದಿ ಹಾಗೂ 70 ಇನ್ಫೋಸಿಸ್ ಸಿಬ್ಬಂದಿಗಳನ್ನು ಒಳಗೊಂಡ 12 ಜಂಟಿ ತಂಡಗಳನ್ನು ರಚಿಸಲಾಗಿತ್ತು. ಈ ತಂಡವು ಕೂಂಬಿಂಗ್ ಕಮ್ ಡ್ರೈವಿಂಗ್ ಆಪರೇಷನ್ ಕೈಗೊಂಡು ಚಿರತೆ ಪತ್ತೆಗೆ ಶ್ರಮಿಸಿತ್ತು. ಆದರೆ ಚಿರತೆ ಚಲನವಲನವಾಗಲಿ, ಹೆಜ್ಜೆ ಗುರುತು ಆಗಲಿ ಅಥವಾ ಯಾವುದೇ ರೀತಿಯ ಕುರುಹುಗಳು ಪತ್ತೆಯಾಗಿಲ್ಲ. ಡಿಸೆಂಬರ್ 31ರಂದು ಕಾಣಿಸಿಕೊಂಡ ಚಿರತೆ ಈವರೆಗೂ ಹಿಡಿಯಲಾಗಿಲ್ಲ. ಹೀಗಾಗಿ ಸ್ಥಳೀಯರಲ್ಲಿ ಹಾಗೂ ಉದ್ಯೋಗಿಗಳಲ್ಲಿ ಆತಂಕ ಹೆಚ್ಚಾಗಿದೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications