HSRP: ಹೊಸ ನಂಬರ್ ಪ್ಲೇಟ್ ಅಳವಡಿಕೆಗೆ 45 ದಿನ ಮಾತ್ರ ಬಾಕಿ
ರಾಜ್ಯ ಸಾರಿಗೆ ಇಲಾಖೆಯು 2019ರ ಏಪ್ರಿಲ್ 1ರ ಮೊದಲು ನೋಂದಣಿಯಾಗಿರುವ ಸುಮಾರು ಎರಡು ಕೋಟಿ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್ಎಸ್ಆರ್ಪಿ) ಅಳವಡಿಸುವುದನ್ನು ಕಡ್ಡಾಯಗೊಳಿಸಿದೆ. ಆದರೆ ಇದಕ್ಕೆ ಜನ ಹೆಚ್ಚಿನ ಆಸಕ್ತಿ ತೋರಿಲ್ಲ ಎನ್ನುವುದು ಸ್ಪಷ್ಟವಾಗಿದ್ದು, ಶೇಕಡ 1 ರಷ್ಟು ವಾಹನ ಮಾಲೀಕರು ಅಂದರೆ ಈವರೆಗೆ 30 ಸಾವಿರ ವಾಹನ ಮಾಲೀಕರು ಮಾತ್ರ ನಂಬರ್ ಪ್ಲೇಟ್ಗಳನ್ನು ಬದಲಾವಣೆ ಮಾಡಿಕೊಂಡಿದ್ದಾರೆ.
ಆಗಸ್ಟ್ 17 ರಂದು, ರಾಜ್ಯ ಸರ್ಕಾರವು ಮೂಲ ಉಪಕರಣ ತಯಾರಕರ (OEM) ಅಧಿಕೃತ ಡೀಲರ್ಗಳಿಂದ ಪ್ರತ್ಯೇಕವಾಗಿ ಎಚ್ಎಸ್ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸುವ ಅಧಿಸೂಚನೆಯನ್ನು ಹೊರಡಿಸಿತು ನವೆಂಬರ್ 17 ಹೊಸ ರೀತಿಯ ನಂಬರ್ ಪ್ಲೇಟ್ ಪಡೆಯಲು ಕೊನೆಯ ದಿನಾಂಕವಾಗಿದೆ.

ನವೆಂಬರ್ 17ರ ನಂತರ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವ ವಾಹನಗಳಿಗೆ ದಂಡ ವಿಧಿಸಲಾಗುತ್ತದೆ. ಆದರೂ ಸಾರ್ವಜನಿಕರಿಗೆ ಈ ಬಗ್ಗೆ ಹೆಚ್ಚಿನ ಜಾಗೃತಿ ಇಲ್ಲದೇ ಇರುವುದು, ಸರ್ಕಾರ ಕೂಡ ಈ ಬಗ್ಗೆ ಹೆಚ್ಚಾಗಿ ಪ್ರಚಾರ ಮಾಡದೇ ಇರುವುದರಿಂದ ಹೆಚ್ಚಿನ ವಾಹನ ಮಾಲೀಕರು ನಂಬರ್ ಪ್ಲೇಟ್ ಬದಲಾಯಿಸಲು ಮನಸ್ಸು ಮಾಡಿಲ್ಲ ಎನ್ನಲಾಗಿದೆ.
2 ಕೋಟಿ ವಾಹನಗಳ ನಂಬರ್ ಪ್ಲೇಟ್ ಬದಲಾವಣೆ
ರಾಜ್ಯಾದ್ಯಂತ ಸುಮಾರು ಎರಡು ಕೋಟಿ ವಾಹನ ಮಾಲೀಕರು ಹೊಸ ನಂಬರ್ ಪ್ಲೇಟ್ಗಳನ್ನು ಪಡೆಯಲು ಸುಮಾರು 45 ದಿನಗಳು ಉಳಿದಿವೆ ಅಷ್ಟರೊಳಗೆ ಎಲ್ಲಾ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಅಳವಡಿಕೆ ಮಾಡಬೇಕು ಎಂದರೆ ಪ್ರತಿ ದಿನ 4 ಲಕ್ಷಕ್ಕೂ ಹೆಚ್ಚು ವಾಹನಗಳು ನೋಂದಾಯಿಸಿಕೊಳ್ಳಬೇಕು.
ಸದ್ಯದ ಪರಿಸ್ಥಿತಿಯಲ್ಲಿ ಅದು ಅಸಾಧ್ಯವಾಗಿದೆ. ಎಚ್ಎಸ್ಆರ್ಪಿ ಅಳವಡಿಕೆಗೆ ತಡೆ ನೀಡುವಂತೆ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿತ್ತಾದರೂ, ಹೈಕೋರ್ಟ್ ಅದನ್ನು ವಜಾಗೊಳಿಸಿದೆ. ಆದರೂ, ನವೆಂಬರ್ 17ರ ಬಳಿಕ ದಿನಾಂಕವನ್ನು ವಿಸ್ತರಣೆ ಮಾಡುವ ಸಾಧ್ಯತೆ ಇದೆ.
ಹೊಸ ರೀತಿಯ ನಂಬರ್ ಪ್ಲೇಟ್ ಪಡೆಯುವುದು ಹೇಗೆ?
1) ಕರ್ನಾಟಕ ಸಾರಿಗೆ ಇಲಾಖೆಯ ವೆಬ್ಸೈಟ್ಗೆ https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು 'Book HSRP' ಕ್ಲಿಕ್ ಮಾಡಿ.
2) ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ ಮತ್ತು ನಿಮ್ಮ ವಾಹನದ ವಿವರವನ್ನು ಭರ್ತಿ ಮಾಡಿ.
3) ಎಚ್ಎಸ್ಆರ್ಪಿ ಜೋಡಣೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ ಮತ್ತು ಆನ್ಲೈನ್ನಲ್ಲಿ ಎಚ್ಎಸ್ಆರ್ಪಿ ಶುಲ್ಕವನ್ನು ಪಾವತಿಸಲು ಮುಂದುವರಿಯಿರಿ. (ಸೂಚನೆ: ಯಾವುದೇ ಪಾವತಿಯನ್ನು ನಗದು ರೂಪದಲ್ಲಿ ಸ್ವೀಕರಿಸಲ್ಲ, ಕೇವಲ ಆನ್ಲೈನ್ ಮೂಲಕ ಮಾತ್ರ ಪಾವತಿ ಮಾಡಬಹುದಾಗಿದೆ.)
4) ವಾಹನ ಮಾಲೀಕರ ಮೊಬೈಲ್ಗೆ ಒಟಿಪಿ ಸಂಖ್ಯೆ ಬರುತ್ತದೆ. ಮಾಲೀಕರು ಅವರ ಅನುಕೂಲಕ್ಕೆ ಮತ್ತು ವೆಬ್ಸೈಟ್ಗೆ ಅನುಗುಣವಾಗಿ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಬಹುದು.
5) ಮಾಲೀಕರು ನಂತರ ತಮ್ಮ ವಾಹನಗಳಿಗೆ ಎಚ್ಎಸ್ಆರ್ ಪಿ ಅಳವಡಿಸಲು ವಾಹನ ತಯಾರಕರು ಅಥವಾ ಡೀಲರ್ ಬಳಿ ಭೇಟಿ ನೀಡಬೇಕು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications