ಮುಂದುವರಿದ ಸಿ ಎಂ ಇಬ್ರಾಹಿಂ ವಾಕ್ ಲಹರಿ: ಈ ಬಾರಿ ರಾಮಮಂದಿರ, ಕರಸೇವೆ
Recommended Video

ವಿಜಯಪುರ, ನ 15: ತಮ್ಮ ವ್ಯಂಗ್ಯಮಿಶ್ರಿತ ವಾಗ್ದಾಳಿಗೆ ಹೆಸರಾಗಿರುವ ಕಾಂಗ್ರೆಸ್ ಮುಖಂಡ ಸಿ ಎಂ ಇಬ್ರಾಹಿಂ, ಮತ್ತೆ ಬಿಜೆಪಿ ಮತ್ತು ಬಿಜೆಪಿಯ ಅಜೆಂಡಾದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಇಬ್ರಾಹಿಂ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಯಾವ ಸಾಬ್ರೂ ವಿರೋಧಿಸುವುದಿಲ್ಲ. ಆದರೆ, ಬಿಜೆಪಿಗೆ ಅಲ್ಲಿ ರಾಮಮಂದಿರ ನಿರ್ಮಾಣವಾಗುವುದು ಬೇಕಾಗಿಲ್ಲ ಎಂದ ಇಬ್ರಾಹಿಂ ಹೇಳಿದ್ದಾರೆ.
ರಾಮಮಂದಿರದ ವಿಚಾರ, ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ನಾವು ಸಿದ್ದ. ಸುಪ್ರೀಂಕೋರ್ಟ್ ತೀರ್ಪು ಏನೇ ಬರಲಿ, ಅದಕ್ಕೂ ನಾವು ಬದ್ದ. ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಬಿಡಬೇಕು ಎಂದು ಇಬ್ರಾಹಿಂ ಕಿವಿಮಾತನ್ನು ಹೇಳಿದ್ದಾರೆ.
ಶಿವಾಜಿ ಜಯಂತಿಯನ್ನು ನಾವು ಮುಸ್ಲಿಮರೆಲ್ಲಾ ಸೇರಿ ಆಚರಿಸುತ್ತೇವೆ, ಆದರೆ ಟಿಪ್ಪು ಜಯಂತಿ ಆಚರಣೆಗೆ ವಿರೋಧಿಸುವುದು ತರವಲ್ಲ. ವಸುದೇವ ಕುಟುಂಬಕಂ ರೀತಿಯಲ್ಲಿ ನಾವೆಲ್ಲಾ ಅನ್ಯೋನ್ಯತೆಯಿಂದ ಬಾಳಬೇಕಾಗಿದೆ ಎಂದು ಇಬ್ರಾಹಿಂ ಆಗ್ರಹಿಸಿದ್ದಾರೆ.
ಶಿವಾಜಿ ಜಯಂತಿ ಆಚರಣೆಯ ವಿಚಾರದಲ್ಲಿ ನಾನು ಅಂಜುಮಾನ್ ಕಮಿಟಿಗೆ ಪತ್ರ ಬರೆಯುತ್ತೇನೆ ಎಂದಿರುವ ಇಬ್ರಾಹಿಂ, ರಾಮಮಂದಿರಕ್ಕಾಗಿ ಕರಸೇವೆಗೆ ಸಿದ್ದ ಎಂದಿದ್ದಾರೆ. ಮುಂದೆ ಓದಿ..

ಭವ್ಯ ರಾಮಮಂದಿರ ನಿರ್ಮಾಣ
ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಮಾಡುವುದಾಗಿ ಬಿಜೆಪಿಯವರು ಸಾರ್ವಜನಿಕರಿಂದ ಇಟ್ಟಿಗೆ ತೆಗೆದುಕೊಂಡರು, ಅದರ ಕಥೆ ಏನಾಯಿತು? ಆದರೆ, ನಾವು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂದು ಬಯಸುವವರು. ಅದಕ್ಕಾಗಿ ಇಟ್ಟಿಗೆ ಕೊಡಲೂ ಸಿದ್ದರಿದ್ದೇವೆ, ಕರ ಸೇವೆ ಮಾಡಲು ಸಜ್ಜಾಗುತ್ತೇವೆ - ಸಿ ಎಂ ಇಬ್ರಾಹಿಂ.

ಹಾರ ಹಾಕುವುದು, ಮೆರವಣಿಗೆ ಮಾಡುವುದು ನಮ್ಮ ಸಂಪ್ರದಾಯವಲ್ಲ
ಈ ಬಾರಿ ಟಿಪ್ಪು ಜಯಂತಿ ಆಚರಣೆ ಬಹಳ ನಿರಾಶೆ ತಂದಿದೆ. ಫೋಟೊ ಇಡೋದು, ಅದಕ್ಕೆ ಹಾರ ಹಾಕುವುದು, ಮೆರವಣಿಗೆ ಮಾಡುವುದು ನಮ್ಮ ಸಂಪ್ರದಾಯವಲ್ಲ. ನಾವು ನೋಡಿ, ಶಿವಾಜಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಸಿದ್ದರಿದ್ದೇವೆ. ಶೃಂಗೇರಿ, ಸುತ್ತೂರು ಶ್ರೀಗಳ ನೇತೃತ್ವದಲ್ಲಿ ಪಕ್ಷಾತೀತವಾಗಿ ಸಭೆ ಸೇರುತ್ತೇವೆ - ಸಿ ಎಂ ಇಬ್ರಾಹಿಂ.

ಸಾಬ್ರ ಹೆಂಡತಿಯರ ಮೇಲಿದ್ದಷ್ಟು ಪ್ರೀತಿ ರಾಮ ಮಂದಿರದ ಮೇಲಿಲ್ಲ
ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ಮಾತನಾಡುತ್ತಿದ್ದ ಇಬ್ರಾಹಿಂ, ನಮ್ ಪ್ರಧಾನಿ ಮೋದಿಗೆ ಸಾಬ್ರ ಹೆಂಡತಿಯರ ಮೇಲಿದ್ದಷ್ಟು ಪ್ರೀತಿ ರಾಮ ಮಂದಿರ ನಿರ್ಮಾಣ ಮಾಡುವುದರಲ್ಲಿ ಇಲ್ಲ. ರಾಮ ಮಂದಿರ ಬಿಜೆಪಿಗೆ ವೋಟ್ ಬ್ಯಾಂಕೇ ಹೊರತು, ಅದರಲ್ಲಿ ಅವರಿಗೆ ಇಚ್ಚಾಶಕ್ತಿಯಿಲ್ಲ ಎಂದು ಪರೋಕ್ಷವಾಗಿ ತ್ರಿಬಲ್ ತಲಾಖ್ ಬಗ್ಗೆ ಮೋದಿ ಸರಕಾರದ ನಿರ್ಧಾರವನ್ನು ಟೀಕಿಸಿದ್ದರು.

ಮೋದಿ ತನ್ನ ಹೆಂಡತಿಗೆ ಜೀವನಾಂಶ ಕೊಡ್ತಾ ಇದ್ದಾರಾ
ಬೇರೆಯವರ ಹೆಂಡತಿಯ ಬಗ್ಗೆ ಮಾತನಾಡುವ ಮೋದಿ ಸಾಹೇಬ್ರು, ತನ್ನ ಹೆಂಡತಿಯನ್ನು ಬಿಟ್ಟಿದ್ದಾರೆ. ಹೋಗ್ಲಿ, ಅವರಿಗೆ ಜೀವನಾಂಶ ಕೊಡ್ತಾ ಇದ್ದಾರಾ, ಅದೂ ಇಲ್ಲ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಬಾವುಟ ಹಾರಿಸುವುದು, ಗೋವನ್ನು ಇಟ್ಟುಕೊಂಡು ರಾಜಕೀಯ ಮಾಡಿದ್ರು. ಗೋವಿನ ಮೇಲೆ ಪ್ರೀತಿ ಇದ್ದಿದ್ದರೆ, ದೇಶದಲ್ಲಿ ಹೆಚ್ಚಿನ ಕಡೆ ಅವರದ್ದೇ ಸರಕಾರವಿದೆ, ಬ್ಯಾನ್ ಮಾಡ್ಲಿ - ಸಿ ಎಂ ಇಬ್ರಾಹಿಂ.

ಸಿದ್ದರಾಮಣ್ಣಂಗೆ ರಾಜ್ಯದ ಚಿಂತೆ, ಯಡಿಯೂರಪ್ಪಂಗೆ ಶೋಭಕ್ಕನ ಚಿಂತೆ
ಮೊನ್ನೆ ಮೊನ್ನೆ ನಡೆದ ಉಪಚುನಾವಣೆಯಲ್ಲೂ ವಿವಾದಕಾರಿ ಹೇಳಿಕೆ ನೀಡಿದ್ದ ಇಬ್ರಾಹಿಂ, ನಮ್ ಸಿದ್ದರಾಮಣ್ಣಂಗೆ ರಾಜ್ಯದ ಚಿಂತೆ. ಆದರೆ, ಯಡಿಯೂರಪ್ಪನವರಿಗೆ ಶೋಭಕ್ಕನ ಚಿಂತೆ ಎಂದಿದ್ದರು. ವಿಕಟ ರಾಜಕಾರಣಿ ಎಂದೇ ಖ್ಯಾತರಾದ ಇಬ್ರಾಹಿಂ, ಚಕೋರಂಗೆ ಚಂದ್ರಮನ ಚಿಂತೆ, ಅಂಬುಜೆಗೆ ಬಾನುವಿನ ಚಿಂತೆ, ಸಿದ್ದರಾಮಯ್ಯಗೆ ಜನರ ಚಿಂತೆ, ಯಡಿಯೂರಪ್ಪಗೆ ಶೋಭಾ ಚಿಂತೆ' ಎಂದ ಇಬ್ರಾಹಿಂ ತಮ್ಮ ಭಾಷಣದ ಪೂರಾ ವ್ಯಂಗ್ಯದ ಮೂಲಕ ಮೋದಿ ಹಾಗೂ ರಾಜ್ಯ ಬಿಜೆಪಿಯನ್ನು ಕುಟುಕಿದ್ದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications