ಕೇರಳ ಕುರಿ, ಕೋಳಿ, ಮೇಕೆ, ಎಮ್ಮೆ ಬಲಿ ಬಗ್ಗೆ ಸರ್ಕಾರ ಎಸ್ಐಟಿ ಮಾಡಲಿ: ಕುಮಾರಸ್ವಾಮಿ ಹೇಳಿದ್ದೇನು?
ಬೆಂಗಳೂರು, ಜೂನ್ 03: ಕೇರಳದಲ್ಲಿ ಕೇರಳ ಕುರಿ, ಕೋಳಿ, ಮೇಕೆ, ಎಮ್ಮೆ ಬಲಿಯ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಇನ್ನೊಂದು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇವರು ಪ್ರತಿಯೊಂದಕ್ಕೂ ಎಸ್ ಐಟಿ ರಚನೆ ಮಾಡಿ ತನಿಖೆ ಮಾಡಿಸುತ್ತಾರೆ, ಅಲ್ಲವೇ? ಬಲಿ ವಿಷಯಕ್ಕೂ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದರು.
ಇದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ನೀಡಿಕೆ ಅಲ್ಲವೇ? ನಾನು ಮಾಧ್ಯಮಗಳ ಮೂಲಕವೇ ಗಮನಿಸಿದೆ. ಸಿಎಂ ಮತ್ತು ನನ್ನ ವಿರುದ್ಧ ಮಾಡಿಸುತ್ತಿರುವ ಶತ್ರು ಭೈರವಿ ಯಾಗ ಎಂದು ಹೇಳಿದ್ದಾರೆ. ಸಿಎಂ, ಡಿಸಿಎಂ ವಿರುದ್ಧ ವಾಮಾಚಾರ ಎಂದರೆ ಸಾಮಾನ್ಯವೇ? ಹಾಗಾಗಿ ಅದರ ತನಿಖೆಗೂ ಒಂದು ಎಸ್ಐಟಿ ರಚನೆ ಮಾಡಲಿ ಎಂದು ಹೇಳಿದರು.

ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಇದು ಮಾಟ ಮಂತ್ರ ಎಂದು ಕಥೆ ಕಟ್ಟಿದ್ದಾರೆ. ಅವರ ಅಷ್ಟೂ ಹೇಳಿಕೆಯನ್ನು ಗಮನಿಸಿದ್ದೇನೆ. ಒಂದು ಮಾತನ್ನು ಹೇಳಲು ಬಯಸುತ್ತೇನೆ. 'ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು.' ಎಂದು. ದಾಸಶ್ರೇಷ್ಠ ಪುರಂದರದಾಸರು ರಚಿಸಿರುವ ಪದವಿದು. ಅವರು ಹೇಳಿಕೆ ಕೊಡುವ ಮುನ್ನ ತಾವು ಅಲಂಕರಿಸಿರುವ ಹುದ್ದೆಯ ಘನತೆ ಅರಿಯಬೇಕಿತ್ತು. ಅವರಿಗೆ ಆ ಸ್ಥಾನದ ಮೌಲ್ಯ ಇನ್ನೂ ಅರ್ಥವಾಗಿಲ್ಲ ಎಂದು ಟೀಕಿಸಿದರು.
'ಲೋಕದ ಡೊಂಕ ನೀವೇಕೆ ತಿದ್ದುವಿರಿ..' ಎಂದು ಈ ಹಿಂದೆ ಡಿಕೆಶಿ ಹೇಳಿದ್ದ ವಚನವನ್ನು ಉಲ್ಲೇಖಿಸಿ ಟಾಂಗ್ ಕೊಟ್ಟ ಕುಮಾರಸ್ವಾಮಿ ಅವರು; ನಾನು ಅವರ ಮಾತನ್ನು ಅವರಿಗೇ ಹೇಳಲು ಬಯಸುತ್ತೇನೆ. ಮೊದಲು ನಿಮ್ಮ ಮನಸ್ಸು ಶುದ್ಧ ಮಾಡಿಕೊಳ್ಳಿ. ಅದೆಂತದೋ ಶತ್ರು ಭೈರವಿ ಯಾಗವಂತೆ. ಅವರಿಗೆ ಭಕ್ತಿ ಇದೆಯಂತೆ. ಪವಿತ್ರ ಪುಣ್ಯಕ್ಷೇತ್ರ ಶ್ರೀ ರಾಜರಾಜೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಅವರೂ ಹೋಗಿದ್ದಾರೆ. ಅವರಿಗೆ ಈ ಯಾಗದ ಬಗ್ಗೆ ಪೂರ್ಣ ಮಾಹಿತಿ ಇರಬೇಕು. ಅಲ್ಲಿ ಯಾವ ರೀತಿಯ ಪೂಜೆ ನಡೆಯುತ್ತದೆ? ಆ ಕ್ಷೇತ್ರ ಮಹಿಮೆ ಏನು ಎನ್ನುವುದು ಅವರಿಗೆ ತಿಳಿದಿರುತ್ತದೆ ಅಲ್ಲವೇ? ಹಾಗಿದ್ದರೂ ಅವರು ಸುಳ್ಳು ಹೇಳಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ಅಪಪ್ರಚಾರ ಎಸಗಿದ್ದಾರೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಅವರು ನಮ್ಮ ಕುಟುಂಬದ ಮೇಲೆ ಏನೆಲ್ಲಾ ಚಿತಾವಣೆ ನಡೆಸುತ್ತಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ನಮ್ಮ ಕುಟುಂಬದಲ್ಲಿ ಕುರಿ, ಮೇಕೆ, ಎಮ್ಮೆ, ಕೋಣ ಕಡಿಯೋದು ಯಾವತ್ತೂ ನಡೆದಿಲ್ಲ. ಅಂತಹ ಸಂಪ್ರದಾಯ ನಮ್ಮ ಕುಟುಂಬದಲ್ಲಿ ಇಲ್ಲ. ಪ್ರತಿ ತಿಂಗಳು ನಾನು ಜೆಪಿ ನಗರದಲ್ಲಿರುವ ಶ್ರೀ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸುತ್ತೇನೆ. ನಮ್ಮ ತಂದೆಯವರು ಪೂಜೆ ಮಾಡಿಸುತ್ತಾರೆ. ನಮ್ಮಿಬ್ಬರ ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಪೂಜೆ ಮಾಡಿ ದೈವಕ್ಕೆ ಪ್ರಾರ್ಥನೆ ಸಲ್ಲಿಸುತ್ತೇವೆ. ಇನ್ನೊಬ್ಬರಿಗೆ ಕೇಡು ಬಯಿಸಲು ಪೂಜೆ ಮಾಡಿಲ್ಲ, ಮಾಡುವುದೂ ಇಲ್ಲ ಎಂದರು ಕುಮಾರಸ್ವಾಮಿ ಅವರು.
ಕೋಣ, ಹಂದಿ ಕೂಯ್ದು ಕೇಡು ಬಯಸಲ್ಲ ನಾವು, ಕೇಡು ಬಯಸೋದು ಅವರ ಸಂಸ್ಕೃತಿ ಎಂದು ಡಿಕೆಶಿ ವಿರುದ್ಧ ಕಿಡಿಕಾರಿದ ಅವರು; ದೇವೇಗೌಡರ ಅರವತ್ತು ವರ್ಷಗಳ ರಾಜಕೀಯ ಜೀವನದಲ್ಲಿ 3-4 ವರ್ಷ ಬಿಟ್ಟರೆ ಉಳಿದದ್ದು ಎಲ್ಲಾ ವಿರೋಧ ಪಕ್ಷದಲ್ಲೇ. ಒಂದು ವೇಳೆ ಕುರಿ, ಕೋಣ ಬಲಿ ಕೊಟ್ಟರೆ ಅಧಿಕಾರ ಸಿಗುತ್ತದೆ ಎನ್ನುವುದಾದರೆ ಇಷ್ಟೆಲ್ಲಾ ಕಷ್ಟ ಏನಕ್ಕೆ ಪಡಬೇಕು ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.
-
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications