ಕೊರೊನಾ ವೈರಸ್: ಪೇಜಾವರ ಶ್ರೀಗಳು ನೀಡಿದ ಕರೆ
ಬೆಂಗಳೂರು, ಮಾರ್ಚ್ 26: ಮಾರಣಾಂತಿಕ ಕೊರೊನಾ ವೈರಸ್ ಹರಡದಿರಲು ಶೃಂಗೇರಿ ಮಠದ ಶ್ರೀಗಳು ದುರ್ಗಾ ಪಾರಾಯಣ ಮಾಡಲು ಹೇಳಿದ್ದರು. ಈಗ, ಉಡುಪಿ ಪೇಜಾವರ ಮಠದ ಶ್ರೀಗಳು ಕರೆಯೊಂದನ್ನು ನೀಡಿದ್ದಾರೆ.
ಈ ವಿಚಾರದಲ್ಲಿ ವಿಡಿಯೋ ಸಂದೇಶವನ್ನು ಕಳುಹಿಸಿರುವ ವಿಶ್ವಪ್ರಸನ್ನ ತೀರ್ಥರು, "ವೇದವ್ಯಾಸ ದೇವರು ಇಡೀ ವಿಶ್ವಕ್ಕೆ ನೀಡಿದ ಅಪೂರ್ವವಾದ ಮಂತ್ರ ಶ್ರೀಮದ್ ವಿಷ್ಣುಸಹಸ್ರನಾಮ. ಇದನ್ನು ಪಠಿಸಿದರೆ, ನಮಗೊದಗಿಬರುವ ಎಲ್ಲಾ ಆಪತ್ತುಗಳಿಂದ ನಾವು ದೂರವಾಗಿರಬಹುದು" ಎಂದು ಹೇಳಿದ್ದಾರೆ.
"ವಿಷ್ಣು ಸಹಸ್ರನಾಮ ಪಾರಾಯಣದಿಂದ ಎಲ್ಲಾ ಭಯಗಳನ್ನು ದೂರಪಡಿಸಬಹುದು ಎಂದು ವೇದವ್ಯಾಸರು ಹೇಳಿದ್ದಾರೆ. ಅಂತಹ ವಿಷ್ಣುಸಹಸ್ರನಾಮ ಪಾರಾಯಣವನ್ನು ಪ್ರಪಂಚದಾದ್ಯಂತ ಎಲ್ಲರೂ ಒಂದಾಗಿ ಮುಂಬರುವ ಶುಕ್ರವಾರ, ಮಾರ್ಚ್ 27ರಂದು ಸಂಜೆ ಆರು ಗಂಟೆಗೆ ಸರಿಯಾಗಿ ಅವರವರು ಇರುವ ಸ್ಥಳದಿಂದಲೇ ಪಠಿಸೋಣ" ಎಂದು ಪೇಜಾವರ ಶ್ರೀಗಳು ಕರೆ ನೀಡಿದ್ದಾರೆ.

"ಪಾರಾಯಣದ ಫಲವಾಗಿ ಭಗವಂತ, ಪ್ರಪಂಚಕ್ಕೆ ಆಗಮಿಸಿರುವ ಆಪತ್ತನ್ನು ದೂರ ಮಾಡಿ, ಆಯುರಾರೋಗ್ಯವನ್ನು ಕರುಣಿಸಲಿ ಎಂಬುದಾಗಿ ಪ್ರಾರ್ಥಿಸೋಣ" ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು, ಭಕ್ತವೃಂದಕ್ಕೆ ಕರೆನೀಡಿದ್ದಾರೆ.
"ನಾವು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ಜಗತ್ತಿನಾದ್ಯಂತ ಎಲ್ಲರೂ ಇದರಲ್ಲಿ ಪಾಲ್ಗೊಳ್ಳಿ" ಎಂದು ಶ್ರೀಗಳು ಕರೆ ನೀಡಿದ್ದಾರೆ.
ಭಾರತದಲ್ಲಿ ಇದುವರೆಗೆ 649 ಕೊರೊನಾ ಪ್ರಕರಣ ದಾಖಲಾಗಿದ್ದು, ಹದಿನಾಲ್ಕು ಜನ ಈ ವೈರಸ್ ನಿಂದಾಗಿ ಸಾವನ್ನಪ್ಪಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications