ಸಿಟಿ ರವಿಗೆ ಮತ್ತೆ ಜೀವ ಬೆದರಿಕೆ: ಎಚ್ಚರ.. ಎಚ್ಚರ.. 15 ದಿನ ಗಡುವು ಕೊಟ್ಟ ಪತ್ರದಲ್ಲೇನಿದೆ?
ಚಿಕ್ಕಮಗಳೂರು , ಜನವರಿ 11: ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ಅವಹೇಳನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿಗೆ ವಾಟ್ಸಪ್ ಮೂಲಕ ಜೀವ ಬೆದರಿಕೆ ಬಂದಿದೆ. ಎಚ್ಚರ.. ಎಚ್ಚರ ಎಂದು 15 ದಿನಗಳ ಒಳಗೆ ಕ್ಷಮೆ ಕೇಳದಿದ್ದರೆ ಕೈಕಾಲು ಮುರಿದು ಸಾಯಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಸಚಿವೆ ಲಕ್ಮ್ಮಿ ಹೆಬ್ಬಾಳ್ಕರ್ ವಿರುದ್ಧ ಅಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣದ ಗಲಾಟೆ ಬಳಿಕ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಬಹಿರಂಗವಾಗಿ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಬೆದರಿಕೆ ಕರೆಗಳು ನಿರಂತರವಾಗಿ ಬರುತ್ತಿವೆ ಎಂಬ ಸಿಟಿ ರವಿ ಆರೋಪಿಸಿದ್ದ ಬೆನ್ನಲ್ಲೇ ಇದೀಗ ವಾಟ್ಸಪ್ ಮೂಲಕ ಮತ್ತೊಮ್ಮೆ ಅನಾಮಧೇಯ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದಿದೆ. ಅಲ್ಲದೆ, ಸಿ ಟಿ ರವಿ ಅವರ ಮಗನನ್ನೂ ಕೊಲ್ಲುವುದಾಗಿ ಬೆದರಿಕೆ ಬಂದಿದ್ದು, ಸಿಟಿ ರವಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಬೆದರಿಕೆ ಪತ್ರದಲ್ಲಿ ಏನಿದೆ?
ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿಟಿ ರವಿಗೆ ವಾಟ್ಸಪ್ ನಲ್ಲಿ ಜೀವ ಬೆದರಿಕೆಯೊಡ್ಡಿರುವ ಅನಾಮಧೇಯ ವ್ಯಕ್ತಿಗಳು, ಇನ್ನು 15 ದಿನದೊಳಗೆ ಚಿಕ್ಕಮಗಳೂರಿನಿಂದ ಬಂದು ಬೆಳಗಾವಿ ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ನಿಮ್ಮ ಕೈಕಾಲು ಮುರಿದು ಸಾಯಿಸುತ್ತೇವೆ. ಹಾಗೂ ನಿನ್ನ ಮಗನನ್ನು ಸಾಯಿಸುತ್ತೇವೆ. ನಿನ್ನ ಕೈ ಕಾಲು ಮುರಿಯುತ್ತೇವೆ, ಪ್ರಾಣ ತೆಗೆಯುತ್ತೇವೆ, ನಿನ್ನ ಮಗನನ್ನು ಸಾಯಿಸುತ್ತೇವೆ ಹುಷಾರ್...ಹುಷಾರ್... ಎಂದು ಬೆದರಿಕೆ ಪತ್ರದಲ್ಲಿ ತಿಳಿಸಲಾಗಿದೆ.
ಸಿಟಿ ರವಿಗೆ ಪ್ರಾಣ ಬೆದರಿಕೆ ಅಲ್ಲದೆ ಅವರ ಮಗ ಸೂರ್ಯನನ್ನೂ ಕೊಲ್ಲುತ್ತೇವೆ ಎಂದು ಬೆದರಿಕೆಯೊಡ್ಡಿರುವ ಕಿಡಿಗೇಡಿಗಳು. ಬೆದರಿಕೆ ಸಂದೇಶ ಬಂದ ಬಳಿಕ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸಿಟಿ ರವಿ ಅವರು ಬಸವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇನ್ನೂ ನಕ್ಸಲರ ಗನ್ ಗಳು ಪತ್ತೆ ಹಿನ್ನೆಲೆ ಚಿಕ್ಕಮಗಳೂರಲ್ಲಿ ಸಿ.ಟಿ.ರವಿ ಅವರು ಮಾತನಾಡಿ, ನಕ್ಸಲರು ಎಲ್ಲಿ ಕಾರ್ಯಾಚರಣೆ ಮಾಡ್ತಿದ್ರು, ಹಣ, ಗನ್ ಎಲ್ಲಿ ಬರೋದು ಯಾವ, ವ್ಯಕ್ತಿ ಸಂಘಟನೆ ಸಹಾಯ ಮಾಡ್ತಿದ್ರು. ಎಲ್ಲಾ ಮಾಹಿತಿ ಹಂಚ್ಕೊಂಡ್ರೆ ಮಾತ್ರ ಶರಣಾಗತಿಗೆ ಅರ್ಥ ಇರುತ್ತದೆ. ನಕ್ಸಲ್ ಸಿದ್ದಾಂತ ಸಂವಿಧಾನಕ್ಕೆ ವಿರುದ್ಧವಾದ ಸಿದ್ಧಾಂತ, ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲದಿರೋ ಸಿದ್ದಾಂತ. ಅವರಿಗೆ ಬ್ಯಾಲೆಟ್ ಮೇಲೆ ನಂಬಿಕೆ ಇಲ್ಲ, ಬುಲೆಟ್ ಮೇಲೆ ನಂಬಿಕೆ. ಪ್ಯಾಕೇಜ್ ನೀಡುವ ಮುನ್ನ ಎಲ್ಲಾ ಮಾಹಿತಿ ಕಲೆ ಹಾಕಬೇಕು. ನಕ್ಸಲರಿಂದ ನಾಗರೀಕರು, ಪೊಲೀಸರು, ಸೈನಿಕರು ಸಾವನ್ನಪ್ಪಿದ್ದಾರೆ. ನಕ್ಸಲರ ಶರಣಾಗತಿ ತಂತ್ರಗಾರಿಕೆಯ ಭಾಗ ಆಗಬಾರದು ಎಂದು ಹೇಳಿದ್ದಾರೆ.
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral










Click it and Unblock the Notifications