'ನನಗೆ ಕೊಲೆ ಬೆದರಿಕೆ ಇದೆ, ರೋಡಲ್ಲಿ ಕೊಚ್ಚಿ ಹಾಕ್ತೇವೆ ಎಂದು ಹೆದರಿಸುತ್ತಿದ್ದಾರೆ'

ಹಾಸನ, ಡಿಸೆಂಬರ್14:‌ ಹಳೇ ಬೀಡಿನ ಶ್ರೀ ಕ್ಷೇತ್ರ ಪುಷ್ಪಗಿರಿ ಮಠದ ಪೀಠಾದ್ಯಕ್ಷ ಶ್ರೀ ಸೋಮಶೇಖರ‌ ಶಿವಚಾರ್ಯ ಮಹಾಸ್ವಾಮೀಜಿ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಹಳೇ ಬೀಡು ಪುಷ್ಪಗಿರಿ ಸ್ವಾಮೀಜಿ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ರಾತ್ರಿ ಪುಷ್ಪಗಿರಿ ಮಠದಲ್ಲಿ ನಡೆದ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರೋಡ್‌ನಲ್ಲಿ ಸಿಗಲಿ ಕೊಚ್ಚಿ ಹಾಕುತ್ತೇವೆ, ಇಲ್ಲ, ಹೊಡೆದು ಹಾಕುತ್ತೇವೆ ಅಂತ ಹೇಳುತ್ತಿದ್ದಾರೆ ಎಂದು ಸ್ವಾಮೀಜಿ ಹೇಳಿದರು. ಹಾಗಾಗಿ ಹಂಗೆಲ್ಲ ಕೊಚ್ಚಿಸಿಕೊಂಡು ಇನ್ನೊಂದು ಆಗೋದಕ್ಕಿಂತ, ಭಗವಂತ ಆಯಸ್ಸು ಕಡಿಮೆ ಮಾಡಿ, ಅವರ ಕೈಯಲ್ಲಿ ಹೋಗುವಂತಹ ಅವಕಾಶ ನಮಗೆ ಸಿಕ್ಕರೆ ಅದು ಸ್ವರ್ಗ ಅಂತ ಭಾವಿಸುತ್ತೇವೆ ಎಂದರು.

Life Threatening To Halebidu Pushpagiri Mutt Swamiji

ಬದುಕಿದ್ದಾಗ ವೀರ ಮರಣ ಸಾವನ್ನಪ್ಪಬೇಕು ಅಂತಾರೆ. ಹೆದರಿ ಹಿಂದೆ ಓಡಿ ಹೋಗಿ ಸಾಯಲ್ಲ. ಹೀಗಾಗಿ ಎದುರುಗಡೆ ಕೊಚ್ಚಿಸಿಕೊಂಡು ಹೋದರೆ ನಮಗೆ ಸ್ವರ್ಗ ಸಿಗುತ್ತೆ. ನಾವು ಕೆಲಸ ಮಾಡಿದ್ದೇವೆ ನಮ್ಮ ಹೆಸರು ಉಳಿಯುತ್ತೆ. ನಮ್ಮ ಹೆಸರಿಗಾಗಿ ಓಡಾಡುವುದು ಏನಿಲ್ಲ. ಸಮಾಜ, ಧರ್ಮಕ್ಕೆ ನನ್ನ ಸೇವೆ ಅಂತ ಭಾವಿಸಿದ್ದೇನೆ. ಇದು ಎಲ್ಲರಿಗೂ ಬೇಸರ ಆಗಬಹುದು. ಆದರೆ ನಮ್ಮ ನಿಲುವನ್ನ ಹೇಳಲೇಬೇಕು. ವೇದಿಕೆ ಮೀಟಿಂಗ್‌, ವೈಯುಕ್ತಿಕವಾದರೂ ಹೇಳಲೇಬೇಕಿತ್ತು ಹೇಳಿದ್ದೇನೆ. ಏಕೆಂದರೆ ಸಣ್ಣ ಸಣ್ಣ ಸಮಾಜಗಳು ಇವತ್ತು ದೊಡ್ಡ ದೊಡ್ಡ ಕ್ರಾಂತಿಯನ್ನು ಮಾಡುತ್ತಿವೆ. ಅದನ್ನು ನೋಡಿದ ನಮಗೂ, ನಮ್ಮ ಕ್ಷೇತ್ರದಲ್ಲಿ ಏನಾದ್ರೂ ಅದೇ ರೀತಿ ವಿಭಿನ್ನವಾಗಿ ಮಾಡೋಣ ಅನಿಸುತ್ತದೆ. ಆ ಮಾಡುವಂತಹ ಶಕ್ತಿ ಇದೆ. ಆದರೆ ಸಹಕಾರ ಇಲ್ಲದ್ದಕ್ಕಾಗಿ ಸಾಧ್ಯವಾಗುವುದಿಲ್ಲ ಎಂದು ನೋವು ತೋಡಿಕೊಂಡರು.

ಇನ್ನು ರಾಜ್ಯ ಬಿಜೆಪಿ ವಕ್ತಾರರು ಚಂದ್ರಶೇಖರ್ ಅವರು ಇನ್ನೂ ನೂರು ವರ್ಷಕಾಲ ಬಾಳಿ ಅಂತ ಹೇಳುತ್ತಿದ್ದರು. ನಮಗೆ ನೂರು ವರ್ಷವಲ್ಲ, ಹದಿನೈದು ವರ್ಷಕ್ಕೆ ಸಾಕಾಗಿದೆ.ಹಾಗಾಗಿ ಈಗಲೇ ಹೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನೀವೇ ನಿಂತುಕೊಂಡು ಕಾರ್ಯಕ್ರಮಗಳನ್ನು ನೆಡೆಸಿಕೊಳ್ಳಿ, ನಾವು ನಿಮಿತ್ತ ಮಾತ್ರ ಇರುತ್ತೇವೆ. ಹೇಗೆ ಕಾರ್ಯಕ್ರಮ ಮಾಡಬೇಕು ಅಂತ ಹೇಳಿ ನಾವು ಮಾಡಿಕೊಂಡು ಹೋಗುತ್ತೇವೆ. ಬಹುಶಃ ನೀವು ಇದ್ದರೆ ಪರವಾಗಿಲ್ಲ. ಮುಂದೆ ಯಾರೇ ಬಂದರೂ ಕೂಡ ಸರ್ಕಾರ ಆಡಾಳಿತಾತ್ಮಕವಾಗಿ ಏನಿದೆ ಅದನ್ನು ನಡೆಸಿಕೊಂಡು ಹೋಗಿ.

ಈ ಕಾರ್ಯಕ್ರಮವನ್ನು ಸರ್ಕಾರದ ಕಾರ್ಯಕ್ರಮ ರೀತಿ ಮಾಡಿಕೊಂಡು ಹೋಗಿ ಎಂದು ಹೇಳಿದರು. ಈ ಹಿಂದೆ ಮಾವಿನತೋರಣ ಕಟ್ಟುವಾಗ ಜಗಳವಾಗಿದೆ. ಬಹುಶಃ ನನಗೂ ಸಾಕಾಗುತ್ತಿದೆ ಆದ್ದರಿಂದ ನೀವೇ ವಹಿಸಿಕೊಳ್ಳಿ. ಈ ಪುಷ್ಪಗಿರಿ ಕ್ಷೇತ್ರ ಯಾವ ಜಾತಿಗೆ ಮಿತವಾಗಬಾರದು ಎಂಬ ಉದ್ದೇಶ ನಮಗಿದೆ. ಎಲ್ಲರಿಗೂ ಏಕಕಾಲದಲ್ಲಿ ಶಾಂತಿ, ಸಮಾಧಾನ ಬಿತ್ತುವಂತಹ, ಪ್ರಸಾದ ಕೊಡುವಂತಹ ಏಕೈಕ ಕ್ಷೇತ್ರ ಪುಷ್ಪಗಿರಿ ಆಗಬೇಕು ಎನ್ನುವುದು ನನ್ನ ಮನಸ್ಥಿತಿ ಇದೆ. ಹಾಗಾಗಿ ನಾವು ಯಾವತ್ತು ಜಾತಿಗೆ ಸೀಮಿತವಾಗುವುದಿಲ್ಲ ಎಂದು ತಿಳಿಸಿದರು.

ಆಕಸ್ಮಿಕವಾಗಿ ಆಗಬೇಕು, ಅದನ್ನು ಉಳಿಸಿಕೊಳ್ಳಬೇಕು ಎಂಬ ಯೋಗ್ಯತೆ ಈ ಸಮಾಜಕ್ಕಿಲ್ಲ ಹಾಗಾಗಿ ಇದನ್ನು ಧಿಕ್ಕರಿಸುತ್ತೇವೆ. ಇದನ್ನು ನಿಮ್ಮ ವ್ಯಾಪ್ತಿಗೆ ತೆಗೆದುಕೊಳ್ಳಿ. ಬಹಳ ಜನ ನಾಯಕರು ಕೆಳಗೆ ಹೆದರಿಕೊಂಡು ಕುಳಿತಿದ್ದಾರೆ ನನಗೆ ಗೊತ್ತಿದೆ. ಮೇಲೆ ಬಂದರೆ ನೀವು ಅಲ್ಲಿ ಹೋಗಿದ್ರೆ ಅನ್ನುವ ಭಯ ಅವರಿಗೆ ಕಾಣುತ್ತಿದೆ. ಒಂದೊಂದು ಸಾರಿ ನನ್ನ ಶಬ್ದಗಳು ಬಹಳ ಕಠಿಣ. ನಾನು ದಿಟ್ಟತನದಿಂದ ಇದ್ದೇನೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+