ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೀರಶೈವ ಲಿಂಗಾಯತ ಎರಡೂ ಒಂದೇ : ವೀರಶೈವ ಮಹಾಸಭಾ

|
Google Oneindia Kannada News

ಬೆಂಗಳೂರು, ಮಾರ್ಚ್ 23 : ಲಿಂಗಾಯತ ಸಮುದಾಯಕ್ಕೆ ಅಲ್ಪ ಸಂಖ್ಯಾತ ಸ್ಥಾನಮಾನ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಅಖಿಲ ಭಾರತ ವೀರಶೈವ ಮಹಾಸಭಾ ಖಂಡಿಸಿದೆ.

ಬೆಂಗಳೂರಿನ ಸದಾಶಿವ ನಗರದಲ್ಲಿ ಶುಕ್ರವಾರ ಅಖಿಲ ಭಾರತ ವೀರಶೈವ ಮಹಾಸಭಾದ ಸಭೆ ನಡೆಯಿತು. ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಧರ್ಮ ಒಡೆಯಲು ಹೊರಟವರನ್ನು ಬಸವಣ್ಣನೇ ಕ್ಷಮಿಸಲಿ!ಧರ್ಮ ಒಡೆಯಲು ಹೊರಟವರನ್ನು ಬಸವಣ್ಣನೇ ಕ್ಷಮಿಸಲಿ!

ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಶಾಮನೂರು ಶಿವಶಂಕರಪ್ಪ ಅವರು, 'ವೀರಶೈವ ಲಿಂಗಾಯತ ಎರಡೂ ಒಂದೇ. ವೀರಶೈವ ಸಮಾಜವನ್ನು ಒಡೆಯುವುದು ಸರಿಯಲ್ಲ' ಎಂದು ಹೇಳಿದರು.

Lingayat and Veerashaiva are same says Shamanur Shivashankarappa

'ವೀರಶೈವ ಲಿಂಗಾಯತ ಎರಡೂ ಒಂದೇ, ಆದ್ದರಿಂದ, ರಾಜ್ಯ ಸರ್ಕಾರದ ನಿರ್ಧಾರವನ್ನು ಸಭೆಯಲ್ಲಿ ಖಂಡಿಸಲಾಗಿದೆ. ಖಂಡನಾ ನಿರ್ಣಯವನ್ನು ಅಂಗೀಕರಿಸಲಾಗಿದೆ' ಎಂದರು.

ಪ್ರತ್ಯೇಕ ಧರ್ಮ: ಬ್ರಾಹ್ಮಣರಿಗೆ ಎಂಥಾ ಸಲಹೆ ನೀಡಿದ್ರು ಗೊತ್ತಾ ಸಚಿವ ಪಾಟೀಲ್?ಪ್ರತ್ಯೇಕ ಧರ್ಮ: ಬ್ರಾಹ್ಮಣರಿಗೆ ಎಂಥಾ ಸಲಹೆ ನೀಡಿದ್ರು ಗೊತ್ತಾ ಸಚಿವ ಪಾಟೀಲ್?

'ಲಿಂಗಾಯತ ಮತ್ತು ವೀರಶೈವ ಒಂದೇ ಎಂದು 2013ರಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಈ ಪತ್ರವನ್ನು ಪರಿಗಣಿಸಬೇಕು' ಎಂದು ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳಲಾಗಿದೆ.

ಇದರಿಂದಾಗಿ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಮತ್ತೊಂದು ಪರ್ವ ಆರಂಭವಾದಂತೆ ಕಾಣುತ್ತಿದೆ. ಈಗಾಗಲೇ ಕರ್ನಾಟಕ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಪರಿಗಣಿಸುವಂತೆ ಕೇಂದ್ರ ಸರ್ಕಾರದ ಶಿಫಾರಸು ಮಾಡಲು ನಿರ್ಧಾರವನ್ನು ಕೈಗೊಂಡಿದೆ.

English summary
All India Veerashaiva Mahasabha president Shamanur Shivashankarappa on Friday opposed the Karnataka government decision to accord religious minority status to Lingayats. After meeting with leaders he said, Lingayat and Veerashaiva are same.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X