ವೈಜ್ಞಾನಿಕ ಜಾತಿ ಗಣತಿ ನಡೆಸುವಂತೆ ಲಿಂಗಾಯತ ಮುಖಂಡರ ಆಗ್ರಹ
ಬೆಳಗಾವಿ, ಡಿಸೆಂಬರ್ 16: ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಲಿಂಗಾಯತ ಮುಖಂಡರು ಶುಕ್ರವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹೊಸದಾಗಿ ಜಾತಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಸುವಂತೆ ಒತ್ತಾಯಿಸಿದರು.
ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ಶಿವಾನಂದ ಪಾಟೀಲ ಸೇರಿದಂತೆ ಹಲವು ಸಮುದಾಯದ ಮುಖಂಡರು ಶಿವಶಂಕರಪ್ಪ ಅವರ ಜತೆಗಿದ್ದರು. ಕಳೆದ ಎಂಟು ವರ್ಷಗಳ ಹಿಂದೆ ಕಾಂತರಾಜ್ ಆಯೋಗದಿಂದ ಜಾತಿ ಸಮೀಕ್ಷೆ ನಡೆಸಲಾಗಿತ್ತು. ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯನ್ನು ನಡೆಸಲಾಗುತ್ತದೆ ಎಂದು ಪರಿಗಣಿಸಿ, ಅವರು ಈಗ ಎಂಟು ವರ್ಷಗಳ ಹಿಂದಿನ ಅಂಕಿಅಂಶವನ್ನು ಬಳಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.

ವರದಿಯಲ್ಲಿ ಸಾಕಷ್ಟು ಲೋಪದೋಷಗಳಿದ್ದು, ಅವುಗಳನ್ನು ಸರಿಪಡಿಸಬೇಕು. ಹಾಗಾಗಿ ಹೊಸದಾಗಿ ಸಮೀಕ್ಷೆ ನಡೆಸಿದರೆ ಉತ್ತಮ. ತಾಲೂಕು ಮತ್ತು ಜಿಲ್ಲಾ ಮಟ್ಟದ ಸಭೆಗಳಲ್ಲಿ ಸರ್ವೆ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿಲ್ಲ ಹಾಗೂ ತಮ್ಮ ಸಮುದಾಯದವರಿಂದ ಅಗತ್ಯ ವಿವರಗಳನ್ನು ಪಡೆದಿಲ್ಲ ಎಂಬ ದೂರುಗಳು ಬಂದಿವೆ ಎಂದು ಸಿದ್ದರಾಮಯ್ಯ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಿಳಿಸಿದೆ.
ಅನೇಕರು ತಾವು ಲಿಂಗಾಯತರು ಎಂದು ಅಧಿಕಾರಿಗಳಿಗೆ ತಿಳಿಸದೆ ಸಮುದಾಯದೊಳಗಿನ ತಮ್ಮ ಉಪಜಾತಿಗಳ ವಿವರಗಳನ್ನು ಮಾತ್ರ ನೀಡಿದ್ದಾರೆ. ಸಂಗ್ರಹಿಸಿದ ವಿವರಗಳನ್ನು ಅಧಿಕಾರಿಗಳು ಯಾವುದೇ ಅಡ್ಡ ಪರಿಶೀಲನೆ ನಡೆಸಿಲ್ಲ. ಇಂತಹ ನ್ಯೂನತೆಗಳನ್ನು ಹೊಸದಾಗಿ ಸಮೀಕ್ಷೆ ನಡೆಸಿ ಸರಿಪಡಿಸಬೇಕು ಎಂದು ತಿಳಿಸಿದೆ.

ಹಿಂದುಳಿದ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕಾನಾಥ್ ಮಾತನಾಡಿ, ದೊಡ್ಡ ಸಮುದಾಯಗಳು ಸಣ್ಣ ಸಮುದಾಯಗಳ ಬಗ್ಗೆ ಕಾಳಜಿ ವ್ಯಕ್ತಪಡಿಸಿದರೆ ಉತ್ತಮ. ಲಿಂಗಾಯತರು ಈ ರೀತಿ ವರ್ತಿಸಿದರೆ, ಸಣ್ಣ ಸಮುದಾಯಗಳ ಗತಿಯೇನು? ಇದನ್ನು ಬಸವಣ್ಣನವರ ಭೂಮಿ ಬೆಳಗಾವಿ'ಯಲ್ಲಿ ಈ ಆಕ್ಷೇಪ ಎತ್ತಿರುವುದು ವಿಪರ್ಯಾಸ ಎಂದು ಹೇಳಿದ್ದಾರೆ.
ಈ ಲಿಂಗಾಯತ ನಾಯಕರು ಅಧಿವೇಶನದ ಮುಕ್ತಾಯದ ದಿನದಂದು ಈ ಬೇಡಿಕೆಯನ್ನು ಇಟ್ಟಿರುವುದು ವಿಪರ್ಯಾಸ. ಅಧಿವೇಶನದಲ್ಲಿ ಚರ್ಚೆಗೆ ತೆಗೆದುಕೊಳ್ಳಬಹುದಿತ್ತು ಎಂದು ಕೆಲವು ಹಿಂದುಳಿದ ವರ್ಗಗಳ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ವರದಿ ವಿಚಾರದಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರ ಈ ಧೋರಣೆ ಆಶ್ಚರ್ಯವೇನಿಲ್ಲ. ಈ ಹಿಂದೆಯೂ ಇಂತಹ ವರದಿಗಳು ಸಲ್ಲಿಕೆಯಾದಾಗ ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸುತ್ತಿದ್ದರು. ಅಂತಹ ಒಂದು ವರದಿಯನ್ನು ಲಿಂಗಾಯತರು ಮತ್ತು ಒಕ್ಕಲಿಗರು ಹರಿದು ಹಾಕಿದರು. ಈ ವರದಿಯನ್ನು ಯಾರೂ ಓದದೇ ಇರುವಾಗ ಅದು ಅವೈಜ್ಞಾನಿಕ ಎಂದು ಹೇಗೆ ಹೇಳಲು ಸಾಧ್ಯ? ಎಂದು ಬಿಜೆಪಿ ಎಂಎಲ್ಸಿ ಎ.ಎಚ್.ವಿಶ್ವನಾಥ್ ಹೇಳಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications