ವೈಜ್ಞಾನಿಕ ಜಾತಿ ಗಣತಿ ನಡೆಸುವಂತೆ ಲಿಂಗಾಯತ ಮುಖಂಡರ ಆಗ್ರಹ
ಬೆಳಗಾವಿ, ಡಿಸೆಂಬರ್ 16: ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಲಿಂಗಾಯತ ಮುಖಂಡರು ಶುಕ್ರವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹೊಸದಾಗಿ ಜಾತಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಸುವಂತೆ ಒತ್ತಾಯಿಸಿದರು.
ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ಶಿವಾನಂದ ಪಾಟೀಲ ಸೇರಿದಂತೆ ಹಲವು ಸಮುದಾಯದ ಮುಖಂಡರು ಶಿವಶಂಕರಪ್ಪ ಅವರ ಜತೆಗಿದ್ದರು. ಕಳೆದ ಎಂಟು ವರ್ಷಗಳ ಹಿಂದೆ ಕಾಂತರಾಜ್ ಆಯೋಗದಿಂದ ಜಾತಿ ಸಮೀಕ್ಷೆ ನಡೆಸಲಾಗಿತ್ತು. ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯನ್ನು ನಡೆಸಲಾಗುತ್ತದೆ ಎಂದು ಪರಿಗಣಿಸಿ, ಅವರು ಈಗ ಎಂಟು ವರ್ಷಗಳ ಹಿಂದಿನ ಅಂಕಿಅಂಶವನ್ನು ಬಳಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.

ವರದಿಯಲ್ಲಿ ಸಾಕಷ್ಟು ಲೋಪದೋಷಗಳಿದ್ದು, ಅವುಗಳನ್ನು ಸರಿಪಡಿಸಬೇಕು. ಹಾಗಾಗಿ ಹೊಸದಾಗಿ ಸಮೀಕ್ಷೆ ನಡೆಸಿದರೆ ಉತ್ತಮ. ತಾಲೂಕು ಮತ್ತು ಜಿಲ್ಲಾ ಮಟ್ಟದ ಸಭೆಗಳಲ್ಲಿ ಸರ್ವೆ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿಲ್ಲ ಹಾಗೂ ತಮ್ಮ ಸಮುದಾಯದವರಿಂದ ಅಗತ್ಯ ವಿವರಗಳನ್ನು ಪಡೆದಿಲ್ಲ ಎಂಬ ದೂರುಗಳು ಬಂದಿವೆ ಎಂದು ಸಿದ್ದರಾಮಯ್ಯ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಿಳಿಸಿದೆ.
ಅನೇಕರು ತಾವು ಲಿಂಗಾಯತರು ಎಂದು ಅಧಿಕಾರಿಗಳಿಗೆ ತಿಳಿಸದೆ ಸಮುದಾಯದೊಳಗಿನ ತಮ್ಮ ಉಪಜಾತಿಗಳ ವಿವರಗಳನ್ನು ಮಾತ್ರ ನೀಡಿದ್ದಾರೆ. ಸಂಗ್ರಹಿಸಿದ ವಿವರಗಳನ್ನು ಅಧಿಕಾರಿಗಳು ಯಾವುದೇ ಅಡ್ಡ ಪರಿಶೀಲನೆ ನಡೆಸಿಲ್ಲ. ಇಂತಹ ನ್ಯೂನತೆಗಳನ್ನು ಹೊಸದಾಗಿ ಸಮೀಕ್ಷೆ ನಡೆಸಿ ಸರಿಪಡಿಸಬೇಕು ಎಂದು ತಿಳಿಸಿದೆ.

ಹಿಂದುಳಿದ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕಾನಾಥ್ ಮಾತನಾಡಿ, ದೊಡ್ಡ ಸಮುದಾಯಗಳು ಸಣ್ಣ ಸಮುದಾಯಗಳ ಬಗ್ಗೆ ಕಾಳಜಿ ವ್ಯಕ್ತಪಡಿಸಿದರೆ ಉತ್ತಮ. ಲಿಂಗಾಯತರು ಈ ರೀತಿ ವರ್ತಿಸಿದರೆ, ಸಣ್ಣ ಸಮುದಾಯಗಳ ಗತಿಯೇನು? ಇದನ್ನು ಬಸವಣ್ಣನವರ ಭೂಮಿ ಬೆಳಗಾವಿ'ಯಲ್ಲಿ ಈ ಆಕ್ಷೇಪ ಎತ್ತಿರುವುದು ವಿಪರ್ಯಾಸ ಎಂದು ಹೇಳಿದ್ದಾರೆ.
ಈ ಲಿಂಗಾಯತ ನಾಯಕರು ಅಧಿವೇಶನದ ಮುಕ್ತಾಯದ ದಿನದಂದು ಈ ಬೇಡಿಕೆಯನ್ನು ಇಟ್ಟಿರುವುದು ವಿಪರ್ಯಾಸ. ಅಧಿವೇಶನದಲ್ಲಿ ಚರ್ಚೆಗೆ ತೆಗೆದುಕೊಳ್ಳಬಹುದಿತ್ತು ಎಂದು ಕೆಲವು ಹಿಂದುಳಿದ ವರ್ಗಗಳ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ವರದಿ ವಿಚಾರದಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರ ಈ ಧೋರಣೆ ಆಶ್ಚರ್ಯವೇನಿಲ್ಲ. ಈ ಹಿಂದೆಯೂ ಇಂತಹ ವರದಿಗಳು ಸಲ್ಲಿಕೆಯಾದಾಗ ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸುತ್ತಿದ್ದರು. ಅಂತಹ ಒಂದು ವರದಿಯನ್ನು ಲಿಂಗಾಯತರು ಮತ್ತು ಒಕ್ಕಲಿಗರು ಹರಿದು ಹಾಕಿದರು. ಈ ವರದಿಯನ್ನು ಯಾರೂ ಓದದೇ ಇರುವಾಗ ಅದು ಅವೈಜ್ಞಾನಿಕ ಎಂದು ಹೇಗೆ ಹೇಳಲು ಸಾಧ್ಯ? ಎಂದು ಬಿಜೆಪಿ ಎಂಎಲ್ಸಿ ಎ.ಎಚ್.ವಿಶ್ವನಾಥ್ ಹೇಳಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications