ಲಿಂಗಾಯತ ಪಂಚಮಸಾಲಿ ಹೋರಾಟ ಮತ್ತೆ ಮುನ್ನೆಲೆಗೆ: ಸರ್ಕಾರಕ್ಕೆ ಏ.14ರ ಗಡುವು
ಬೆಂಗಳೂರು, ಮಾ.15: ಲಿಂಗಾಯತ ಪಂಚಮಸಾಲಿ ಹೋರಾಟ ಮತ್ತೆ ಮುನ್ನೆಲೆಗೆ ಬಂದಿದ್ದು, ಸರ್ಕಾರಕ್ಕೆ ಮತ್ತೊಂದು ಗಡುವು ನೀಡಲಾಗಿದೆ.
ಲಿಂಗಾಯತ ಪಂಚಮಸಾಲಿ ಮೀಸಲಾತಿಗಾಗಿ ಕೂಡಲಸಂಗಮ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯ ಸತ್ಯಾಗ್ರಹ ಸಂಧರ್ಭದಲ್ಲಿವಿಧಾನಸೌಧದ ಅಧಿವೇಶನದಲ್ಲಿಸರ್ಕಾರವು 2021 ಮಾರ್ಚ 15 ಕ್ಕೆ ಕೊಟ್ಟ ಮಾತಿಗೆ ಒಂದು ವರ್ಷವಾಗಿದೆ. ಈ ಕಾರಣದಿಂದಾಗಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಮಾ.15ರಂದು ಸಭೆ ನಡೆಸಿ ಮುಂದಿನ ಹೋರಾಟದ ಸಿದ್ಧತೆ ಮಾಡಿಕೊಳ್ಳಲಾಯಿತು.
ಬೆಂಗಳೂರಿನ ಲಿಂಗಾಯತ ಪಂಚಮಸಾಲಿ (ಗೌಡ - ಮಲೆಗೌಡ - ದೀಕ್ಷಾ ಲಿಂಗಾಯತರುಗಳ) ದುಂಡು ಮೇಜಿನ ಪರಿಷತ್ ನಲ್ಲಿ ನಿರ್ಧರಿಸಿದ ಮೂರು ಅಂತಿಮ ನಿರ್ಣಯಗಳನ್ನು ಕೈಗೊಂಡು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಘೋಷಿಸಿದರು.

1)ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ಬಜೆಟ್ ಅಧಿವೇಶನದ ಮಾರ್ಚ್ 30ರ ಒಳಗಾಗಿ ಹಿಂದುಳಿದವರ್ಗದ ಆಯೋಗದಿಂದ ವರದಿ ಪಡೆದುಕೊಳ್ಳಬೇಕು.
2) ಏಪ್ರಿಲ್ 14 ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯಂದು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಯನ್ನು ಮುಖ್ಯಮಂತ್ರಿಗಳು ಘೋಷಿಸಬೇಕು.
3) ಏಪ್ರಿಲ್ 14 ರ ಒಳಗಾಗಿ ಒಂದು ವೇಳೆ ಮೀಸಲಾತಿ ಘೋಷಿಸದಿದ್ದರೆ, ಅಂದೇ ಕೂಡಲಸಂಗಮದಲ್ಲಿ ಅಂತಿಮ ಸಭೆ ಕರೆದು, ಉಗ್ರ ಹೋರಾಟದ ಅಂತಿಮ ದಿನವನ್ನು ಘೋಷಿಸುತ್ತೇವೆ ಎಂಬ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಸಭೆಯಲ್ಲಿ ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ, ಸಿದ್ದು ಸವದಿ, ಎಂ.ವೈ. ಪಾಟೀಲ್, ಚನ್ನರಾಜ್ ಹಟ್ಟಿಹೊಳಿ, ಶಾಸಕ ಹಾಗೂ ಮೀಸಲಾತಿ ಚಳುವಳಿಯ ಪಾದಯಾತ್ರೆ ಸ್ವಾಗತ ಸಮಿತಿ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಎಚ್ ಎಸ್ ಶಿವಶಂಕರ ಸಹಿತ ಹಲವರು ಹಾಜರಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications