'ಅಲ್ಪಸಂಖ್ಯಾತ' ಟ್ಯಾಗ್ ಬೇಡ ಎನ್ನುವ ಲಿಂಗಾಯತರಿವರು!
'ಅಲ್ಪಸಂಖ್ಯಾತ' ಟ್ಯಾಗ್ ಬೇಡ ಎನ್ನುವ ಲಿಂಗಾಯತರಿವರು!
ಬೆಂಗಳೂರು, ಮಾರ್ಚ್ 23: 'ಲಿಂಗಾಯತ, ವೀರಶೈವ ಎಂಬ ಪ್ರತ್ಯೇಕ ಧರ್ಮವಿಲ್ಲ, ಬಸವ ತತ್ತ್ವದ ಆಧಾರದ ಮೇಲೆ ಎಲ್ಲರನ್ನು ಲಿಂಗಾಯತ ಎಂದು ಕರೆಯಲಾಗುವುದು, ಪ್ರತ್ಯೇಕ ಧರ್ಮ ಹಾಗೂ ಅಲ್ಪಸಂಖ್ಯಾತ ಮಾನ್ಯತೆ ನೀಡಲಾಗುವುದು' ಎಂದು ಸಿದ್ದರಾಮಯ್ಯ ಸರ್ಕಾರವು ಚರ್ಚೆಯನ್ನು ಹುಟ್ಟಿ ಹಾಕಿದೆ. ಇದಕ್ಕೆ ಕೇಂದ್ರ ಸರ್ಕಾರ ಮಾನ್ಯತೆ ನೀಡಲಿ, ಬಿಡಲಿ, ರಾಜ್ಯದಲ್ಲಂತೂ ಅಲ್ಪಸಂಖ್ಯಾತರು ಎಂಬ ಟ್ಯಾಗ್ ಬೀಳಲಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಆದರೆ, ಲಿಂಗಾಯತ ಸಮುದಾಯದಲ್ಲಿರುವ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಕ್ಕೆ ಸೇರುವ ಜನಾಂಗದವರು ಸರ್ಕಾರದ ಅಲ್ಪಸಂಖ್ಯಾತ ಮಾನ್ಯತೆಯನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ ಎಂದು ತಿಳಿದು ಬಂದಿದೆ.

ಲಿಂಗಾಯತ ಸಮುದಾಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗದವರು ಸೇರಿದಂತೆ ಸರಿ ಸುಮಾರು 99ಕ್ಕೂ ಅಧಿಕ ಜಾತಿ, ಉಪ ಜಾತಿಗಳಿವೆ. ಈ ಪೈಕಿ ಅನೇಕರಿಗೆ ಎಸ್ ಸಿ ಹಾಗೂ ಒಬಿಸಿ ಕೋಟಾದಡಿಯಲ್ಲಿ ಸೌಲಭ್ಯಗಳು ಸಿಗುತ್ತಿವೆ, ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಇದೆ. ಆದರೆ, ಹೊಸ ಧರ್ಮ ಲಿಂಗಾಯತ ಎಂದು ಗುರುತಿಸಿಕೊಂಡರೆ ಅಲ್ಪಸಂಖ್ಯಾತ ಎಂಬ ಹೊಸ ಟ್ಯಾಗ ಸಿಗುವುದೇ ಹೊರತೂ ಮೀಸಲಾತಿ ಬಗ್ಗೆ ಯಾವುದೇ ಭರವಸೆ ಇಲ್ಲ.
ಹೀಗಾಗಿ, 20ಕ್ಕೂ ಅಧಿಕ ಎಸ್ ಸಿ ಹಾಗೂ 15ಕ್ಕೂ ಅಧಿಕ ಒಬಿಸಿ ಕೆಟಗರಿಯ ಲಿಂಗಾಯತರು ಈಗ ಸಿಗುವ ಸೌಲಭ್ಯವನ್ನು ಬಿಟ್ಟು, ಅಲ್ಪಸಂಖ್ಯಾತರು ಎಂದು ಮಾತ್ರ ಕರೆಸಿಕೊಳ್ಳಲು ತಯಾರಿಲ್ಲ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಉಪಾಧ್ಯಕ್ಷ ಗುರುರಾಜ್ ಹುಣಸಿನಮರದ್ ಹೇಳಿದ್ದಾರೆ.
ಸರ್ಕಾರದ ಕ್ರಮದಿಂದ ಶಿಕ್ಷಣ ಸಂಸ್ಥೆಗಳನ್ನು ನಡೆಸುವ ಪ್ರಭಾವಿಗಳಿಗೆ ಮಾತ್ರ ಲಾಭವಾಗಲಿದೆ. ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಸ್ವಲ್ಪ ಮಾನ್ಯತೆ ಹೆಚ್ಚಾಗಲಿದೆ ಎಂದಿದ್ದಾರೆ.
ಎಸ್ ಸಿ / ಎಸ್ಟಿ ಕೆಟಗರಿಗೆ ಬರುವ ಶೇ 7ರಷ್ಟು ಲಿಂಗಾಯತರು ಈಗ ಧರ್ಮಸಂಕಟದಲ್ಲಿದ್ದು, ಹಿಂದೂವಾಗಿ ಮುಂದುವರೆಯಬೇಕೇ ಅಥವಾ ಹೊಸ ಧರ್ಮವನ್ನು ತಮ್ಮದಾಗಿಸಿಕೊಳ್ಳಬೇಕೆ ಎಂಬ ಜಿಜ್ಞಾಸೆಗೆ ಒಳಗಾಗಿದ್ದಾರೆ. ಕಮ್ಮಾರ, ಚಮ್ಮಾರ, ಪಟಗಾರ, ಮಡಿವಾಳ ಹೀಗೆ ವೃತ್ತಿ ಆಧಾರಿತವಾಗಿ ಲಿಂಗಾಯತರು ವಿವಿಧ ಪಂಥಕ್ಕೆ ಸೇರಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications