ಲಿಂಗಾಯತ ಪ್ರತ್ಯೇಕ ಧರ್ಮ: ಪೇಜಾವರ ಶ್ರೀಗಳೇ ನಿಮ್ಮ ಸಲಹೆಯ ಅಗತ್ಯವಿಲ್ಲ
ಲಿಂಗಾಯತ ಮತ್ತು ವೀರಶೈವ ಧರ್ಮಗಳು ಬೇರೆ ಬೇರೆ ಧರ್ಮವಾಗುವುದಕ್ಕೆ ಕಳವಳ ವ್ಯಕ್ತಪಡಿಸುತ್ತಿರುವ ಉಡುಪಿ ಪೇಜಾವರ ಶ್ರೀಗಳ ಹೇಳಿಕೆಗೆ, ರಾಜ್ಯ ಜಲಸಂಪನ್ಮೂಲ ಖಾತೆಯ ಸಚಿವ ಎಂ ಬಿ ಪಾಟೀಲ್ ಕಿಡಿಕಾರಿದ್ದಾರೆ.
ಬೆಂಗಳೂರು, ಜುಲೈ 25: ಲಿಂಗಾಯತ ಮತ್ತು ವೀರಶೈವ ಧರ್ಮಗಳು ಬೇರೆ ಬೇರೆ ಧರ್ಮವಾಗುವ ವಿಚಾರದಲ್ಲಿನ ಕೂಗಿಗೆ ಕಳವಳ ವ್ಯಕ್ತಪಡಿಸುತ್ತಿರುವ ಉಡುಪಿ ಪೇಜಾವರ ಶ್ರೀಗಳ ಹೇಳಿಕೆಗೆ, ರಾಜ್ಯ ಜಲಸಂಪನ್ಮೂಲ ಖಾತೆಯ ಸಚಿವ ಎಂ ಬಿ ಪಾಟೀಲ್ ಕಿಡಿಕಾರಿದ್ದಾರೆ.
ನಮ್ಮ ಧರ್ಮದ ಮುಖಂಡರು ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ನಮಗೆ ನಿಮ್ಮ ಸಲಹೆಯ ಅಗತ್ಯವಿಲ್ಲ ಎಂದು ಸಚಿವ ಎಂ ಬಿ ಪಾಟೀಲ್, ಹಿಂದೂ ಧರ್ಮದ ಹಿರಿಯ ಯತಿ ಪೇಜಾವರ ಶ್ರೀಗಳಿಗೆ ಹೇಳಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಿದ್ದಾಂತವನ್ನು ಪಾಲಿಸುವ ಪೀಠಾಧಿಪತಿಗಳಿಂದ ಲಿಂಗಾಯತ/ವೀರಶೈವ ಧರ್ಮದ ಬಗ್ಗೆ ಪಾಠ ಕೇಳುವ ಅವಶ್ಯಕತೆ ನಮಗಿಲ್ಲ. ಪೇಜಾವರ ಶ್ರೀಗಳು ಈ ವಿಚಾರದಲ್ಲಿ ಮೂಗು ತೂರಿಸದೇ ಇರುವುದು ಸೂಕ್ತ ಎಂದು ಸಚಿವ ಪಾಟೀಲ್ ಹೇಳಿದ್ದಾರೆ.
ನಮ್ಮ ಮುಖ್ಯಮಂತ್ರಿಗಳು ಸಮಾಜ ಒಡೆಯುವ ಕೆಲಸವನ್ನು ಮಾಡುತ್ತಿಲ್ಲ, ಆ ಕೆಲಸವನ್ನು ಯಡಿಯೂರಪ್ಪನವರು ಮಾಡುತ್ತಿದ್ದಾರೆಂದು ಪಾಟೀಲ್ ಆರೋಪಿಸಿದ್ದಾರೆ.
ಸಮಾಜದಲ್ಲಿ ಜಾತಿ ವ್ಯವಸ್ಥೆ ಬೇಕು. ಆದರೆ ಎಲ್ಲರ ನಡುವೆ ಸಾಮರಸ್ಯ ಇರಬೇಕು. ಹಿಂದೂ ಧರ್ಮದ ವಿಭಜನೆ ಬೇಡ. ವೀರಶೈವ ಧರ್ಮದ ವಿಭಜನೆ ಸಲ್ಲದು. ಇದು ಸ್ವೀಕರಿಸಲು ಅರ್ಹ ವಿಚಾರವಲ್ಲ. ಪಂಚ ಪೀಠಾಧಿಪತಿಗಳಿಗೂ ವಿಭಜನೆ ಒಪ್ಪಿಗೆಯಿಲ್ಲ. ವಿರಕ್ತ ಮಠಾಧೀಶರಿಗೆ ಈ ಬೆಳವಣಿಗೆ ಸರಿ ಅನಿಸಿಲ್ಲ ಎಂದು ಪೇಜಾವರ ಶ್ರೀಗಳು ಹೇಳಿಕೆ ನೀಡಿದ್ದರು.
ನನ್ನ ಆಶಯದಲ್ಲಿ ರಾಜಕೀಯ ಉದ್ದೇಶ ಇಲ್ಲ. ಪಕ್ಷ, ರಾಜಕೀಯ ದೃಷ್ಟಿ ನನ್ನಲ್ಲಿ ಇಲ್ಲ. ಹಿಂದೂ ಸಮಾಜದ ಏಳಿಗೆಗೆ ಈ ಸಲಹೆ ಸೂಚನೆ ನೀಡುತ್ತಿದ್ದೇನೆ. ನಾನು ವೀರಶೈವ- ಲಿಂಗಾಯತ ಸಮಾಜದವ ಅಲ್ಲ. ನಾನು ಅವರ ಹಿತೈಷಿಯಾಗಿ ಈ ಸೂಚನೆ ನೀಡುತ್ತಿದ್ದೇನೆ ಎಂದು ಪೇಜಾವರ ಶ್ರೀಗಳು ಹೇಳಿದ್ದರು.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications