Siddaramaiah: ಭ್ರಷ್ಟ ಮುಖ್ಯಮಂತ್ರಿ ಹೇಳಿಕೆ ವಿವಾದ- ಸಿದ್ದರಾಮಯ್ಯ ಕ್ಷಮೆಗೆ ವೀರಶೈವ ಸಂಘಟನೆ ಒತ್ತಾಯ

ಬೆಂಗಳೂರು, ಏಪ್ರಿಲ್‌ 24: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮುದಾಯದ ಬಗ್ಗೆ ಮಾಡಿರುವ ಹೇಳಿಕೆಗೆ ಎಚ್ಚರಿಕೆ ನೀಡಿ ಕ್ಷಮೆಯಾಚಿಸುವಂತೆ ವೀರಶೈವ ಲಿಂಗಾಯತ ಸಂಘಟನೆ ವೇದಿಕೆ ಮನವಿ ಮಾಡಿದೆ. ಕ್ಷಮೆಯಾಚಿಸದಿದ್ದರೆ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ವೇದಿಕೆ ಬೆದರಿಕೆ ಹಾಕಿದೆ.

'ಸಿದ್ದರಾಮಯ್ಯನವರ ಹೇಳಿಕೆ ಸಮುದಾಯದ ಮೇಲೆ ಪರಿಣಾಮ ಬೀರುತ್ತದೆ. ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧಾರ್ಮಿಕ ಸ್ಥಾನಮಾನ ನೀಡುವಂತೆ ಶಿಫಾರಸ್ಸು ಮಾಡುವ ಮೂಲಕ ಸಮುದಾಯವನ್ನು ಒಡೆಯುವ ಪ್ರಯತ್ನವನ್ನು ಲಿಂಗಾಯತ ಸಮುದಾಯ ಮರೆತಿಲ್ಲ. ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲಿ 70 ಸಾವಿರಕ್ಕೂ ಅಧಿಕ ಲಿಂಗಾಯತ ಮತದಾರರಿದ್ದಾರೆ' ಎಂದು ವೀರಶೈವ ಲಿಂಗಾಯತ ಸಂಘಟನೆ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕಣವಾಡಿ ಹೇಳಿದರು.

 Lingayats Community Ask For Apology From Siddaramaiah For his corrupt Lingayat CM Statement

ಲಿಂಗಾಯತ ಮುಖ್ಯಮಂತ್ರಿಯೊಬ್ಬರು ಕರ್ನಾಟಕದ ಎಲ್ಲ ಭ್ರಷ್ಟಾಚಾರದ ಮೂಲ ಎಂದು ಶನಿವಾರ ಸಿದ್ದರಾಮಯ್ಯ ಹೇಳಿಕೆ ನೀಡಿ ವಿವಾದಕ್ಕೆ ಕಾರಣರಾಗಿದ್ದಾರೆ. ಮುಂದಿನ ಮುಖ್ಯಮಂತ್ರಿ ಲಿಂಗಾಯತರಾಗಬೇಕೆಂಬ ಬೇಡಿಕೆಯನ್ನು ಬಿಜೆಪಿ ಬೆಂಬಲಿಸುತ್ತಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಈ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯನವರ ಹೇಳಿಕೆ ಇಡೀ ಲಿಂಗಾಯತ ಸಮುದಾಯಕ್ಕೆ ಅವಮಾನ ಮಾಡಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಕೇವಲ ಬಸವರಾಜ ಬೊಮ್ಮಾಯಿ ಅವರನ್ನು ಗುರಿಯಾಗಿಟ್ಟುಕೊಂಡು ನೀಡಿರುವ ಹೇಳಿಕೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸಮುದಾಯದ ಪ್ರಾಮಾಣಿಕ ಮುಖ್ಯಮಂತ್ರಿಗಳನ್ನು ಗೌರವಿಸುತ್ತೇನೆ ಎಂದು ಮಾಜಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಹೇಳಿಕೆಯನ್ನು ತಿರುಚಿ ಬಿಜೆಪಿ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.

'ಸಮುದಾಯವನ್ನು ಭ್ರಷ್ಟರೆಂದು ಕರೆಯುವ ಮೂಲಕ ವೀರಶೈವ-ಲಿಂಗಾಯತರನ್ನು ಅವಮಾನಿಸುತ್ತಿದ್ದಾರೆ ಎಂದು ಕೆಲವು ಬಿಜೆಪಿ ನಾಯಕರು ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಅದು ನಿಜವಲ್ಲ. ಟಿವಿ ವಾಹಿನಿಯೊಂದರ ಜತೆಗಿನ ಚರ್ಚೆಯಲ್ಲಿ ನಾನು (ಮುಖ್ಯಮಂತ್ರಿ) ಬಸವರಾಜ ಬೊಮ್ಮಾಯಿ ಅತ್ಯಂತ ಭ್ರಷ್ಟ ಎಂದು ಹೇಳಿದ್ದೆ. ಅದರಲ್ಲಿ ತಪ್ಪೇನು? ಅದು ಸತ್ಯ. ಅದು ಎಲ್ಲರಿಗೂ ಗೊತ್ತು. ಲಿಂಗಾಯತ ಸಮುದಾಯ ಭ್ರಷ್ಟ ಎಂದು ನಾನು ಯಾವತ್ತೂ ಹೇಳಿಲ್ಲ. ನಾನು ಆ ಕಡೆಗೆ ಯಾವುದೇ ಕಾರಣಕ್ಕೂ ಯೋಚಿಸಿಲ್ಲ. ಅವರ ಆರೋಪಗಳು ಸುಳ್ಳು' ಎಂದು ಸಿದ್ದರಾಮಯ್ಯ ಪತ್ರಕರ್ತರಿಗೆ ತಿಳಿಸಿದರು.

ಲಿಂಗಾಯತ ಸಮುದಾಯದ ವಿರುದ್ಧ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರಿಗೆ ಕರ್ನಾಟಕದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬಿಜೆಪಿಯ 'ಲಿಂಗಾಯತ ಸಿಎಂ' ಬೇಡಿಕೆಗೆ ವ್ಯಂಗ್ಯವಾಡಿದರು. 'ಅವರು (ಬಿಜೆಪಿ) ಈಗ ಅದನ್ನು ಏಕೆ ಪ್ರಾರಂಭಿಸಿದ್ದಾರೆ? ಅವರು ಅದನ್ನು ಮೊದಲು ಏಕೆ ಮಾಡಲಿಲ್ಲ? ಬಿಜೆಪಿಯವರು ಚುನಾವಣೆ ಗೆಲ್ಲಲು ಮಾತ್ರ ಇದನ್ನು ಮಾಡುತ್ತಿದ್ದಾರೆ. ಲಿಂಗಾಯತ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದರೂ ಅವರು ಗೆಲ್ಲುವುದಿಲ್ಲ' ಎಂದು ಶೆಟ್ಟರ್ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+