ಕುಡುಕರೇ ಗಮನಿಸಿ: ಕರ್ನಾಟಕದಲ್ಲಿ ಈ ವೀಕೆಂಡ್ನಲ್ಲಿ ಎಣ್ಣೆ ಸಿಗಲ್ಲ!
ಬೆಂಗಳೂರು, ಮೇ 5: ಸಿಲಿಕಾನ್ ಸಿಟಿಯಲ್ಲಿ ವೀಕೆಂಡ್ ಪಾರ್ಟಿ ಮಾಡಬೇಕು. ಸ್ಯಾಲರಿ ಬಂದಿರುವ ಖುಷಿಯಲ್ಲಿ ಫ್ರೆಂಡ್ಸ್ ಜೊತೆ ಗುಂಡು ಹಾಕಬೇಕು ಎಂದುಕೊಂಡಿರುವ ಮದ್ಯಪ್ರಿಯರಿಗೆಲ್ಲ ಒಂದು ಶಾಕಿಂಗ್ ನ್ಯೂಸ್. ಶುಕ್ರವಾರದಿಂದಲೇ ರಾಜ್ಯದಲ್ಲಿ ಮುಂದಿನ ಮೇ 19ವರೆಗೂ ಎಣ್ಣೆ ಸಿಗುವುದಿಲ್ಲ.
ರಾಜ್ಯದಲ್ಲಿ ಮೇ 6 ರಿಂದ 19ರವರೆಗೂ ಮದ್ಯ ಮಾರಾಟಗಾರರು ಮುಷ್ಕರ ನಡೆಸುವುದಕ್ಕೆ ನಿರ್ಧರಿಸಿದ್ದಾರೆ. ಇದರಿಂದ ಮುಂದಿನ 15 ದಿನಗಳವೆರಗೂ ಮದ್ಯಪ್ರಿಯರಿಗೆ ಎಣ್ಣೆ ಸಿಗುವುದೇ ಅನುಮಾನವಾಗಿದೆ.
ಉಡುಪಿಯಲ್ಲಿ ಮಾತನಾಡಿದ ರಾಜ್ಯ ಮದ್ಯ ಮಾರಾಟಾಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಈ ಕುರಿತು ಘೋಷಿಸಿದ್ದಾರೆ.
"ಕರ್ನಾಟಕದಲ್ಲಿ ಕೆಎಸ್ಪಿಸಿಎಲ್ ಎಂಡಿ ತುಘಲಕ್ ದರ್ಬಾರ್ ನಡೆಸುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಲಿ, ಅಬಕಾರಿ ಸಚಿವರಾಗಲಿ ನಮ್ಮ ಕೈಗೆ ಸಿಗುತ್ತಿಲ್ಲ. ಒಂದು ದಿನ ಮದ್ಯ ಖರೀದಿ ಮಾಡದಿದ್ದರೆ 70 ಕೋಟಿ ರೂಪಾಯಿ ನಷ್ಟವಾಗುತ್ತದೆ. ಈ ಹಿನ್ನೆಲೆ ವಿಭಾಗ ಹಂತದಲ್ಲಿ ಮದ್ಯ ಖರೀದಿ ಮಾಡದಂತೆ ಸೂಚನೆ ನೀಡಲಾಗಿದೆ" ಎಂದು ಹೇಳಿದ್ದಾರೆ.

ಮೇ.19ರವರೆಗೂ ನಿರಂತರ ಮುಷ್ಕರ: ಕಲಬುರಗಿ ವಿಭಾಗದಲ್ಲಿ ಶುಕ್ರವಾರ ಮದ್ಯ ವ್ಯಾಪಾರಿಗಳಿಂದ ಮುಷ್ಕರ ನಡೆಸಲಾಗುತ್ತದೆ. ಹೊಸಪೇಟೆ, ಬೆಳಗಾವಿ, ಮೈಸೂರು ಮತ್ತು ಮಂಗಳೂರು ವಿಭಾಗದಲ್ಲಿಯೂ ಮದ್ಯ ಸಿಗುವುದಿಲ್ಲ. ಮುಂದಿನ ಮೇ 19ರವರೆಗೂ ನಿರಂತರವಾಗಿ ವಿವಿಧ ಜಿಲ್ಲೆಗಳಲ್ಲಿ ಮುಷ್ಕರ ನಡೆಸುವುದರ ಬಗ್ಗೆ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ.

ಯಾವ ಜಿಲ್ಲೆಯಲ್ಲಿ ಯಾವಾಗ ಸಿಗಲ್ಲ ಮದ್ಯ?
* ಮೇ 6: ಕಲಬುರಗಿ ವಿಭಾಗದಲ್ಲಿ ಮುಷ್ಕರ ನಡೆಯಲಿದ್ದು, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಮದ್ಯ ಸಿಗುವುದಿಲ್ಲ
* ಮೇ 10: ಹೊಸಪೇಟೆ ವಿಭಾಗದಲ್ಲಿ ಮುಷ್ಕರ ನಡೆಸಲಾಗುತ್ತದೆ. ಅಂದು ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ ಮತ್ತು ಬೆಳಗಾವಿ ವಿಭಾಗದ ಬಾಗಲಕೋಟೆ, ವಿಜಯಪುರ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮದ್ಯ ಪ್ರಿಯರಿಗೆ ಮದ್ಯ ಸಿಗುವುದಿಲ್ಲ.
* ಮೇ 12: ಮೈಸೂರು ವಿಭಾಗದಲ್ಲಿ ಮುಷ್ಕರ ನಡೆಯಲಾಗುತ್ತಿದ್ದು, ಈ ವೇಳೆಯಲ್ಲಿ ಮೈಸೂರು, ಚಿಕ್ಕಮಗಳೂರು, ಹಾಸನ, ಮಂಡ್ಯ ಹಾಗೂ ಮಂಗಳೂರು ವಿಭಾಗದ ದಕ್ಷಿಣ ಕನ್ನಡ, ಕೊಡಗು, ಉಡುಪಿ, ಶಿವಮೊಗ್ಗ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಣ್ಣೆ ಸಿಗುವುದಿಲ್ಲ.
* ಮೇ 17: ಬೆಂಗಳೂರು ನಗರ ವಿಭಾಗದಲ್ಲಿ ಮುಷ್ಕರ ನಡೆಸಲಾಗುತ್ತದೆ. ಅಂದು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮದ್ಯ ಮಾರಾಟ ಇರುವುದಿಲ್ಲ.
* ಮೇ 19ರಂದು ಬೆಂಗಳೂರು ನಗರ ವಿಭಾಗದಲ್ಲಿ ಮುಷ್ಕರ ನಡೆಯಲಿದ್ದು, ಅಂದು ಕೆಎಸ್ ಬಿಸಿ ಎಲ್ ಡಿಪೋಗಳಲ್ಲಿ ಮದ್ಯ ಖರೀದಿ ಮಾಡುವುದಿಲ್ಲ
Recommended Video
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications