liquor lovers: ಮದ್ಯ ಪ್ರಿಯರ ಸಮಸ್ಯೆಯ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ, ಏನಿದು ಹೊಸ ಆರೋಗ್ಯ ಸಮಸ್ಯೆ!
liquor lovers: ಕರ್ನಾಟಕದಲ್ಲಿ ಕಳೆದ ಎರಡೂವರೆ ವರ್ಷದ ಅವಧಿಯಲ್ಲಿ ಹಲವು ಬಾರಿ ಬಿಯರ್ ಸೇರಿದಂತೆ ವಿವಿಧ ಮದ್ಯಗಳ ಬೆಲೆ ಹೆಚ್ಚಳವಾಗಿದೆ. ಇದರಿಂದ ಮದ್ಯ ಮಾರಾಟದಲ್ಲಿ ಭಾರೀ ಕುಸಿತ ಕಂಡಿದೆ. ಆದರೆ, ಮದ್ಯ ಮಾರಾಟ ಇಳಿಕೆ ಹಾಗೂ ಮದ್ಯ ಬೆಲೆ ಏರಿಕೆಯ ನಡುವೆ ಇದೀಗ ಮದ್ಯ ಪ್ರಿಯರು ಗಂಭೀರವಾದ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿರುವ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಗಂಭೀರವಾದ ಚರ್ಚೆಗಳು ನಡೆದಿವೆ.
ರಾಜ್ಯದಲ್ಲಿ ಮದ್ಯ ಪ್ರಿಯರು ಲಿವರ್ ಸಿರೋಸಿಸ್ ಎನ್ನುವ ಗಂಭೀರವಾದ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದು ತೀರ ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರವು ಮದ್ಯ ಪ್ರಿಯರ ಆರೋಗ್ಯದ ದೃಷ್ಟಿಯಿಂದ ಕೆಲವೊಂದು ತುರ್ತು ಹಾಗೂ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸದನದಲ್ಲಿ ವಿಷಯ ಪ್ರಸ್ತಾಪಿಸಲಾಗಿದೆ. ಕರ್ನಾಟಕದ ಮದ್ಯ ಪ್ರಿಯರು ಈ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ತುರ್ತು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಮದ್ಯ ಸೇವಿಸುವವರಲ್ಲಿ ಲಿವರ್ ಸಿರೋಸಿಸ್ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರವು ಅವರ ಚಿಕಿತ್ಸೆಗೆ ಅಬಕಾರಿ ತೆರಿಗೆಯ ಆದಾಯದಲ್ಲಿ ಶೇ 20ರಷ್ಟು ತೆರಿಗೆಯನ್ನು ತೆಗೆದಿರಿಸಬೇಕು. ಮದ್ಯ ಪ್ರಿಯರ ಆರೋಗ್ಯವನ್ನು ರಕ್ಷಿಸಬೇಕು ಎಂದು ವಿಧಾನ ಪರಿಷತ್ನಲ್ಲಿ ವಿರೋಧ ಪಕ್ಷದ ಸಚೇತಕ ಎನ್. ರವಿಕುಮಾರ್ ಅವರು ಒತ್ತಾಯಿಸಿದ್ದಾರೆ.
ಈ ವಿಷಯ ಗಂಭೀರ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಉತ್ತರಿಸಿರುವ ಸಭಾನಾಯಕ ಎನ್. ಎಸ್. ಬೋಸರಾಜು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ, ಪ್ರತ್ಯೇಕ ನಿಧಿ ತೆಗೆದಿರಸಲು ಆಗುವುದಿಲ್ಲ ಎಂದಿದ್ದಾರೆ. ಅಲ್ಲದೇ ಮುಂದುವರಿದು ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರವೇ ಈ ಮಾದರಿಯ ನಿಧಿಯೊಂದನ್ನು ಸ್ಥಾಪಿಸಲಿ ಎಂದು ಹೇಳಿದ್ದಾರೆ.
ರಮೇಶ್ ಬಾಬು ಅವರು, ಕೇಂದ್ರ ಸರ್ಕಾರವೇ ನಮ್ಮಿಂದ ಸಂಗ್ರಹಿಸುವ ತೆರಿಗೆಯಲ್ಲಿ ಶೇ 25ರಷ್ಟುನ್ನು ವಾಪಸ್ ಕೊಡಲಿ. ಆಗ ಎಲ್ಲಾ ನಿಧಿಗಳನ್ನೂ ನಾವು ಸ್ಥಾಪಿಸಬಹುದು ಎಂದು ಕಿಚಾಯಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications