ದರ ಏರಿಕೆಯಾದರೂ ಮದ್ಯ ಮಾರಾಟ ಜೋರು: ಅಬಕಾರಿ ಇಲಾಖೆಗೆ ಭರ್ಜರಿ ಆದಾಯ
ಬೆಂಗಳೂರು, ಮೇ 27: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪ್ರಯತ್ನ ನಡೆಸುತ್ತಿರುವ ಸಂದರ್ಭದಲ್ಲಿ ಸಿಹಿಸುದ್ದಿಯೊಂದು ಸಿಕ್ಕಿದೆ. ರಾಜ್ಯದಲ್ಲಿ ಮದ್ಯದ ದರ ಏರಿಕೆಯಾದರೂ ಸಹ ಅಬಕಾರಿ ಇಲಾಖೆಯ ಆದಾಯ ಹೆಚ್ಚಾಗಿದೆ. ಇದರಿಂದಾಗಿ ಖಜಾನೆ ತುಂಬಲಿದೆ.
ರಾಜ್ಯದಲ್ಲಿ ಮದ್ಯ ಮಾರಾಟದಲ್ಲಿ ಹೆಚ್ಚಳ ಕಂಡುಬಂದಿದೆ. ಸರ್ಕಾರದ ಬೊಕ್ಕಸಕ್ಕೆ ಹೆಚ್ಚು ಆದಾಯ ತಂದುಕೊಡುವ ಅಬಕಾರಿ ಇಲಾಖೆಯ ಆದಾಯ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಹೆಚ್ಚಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮೂರು ಬಾರಿ ರಾಜ್ಯದಲ್ಲಿ ಮದ್ಯದ ದರ ಏರಿಕೆ ಮಾಡಲಾಗಿದೆ. ಆದರೆ ಮದ್ಯ ಮಾರಾಟ ಇಳಿಮುಖವಾಗಿಲ್ಲ. ಅಬಕಾರಿ ಇಲಾಖೆ ಕಳೆದ ವರ್ಷಕ್ಕಿಂತ ಶೇ 15ರಷ್ಟು ಹೆಚ್ಚಿನ ಆದಾಯವನ್ನು ಸಂಗ್ರಹಣೆ ಮಾಡಿದೆ. ಇದರಿಂದಾಗಿ ಸರ್ಕಾರದ ಬೊಕ್ಕಸ ತುಂಬಿದೆ.
ಎಷ್ಟು ಗುರಿ ನೀಡಲಾಗಿತ್ತು?; ಹಣಕಾಸು ವರ್ಷದ ಆರಂಭದಲ್ಲಿಯೇ ಸರ್ಕಾರ ವಿವಿಧ ಇಲಾಖೆಗಳ ಆದಾಯ ಸಂಗ್ರಹಣೆಗೆ ಗುರಿ ನೀಡುತ್ತದೆ. ಈ ವರ್ಷ 34,500 ಕೋಟಿ ರೂ. ಆದಾಯ ಸಂಗ್ರಹದ ಗುರಿಯನ್ನು ನೀಡಲಾಗಿತ್ತು. ಮಾರ್ಚ್ ಅಂತ್ಯದ ತನಕ 34,628 ಕೋಟಿ ರೂ. ಆದಾಯ ಸಂಗ್ರಹವಾಗಿದೆ.
ಕಳೆದ ವರ್ಷ ಇಲಾಖೆಗೆ ನೀಡಿದ್ದ ಗುರಿ 32,000 ಕೋಟಿ. ಆದರೆ ಆರ್ಥಿಕ ವರ್ಷದ ಅಂತ್ಯದಲ್ಲಿ 29,920 ಕೋಟಿ ರೂ. ಮಾತ್ರ ಆದಾಯ ಸಂಗ್ರಹವಾಗಿತ್ತು. ಆದರೆ ಈ ಬಾರಿ ಮೂರು ಬಾರಿ ಮದ್ಯದ ದರಗಳು ಹೆಚ್ಚಾದರೂ ಅದು ಮಾರಾಟದ ಮೇಲೆ ಯಾವುದೇ ಪ್ರಭಾವ ಬೀರಿಲ್ಲ.
ರಾಜ್ಯ ಸರ್ಕಾರಕ್ಕೆ ಅಬಕಾರಿ ಸುಂಕ ಬಹುದೊಡ್ಡ ಆದಾಯದ ಮೂಲವಾಗಿದೆ. ಕಂದಾಯ, ಮುಜರಾಯಿ, ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳು ರಾಜ್ಯದ ಆದಾಯಕ್ಕೆ ಪ್ರಮುಖ ಮೂಲಗಳು. ಇದರಲ್ಲಿ ಅಬಕಾರಿ ಇಲಾಖೆಯು ಗುರಿಗಿಂತ ಹೆಚ್ಚಿನ ಲಾಭ ಮಾಡಿದ್ದು, ಸರ್ಕಾರಕ್ಕೆ ಸಹಾಯಕವಾಗಿದೆ.
ಲೋಕಸಭೆ ಚುನಾವಣೆ 2024 ಅಬಕಾರಿ ಇಲಾಖೆಯ ಆದಾಯ ಹೆಚ್ಚಳವಾಗಲು ಸಹಾಯಕವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಮಾರ್ಚ್ನಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಯಿತು. ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ನಡೆಯಿತು.
ರಾಜಕೀಯ ಸಮಾವೇಶ, ಚುನಾವಣಾ ಪ್ರಚಾರ ಎಂದು ಚುನಾವಣೆ ಸಮಯದಲ್ಲಿ ಮದ್ಯ ಮಾರಾಟವಾಗುವುದು ಹೆಚ್ಚು ಸುಮಾರು ಎರಡು ತಿಂಗಳ ಕಾಲದ ಚುನಾವಣೆಯ ಕಾವು, ಬೇಸಿಗೆಯ ಧಗೆ ಮದ್ಯ ಮಾರಾಟ ಹೆಚ್ಚಳಕ್ಕೆ ಕಾರಣ ಎಂದು ಸಹ ವಿಶ್ಲೇಷಿಸಲಾಗುತ್ತಿದೆ.
ಮದ್ಯ ಮಾರಾಟ ನಿಷೇಧ: ಜೂನ್ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಕರ್ನಾಟಕ ವಿಧಾನ ಪರಿಷತ್ತಿನ 6 ಕ್ಷೇತ್ರಗಳಿಗೆ ಮತದಾನ ಜೂನ್ 3ರಂದು ನಡೆಯಲಿದೆ.
ಈ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ವಿವಿಧ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967 ರ ನಿಯಮ 10ಬಿ ಅಡಿಯಲ್ಲಿ ಪ್ರತ್ಯಾಯೊಜಿತವಾಗಿರುವ ಅಧಿಕಾರದಂತೆ ಜೂನ್ 1ರ ಸಂಜೆ 4 ಗಂಟೆಯಿಂದ ಜೂನ್ 3ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ವಿಧದ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಜೂನ್ 3ರಂದು ಬೆಂಗಳೂರು ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಮತದಾನ ನಡೆಯುತ್ತಿದೆ. ಕ್ಷೇತ್ರದ ವ್ಯಾಪ್ತಿಗೆ ಬೆಂಗಳೂರು ನಗರ (ಕೇಂದ್ರ, ಉತ್ತರ, ದಕ್ಷಿಣ), ಬೆಂಗಳೂರು ಗಾಮೀಣ ಮತ್ತು ರಾಮನಗರ ಜಿಲ್ಲೆಗಳು ಒಳಪಡುತ್ತವೆ. ಆದ್ದರಿಂದ ಬೆಂಗಳೂರು ನಗರದಲ್ಲಿಯೂ ಮದ್ಯ ಮಾರಾಟ ನಿಷೇಧಿಸಲಾಗಿದೆ.
-
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 104 ಕೋಟಿ ರೂ. ವೆಚ್ಚದಲ್ಲಿ ಉಚಿತ ಶೂ, ಸಾಕ್ಸ್ ವಿತರಣೆಗೆ ಸರ್ಕಾರದ ಆದೇಶ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ












Click it and Unblock the Notifications