ಕರ್ನಾಟಕ ಸರ್ಕಾರಿ ನೌಕರರಿಗೆ 2021ರ ರಜಾ ದಿನಗಳ ಪಟ್ಟಿ!
ಬೆಂಗಳೂರು, ನ. 21: ಕರ್ನಾಟಕ ಸರ್ಕಾರವು ಮುಂದಿನ ವರ್ಷದ ಅಂದರೆ 2021ನೇ ಸಾಲಿನ ಸರ್ಕಾರಿ ನೌಕರರ ರಜಾ ದಿನಗಳನ್ನು ಅಧಿಕೃತವಾಗಿ ಪ್ರಕಟಿಸಿ ಅಧಿಸೂಚನೆ ಹೊರಡಿಸಿದೆ. ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಈ ಬಗ್ಗೆ ಅಧಿಕೃತ ಆದೇಶ ಮಾಡಿದ್ದು, ಒಟ್ಟು 19 ಪರಿಮಿತ ರಜಾ ದಿನಗಳನ್ನು ಘೋಷಣೆ ಮಾಡಿದೆ.
ಇದರೊಂದಿಗೆ ಪ್ರತಿ ತಿಂಗಳ ಎರಡನೇ ಶನಿವಾರ ಮತ್ತು ಪ್ರತಿ ಭಾನುವಾರಗಳು ರಜಾ ದಿನಗಳಾಗಿವೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ರಾಜ್ಯಪಾಲರ ಆದೇಶದಂತೆ ಸಿಬ್ಬಂದಿ, ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಮೊಹಮ್ಮದ್ ನಯೀಮ್ ಮೊಮಿನ್ ಅವರು ಆದೇಶ ಹೊರಡಿಸಿದ್ದು ಸಂಪೂರ್ಣ ಮಾಹಿತಿ ಮುಂದಿದೆ.
ರಾಜ್ಯ ಸರ್ಕಾರವು 2021ನೇ ಸಾಲಿನಲ್ಲಿ ಸರ್ಕಾರಿ ನೌಕರರಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಈ ಮುಂದಿನಂತಿದೆ. ಜೊತೆಗೆ ಪ್ರತಿ ತಿಂಗಳ ಎಲ್ಲ ಎರಡನೇ ಶನಿವಾರ, ನಾಲ್ಕನೇ ಶನಿವಾರ ಹಾಗೂ ಪ್ರತಿ ಭಾನುವಾರ ಸಾರ್ವತ್ರಿಕ ಸರ್ಕಾರಿ ರಜಾ ದಿನಗಳಾಗಿವೆ.

* 01.01.2021: ನೂತನ ವರ್ಷಾರಂಭ
* 30.03.2021: ಷಬ್-ಎ-ಬರಾತ್
* 03.04.2021: ಹೋಲಿ ಸ್ಯಾಟರ್ಡೇ
* 17.04.2021: ದೇವರ ದಾಸಿಮಯ್ಯ ಜಯಂತಿ
* 21.04.2021: ಶ್ರೀರಾಮ ನವಮಿ
* 07.05.2021: ಜುಮತ್-ಉಲ್-ವಿದಾ
* 10.05.2021: ಷಬ್-ಎ-ಖದರ್
* 17.05.2021: ಶ್ರೀ ಶಂಕರಾಚಾರ್ಯ ಜಯಂತಿ
* 26.05.2021: ಬುದ್ಧ ಪೂರ್ಣಿಮ
* 20.08.2021: ವರಮಹಾಲಕ್ಷ್ಮಿ ವ್ರತ
* 21.08.2021: ಓಣಂ ಹಬ್ಬ, ಋಗ್ ಉಪಾಕರ್ಮ
* 23.08.2021: ಬ್ರಹ್ಮಶ್ರೀ ನಾರಾಯಣಗುರು ಜಯಂತಿ
* 08.09.2021: ಕನ್ಯ ಮಾರಯಮ್ಮ ಜಯಂತಿ
* 09.09.2021: ಸ್ವರ್ಣಗೌರಿ ವ್ರತ
* 17.09.2021: ವಿಶ್ವಕರ್ಮ ಜಯಂತಿ
* 18.10.2021: ತುಲಾ ಸಂಕ್ರಮಣ
* 19.11.2021: ಗುರುನಾನಕ್ ಜಯಂತಿ
* 20.11.2021: ಹುತ್ತರಿ ಹಬ್ಬ
* 24.12.2021: ಕ್ರಿಸ್ಮಸ್ ಈವ್
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications