ಸಿಎಂ ಪಟ್ಟಕ್ಕೆ ಪಟ್ಟು: ಡಿ ಕೆ ಶಿವಕುಮಾರ್ ಪರ ಇರುವ ಶಾಸಕರ ಪಟ್ಟಿ ಇಲ್ಲಿದೆ?
ಬೆಂಗಳೂರು, ನವೆಂಬರ್ 24: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರೈಸಿದೆ. ಅದ್ಯ ಕೈ ಪಾಳಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ರಾಜ್ಯದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ನಡುವೆ ಕಾಂಗ್ರೆಸ್ ಹೈಕಮಾಂಡ್ ಒತ್ತಡಕ್ಕೆ ಸಿಲುಕಿದೆ. ಕಾಂಗ್ರೆಸ್ ಪಾಳಯಲ್ಲಿ ಕೈ ಕಿತ್ತಾಟ ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ನಿರ್ಧಾರವನ್ನು ಕೈಗೊಳ್ಳಯವ ಇಕ್ಕಟ್ಟಿಗೆ ಹೈಕಮಾಂಡ್ ಸಿಲುಕಿದೆ.
ಹೌದು, ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಸಿದ್ದರಾಮಯ್ಯ ಬಣ ಹಾಗೂ ಡಿ ಕೆ ಶಿವಕುಮಾರ್ ಬಣದ ನಡುವೆ ತೀವ್ರ ಜಟಾಪಟಿ ನಡೆಯುತ್ತಿದ್ದು, ಬಹಿರಂಗವಾಗಿ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಹಲವು ಡಿಕೆಶಿ ಬಣದ ಶಾಸಕರು ಹೇಳಿಕೆ ನೀಡುತ್ತಿದ್ರೆ, ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದ ಶಾಸಕರು ಹಾಗೂ ಸಚಿವರು ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ಮಾತುಗಳು ಕೇಳಿ ಬಂದಿವೆ.

ಇತ್ತ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರೋಕ್ಷವಾಗಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಈಗಾಗಲೇ ಡಿ ಕೆ ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡ ಕೆಲವು ಶಾಸಕರು ದೆಹಲಿ ಯಾತ್ರೆ ನಡೆಸಿದ್ದಾರೆ. ಇನ್ನೂ ಡಿಕೆ ಶಿವಕುಮಾರ್ ಪರವಾಗಿ ಕೆಲವು ಶಾಸಕರು ದೆಹಲಿ ಯಾತ್ರೆ ಕೈಗೊಂಡಿರುವುದು ಸದ್ಯ ಕಾಂಗ್ರೆಸ್ ಹೈಕಮಾಂಡ್ಗೆ ದೊಡ್ಡ ತಲೆನೋವಾಗಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಡಿಕೆ ಶಿವಕುಮಾರ್ ಅವರ ಪರವಾಗಿ ಹಲವು ಶಾಸಕರು ದೆಹಲಿ ಯಾತ್ರೆಯನ್ನ ಕೈಗೊಳ್ಳುವ ಮೂಲಕ ಅಧಿಕಾರ ಹಂಚಿಕೆಯ ಸೂತ್ರದಂತೆ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಸಂದೇಶವನ್ನು ನೀಡಿದ್ದಾರೆ. ಇದು ಪರೋಕ್ಷವಾಗಿ ಒತ್ತಡ ತಂತ್ರಗಾರಿಕೆ ಎಂಬುವುದು ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಸಿಎಂ ಆಯ್ಕೆ ಶಾಸಕರಿಗೆ ಬಿಟ್ಟಿರುವುದು. ಸಿಎಂ ಯಾರು ಆಗಬೇಕು ಎಂದು ನಿರ್ಧಾರ ಮಾಡುವವರು ಶಾಸಕರು ಎಂದು ಹೇಳಿದ್ದರು. ಇದಕ್ಕೆ ಕೌಂಟರ್ ಆಗಿ ಸಿಎಂ ಸ್ಥಾನ ಆಯ್ಕೆ ಮಾಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಈ ಮೂಲಕ ಶಾಸಕರ ಅಭಿಪ್ರಾಯಕ್ಕಿಂತ ಹೈಕಮಾಂಡ್ ಅಭಿಪ್ರಾಯವೇ ಮುಖ್ಯ ಎಂದ ಸಂದೇಶ ರವಾನೆ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಪರ ಇರುವ ಶಾಸಕರು
* ಗುಬ್ಬಿ ಶ್ರೀನಿವಾಸ್ ( ಶಾಸಕ)
* ಬಿ ಶಿವಣ್ಣ ( ಶಾಸಕ)
* ಮಾಗಡಿ ಬಾಲಕೃಷ್ಣ ( ಶಾಸಕ)
* ಎನ್ ಶ್ರೀನಿವಾಸ್ ( ಶಾಸಕ)
* ಶರತ್ ಬಚ್ಚೇಗೌಡ ( ಶಾಸಕ)
* ಗುಬ್ಬಿ ಶ್ರೀನಿವಾಸ್ ( ಶಾಸಕ)
* ಕುಣಿಗಲ್ ರಂಗನಾಥ್ ( ಶಾಸಕ)
* ಇಕ್ಬಾಲ್ ಹುಸೇನ್ ( ಶಾಸಕ)
* ದಿನೇಶ್ ಗೂಳಿಗೌಡ (ಎಂಎಲ್ ಸಿ)
* ಮಹೇಂದ್ರ ತಮ್ಮಣ್ಣ ( ಶಾಸಕ)
* ರವಿ ಗಣಿಗ ( ಶಾಸಕ)
* ರಾಜೇಗೌಡ ( ಶಾಸಕ)
* ಬಸವರಾಜ ಶಿವಗಂಗಾ ( ಶಾಸಕ)
* ಎನ್ ಚೆಲುವರಾಯಸ್ವಾಮಿ ( ಸಚಿವ)
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications