ಲೀಥಿಯಂ ಕೋಶ ಉತ್ಪಾದನೆ: ರಾಜ್ಯದಲ್ಲಿ 8 ಸಾವಿರ ಕೋಟಿ ರೂ. ಹೂಡಿಕೆಗೆ ಐಬಿಸಿ ಕಂಪನಿ ಒಲವು

ಬೆಂಗಳೂರು, ಜೂನ್ 19: ಕರ್ನಾಟಕ ಸೇರಿದಂತೆ ದೇಶದಲ್ಲಿ ವಿದ್ಯುತ್‌ ಚಾಲಿತ ವಾಹನಗಳ ಬಳಕೆ, ಉತ್ಪಾದನೆ ಹೆಚ್ಚಾಗುತ್ತಿದೆ. ಈ ವಾಹನಗಳಿಗೆ ಲೀಥಿಯಂ ಕೋಶಗಳ ಅಧಿಕ ಪ್ರಮಾಣದದಲ್ಲಿ ಅಗತ್ಯವಿದೆ. ಈ ಲೀಥಿಯಂ ಕೋಶಗಳ ಉತ್ಪಾದನೆಗಾಗಿ ಕರ್ನಾಟಕದಲ್ಲಿ ಕಂಪನಿಯೊಂದು ಹೂಡಿಕೆಗೆ ಮುಂದಾಗಿದೆ.

ಹೌದು, ವಿದ್ಯುತ್‌ ಚಾಲಿತ ವಾಹನಗಳಿಗೆ ಅಗತ್ಯವಾದ ಲೀಥಿಯಂ ಕೋಶಗಳ ತಯಾರಿಕೆಗೆ ಹೆಸರಾಗಿರುವ ಇಂಟರ್ ನ್ಯಾಷನಲ್‌ ಬ್ಯಾಟರಿ ಕಂಪನಿ (IBC) ರಾಜ್ಯದಲ್ಲಿ 8,000 ಕೋಟಿ ರೂ. ಬಂಡವಾಳ ಹೂಡಲು ಆಸಕ್ತಿ ತೋರಿದೆ. ಈ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರು ಕಂಪನಿಯ ಉನ್ನತ ಪ್ರತಿನಿಧಿಗಳೊಂದಿಗೆ ಸೋಮವಾರ ಪ್ರಾಥಮಿಕ ಸುತ್ತಿನ ಮಾತುಕತೆ ನಡೆಸಿದ್ದಾರೆ.

Lithium Cell Production: IBC company Invest To Rs 8,000 Crore In Karnataka: MB Patil

ಇನ್ನೂ ಈ ವಿಚಾರ ಖಚಿತಪಡಿಸಿದ ಸಚಿವ ಎಂ.ಬಿ.ಪಾಟೀಲ್ ಅವರು, ವಿದ್ಯುತ್‌ ಚಾಲಿತ ವಾಹನಗಳ ಕ್ಷೇತ್ರ ದಿನದಿಂದ ದಿನಕ್ಕೆ ಜನಪ್ರಿಯವಾಗುತ್ತಿದೆ. ಆದರೆ ನಮ್ಮಲ್ಲಿ ಲೀಥಿಯಂ ಕೋಶಗಳ ಉತ್ಪಾದನೆ ನಡೆಯುತ್ತಿಲ್ಲ. ಐಬಿಸಿ ಕಂಪನಿ ಈ ನಿಟ್ಟಿನಲ್ಲಿ ಮುಂದೆ ಬಂದಿರುವುದು ಸ್ವಾಗತಾರ್ಹವಾಗಿದೆ. ಕಂಪನಿಯು ದೇವನಹಳ್ಳಿಯ ಬಳಿಯಿರುವ ಐಟಿಐಆರ್‍‌ ಪಾರ್ಕ್‌ನಲ್ಲಿ 100 ಎಕರೆ ಜಮೀನನ್ನು ಕೇಳಿದೆ.

ಸರ್ಕಾರದ ಜತೆ ಹೂಡಿಕೆ ಬಗ್ಗೆ ವಿಸ್ತೃತ ಚರ್ಚೆ

ಐಬಿಸಿ ಕಂಪನಿ ಕೇಳಿರುವ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಸರ್ಕಾರ ಪರಿಶೀಲಿಸಲಿದೆ. ಈ ಬಗ್ಗೆ ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜತೆಗೂ ವಿಸ್ತೃತವಾಗಿ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದರು.

ಐಬಿಸಿ ಕಂಪನಿಯು ಕರ್ನಾಟಕದಲ್ಲಿಯೇ ನೆಲೆಯೂರುವಂತೆ ನೋಡಿಕೊಳ್ಳಲು ಅಗತ್ಯವಿರುವ ನೆರವು ನೀಡಲಾಗುವುದು. ಜತೆಗೆ ನಮ್ಮ ಕೈಗಾರಿಕಾ ನೀತಿಯ ಪ್ರಕಾರ ಸಾಧ್ಯವಿರುವ ಪ್ರೋತ್ಸಾಹ/ಉತ್ತೇಜನ ಒದಗಿಸಲಾಗುವುದು. ಒಟ್ಟಿನಲ್ಲಿ ರಾಜ್ಯದಲ್ಲಿ ಹೆಚ್ಚು ಹೂಡಿಕೆಯಾಗಿ, ಉದ್ಯೋಗ ಸೃಷ್ಟಿಯಾಗಬೇಕು. ಇದಕ್ಕೆ ಪೂರಕವಾದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಕಂಪನಿಯ ನಿಯೋಗಕ್ಕೆ ಭರವಸೆ ನೀಡಿದರು.

Lithium Cell Production: IBC company Invest To Rs 8,000 Crore In Karnataka: MB Patil

ಐಬಿಸಿ ಕಂಪನಿಯ ಅಧ್ಯಕ್ಷ ವೆಂಕಟೇಶ್‌ ವಲ್ಲೂರಿ ಅವರು ಮಾತನಾಡಿ, ಭಾರತಕ್ಕೆ 2030ರ ವೇಳೆಗೆ 150 ಗಿಗಾವ್ಯಾಟ್‌ನಷ್ಟು ಲೀಥಿಯಂ ಕೋಶಗಳು ಬೇಕಾಗುತ್ತವೆ. ಆದರೆ ಸದ್ಯಕ್ಕೆ ದೇಶದಲ್ಲಿ ಕೇವಲ 1.5 ಗಿಗಾವ್ಯಾಟ್‌ ಸಾಮರ್ಥ್ಯದ ಉತ್ಪಾದನೆ ಮಾತ್ರ ಆಗುತ್ತಿದ್ದು, ಬೇಡಿಕೆ ಮತ್ತು ಪೂರೈಕೆ ನಡುವೆ ಅಗಾಧ ವ್ಯತ್ಯಾಸವಿದೆ.

ತೆರಿಗೆ ರೂಪದಲ್ಲಿ 12,300 ಕೋಟಿ ರೂ. ಲಾಭ

ಈ ವಿದ್ಯುತ್ ವಾಹನಗಳ ಉತ್ಪಾದನಾ ಕ್ಷೇತ್ರಕ್ಕೆ ಮುಂದಿನ ದಿನಗಳಲ್ಲಿ ಭಾರೀ ಬೇಡಿಕೆ ಉಂಟಾಗಲಿದೆ. ನಾವು ಸದ್ಯಕ್ಕೆ 8,000 ಕೋಟಿ ಹೂಡಿಕೆಯ ಪ್ರಸ್ತಾವನೆ ಹೊಂದಿದ್ದೇವೆ. ಮುಂದಿನ 20 ವರ್ಷಗಳಲ್ಲಿ 12,300 ಕೋಟಿ ರೂ.ಗಳಿಗೂ ಹೆಚ್ಚು ಲಾಭ ತೆರಿಗೆ ರೂಪದಲ್ಲಿ ರಾಜ್ಯಕ್ಕೆ ಸಿಗಲಿದೆ ಎಂದು ಅವರು ಸಚಿವರಿಗೆ ಮಾಹಿತಿ ನೀಡಿದರು.

ಐಬಿಸಿ ಕಂಪನಿಯ ಸ್ಥಾಪಕರೆಲ್ಲರೂ ಭಾರತದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದಿದ, ಭಾರತೀಯ ಪ್ರತಿಭಾವಂತರೇ ಆಗಿದ್ದಾರೆ. ಕಂಪನಿಯ ಉತ್ಪಾದನಾ ಘಟಕವು ರಾಜ್ಯದಲ್ಲಿ ಆರಂಭವಾದರೆ ಸಾವಿರಾರು ಉದ್ಯೋಗಗಳು ಕೂಡ ಸೃಷ್ಟಿಯಾಗಲಿದ್ದು, ಆರ್ಥಿಕ ಬೆಳವಣಿಗೆಗೆ ಗಮನಾರ್ಹ ಕೊಡುಗೆ ನೀಡಲಿದೆ. ನಮ್ಮೊಂದಿಗೆ ದಕ್ಷಿಣ ಕೊರಿಯಾದ ತಂತ್ರಜ್ಞರು ಕೂಡ ಕೆಲಸ ಮಾಡಲಿದ್ದು, ಇದರ ಅಂತಿಮ ಲಾಭ ಕರ್ನಾಟಕಕ್ಕೆ ಸಿಗಲಿದೆ ಎಂದು ಅವರು ಪ್ರತಿಪಾದಿಸಿದರು.

ಉದ್ಯಮಿಗಳು-ಸಚಿವರ ಸಮಾಲೋಚನೆ ವೇಳೆ ಐಬಿಸಿ ಕಂಪನಿಯ ಸಹ ಸಂಸ್ಥಾಪಕರಾಗಿರುವ ಪ್ರಿಯದರ್ಶಿ ಪಾಂಡಾ, ಶಶಿ ಕುಪ್ಪಣ್ಣಗಾರಿ ಮುಂತಾದವರು ವರ್ಚುಯಲ್‌ ರೂಪದಲ್ಲಿ ಪಾಲ್ಗೊಂಡಿದ್ದರು. ಜತೆಗೆ ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್‌ ಕೃಷ್ಣ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+