ಗೌರಿ ಹತ್ಯೆ ವಿರೋಧಿಸಿ ಪ್ರತಿರೋಧ ಸಮಾವೇಶ ಆರಂಭ
Recommended Video

ಬೆಂಗಳೂರು, ಸೆಪ್ಟೆಂಬರ್ 12 : ಪ್ರತಿರೋಧ ಸಮಾವೇಶ ಆರಂಭ. ಮೇದಾ ಪಾಟ್ಕರ್, ಸೀತಾರಾಂ ಯೆಚೂರಿ, ಚಂದ್ರಶೇಖರ ಕಂಬಾರ, ಪ್ರಕಾಶ್ ರೈ, ದೇವನೂರು ಮಹಾದೇವ, ಗಿರೀಶ್ ಕಾರ್ನಡ್, ಆನಂದ್ ಪಟವರ್ಧನ್ ಸೇರಿದಂತೆ ಹಲವು ಗಣ್ಯರು ವೇದಿಕೆಯಲ್ಲಿದ್ದಾರೆ.
* ರೈಲ್ವೆ ನಿಲ್ದಾಣದಿಂದ ಹೊರಟ ಜಾಥಾ ಸೆಂಟ್ರಲ್ ಕಾಲೇಜು ಮೈದಾನ ತಲುಪಿದೆ. ಕೆಲವೇ ಕ್ಷಣಗಳಲ್ಲಿ ಪ್ರತಿರೋಧ ಸಮಾವೇಶ ಆರಂಭವಾಗಲಿದೆ.
In Pics: ನಾನೂ ಗೌರಿ ಎಂದು ಬಂದರು ಸಾವಿರಾರು ಮಂದಿ
* ಗೌರಿ ಲಂಕೇಶ್ ತಾಯಿ ಇಂದಿರಾ ಲಂಕೇಶ್, ಸಹೋದರಿ ಕವಿತಾ ಲಂಕೇಶ್ ಸಮಾವೇಶ ನಡೆಯುವ ಸ್ಥಳಕ್ಕೆ ಆಗಮಿಸಿದರು.

* 'ಭಾರತೀಯ ಸಂವಿಧಾನಕ್ಕೆ ದೊಡ್ಡ ಅಪಾಯ ಸೃಷ್ಟಿಯಾಗಿದೆ. ಗೌರಿಯವರನ್ನು ಹತ್ಯೆ ಮಾಡುವ ಮೂಲಕ ರಾಜ್ಯದಲ್ಲಿ ಹತ್ಯೆ ಸಂಸ್ಕೃತಿಯನ್ನು ಮುಂದುವರೆಸಲಾಗುತ್ತಿದೆ. ಇದನ್ನು ತಡೆಗಟ್ಟಬೇಕು. ಭಾರತದ ಶಾಂತಿ ಸೌಹಾರ್ದತೆಯ ಪರಂಪರೆಯನ್ನು ಮುಂದುವರಿಸಬೇಕು. ಇದಕ್ಕಾಗಿ ದೇಶದಾದ್ಯಂತ ಚಿಂತಕರು ಆಗಮಿಸಿದ್ದಾರೆ. ಈ ಸಮಾವೇಶ ಒಂದು ಮಹಾಸಂಗಮ. ಕೊಲೆಗಡುಕ ಮನಸ್ಥಿತಿಯನ್ನಿ ಖಂಡಿಸಲು ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ' ಎಂದು ಗೌರಿ ಹತ್ಯೆ ಹೋರಾಟ ಸಮಿತಿ ಸದಸ್ಯೆ ಕೆ.ನೀಲಾ ಹೇಳಿದರು.
* ಕಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸೆಂಟ್ರಲ್ ಕಾಲೇಜು ಮೈದಾನದ ತನಕ ಬೃಹತ್ ಜಾಥಾ ಆರಂಭವಾಗಿದೆ.
* ಹಾಡುಗಳ ಮೂಲಕ ಪ್ರತಿರೋಧ ಸಮಾವೇಶಕ್ಕೆ ಹೊಸ ರೂಪ. ಗೌರಿ ಲಂಕೇಶ್ ಕುರಿತಾಗಿ 12 ಪ್ರತಿರೋಧ ಗೀತೆಗಳ ರಚನೆ. 'ನಾನು ಗೌರಿ' ಎಂಬ ಕಪ್ಪು ಪಟ್ಟಿ ಕಟ್ಟಿಕೊಂಡ ಸಮಾನ ಮನಸ್ಕರು

* ರಾಜ್ಯದ ವಿವಿಧ ಜಿಲ್ಲೆಗಳಿಂದ ಸಮಾವೇಶದಲ್ಲಿ ಪಾಲ್ಗೊಳ್ಳಲು ನೂರಾರು ಜನರು ಆಗಮಿಸಿದ್ದು, ರೈಲ್ವೆ ನಿಲ್ದಾಣದ ಬಳಿ ಸೇರಿದ್ದಾರೆ
* ಜಾಥಾದಲ್ಲಿ ಎಲ್ಲರೂ ಕಪ್ಪು ಬಣ್ಣದ ಛತ್ರಿ ಹಿಡಿದು ಸಾಗಲಿದ್ದಾರೆ. ಛತ್ರಿಯ ಮೇಲೆ ಕಲಾವಿದರು ಸೌಹಾರ್ದ ಸಂದೇಶವನ್ನು ಬರೆದಿರುತ್ತಾರೆ
* ಸೆ.5ರಂದು ರಾತ್ರಿ ಬೆಂಗಳೂರಿನ ಆರ್.ಆರ್.ನಗರ ನಿವಾಸದಲ್ಲಿ ಗೌರಿ ಲಂಕೇಶ್ ಹತ್ಯೆಯಾಗಿತ್ತು

ಪ್ರತಿರೋಧ ಸಮಾವೇಶ : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿರೋಧ ಸಮಾವೇಶ ಆಯೋಜಿಸಲಾಗಿದೆ. 'ಗೌರಿ ಲಂಕೇಶ್ ಸಾವಿಗೆ ಒಂದು ಹನಿ ಕಣ್ಣೀರು, ಒಂದು ನಿಮಿಷ ಮೌನ ಹಾಗೂ ಒಂದು ದೃಢ ನಿರ್ಧಾರ' ಎಂಬ ಧ್ಯೇಯದೊಂದಿಗೆ ಸಮಾವೇಶ ನಡೆಯಲಿದೆ.
ಬುಧವಾರ ಬೆಳಗ್ಗೆ 11ಗಂಟೆಗೆ ಸೆಂಟ್ರಲ್ ಕಾಲೇಜು ಮೈದಾನದಲ್ಲಿ ಪ್ರತಿರೋಧ ಸಮಾವೇಶ ನಡೆಯಲಿದೆ. ಇದಕ್ಕೂ ಮೊದಲು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸೆಂಟ್ರಲ್ ಕಾಲೇಜು ಮೈದಾನದ ತನಕ ಜಾಥಾ ನಡೆಯಲಿದೆ. ಸಮಾವೇಶದ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications