ಅಧಿಕಾರ ತ್ಯಜಿಸುವ ಮುನ್ನ ಋಣಮುಕ್ತ ಕಾಯ್ದೆ ಜಾರಿ ಮಾಡಿದ ಎಚ್ಡಿಕೆ
ಬೆಂಗಳೂರು, ಜುಲೈ 24: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಯುಗ ಆರಂಭವಾಗಿದೆ. ವಿಧಾನಸಭೆ ಚುನಾವಣೆ ನಡೆದು ಅಸ್ತಿತ್ವಕ್ಕೆ ಬಂದ ಮೈತ್ರಿ ಸರ್ಕಾರ ಸರಿಯಾಗಿ 14 ತಿಂಗಳಿಗೆ ಪತನಗೊಂಡಿದೆ. 2018ರ ಮೇ 23ರಂದು ರಚನೆಯಾಗಿದ್ದ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ 2019ರ ಜುಲೈ 23ಕ್ಕೆ ಉರುಳಿಹೋಗಿದೆ.
ಮಂಗಳವಾರದ ವಿಧಾನಸಭೆ ಕಲಾಪದಲ್ಲಿ ಆಡಳಿತ ಪಕ್ಷದ ನಾಯಕರು ಸಂಜೆ ವಿದಾಯ ಮಾತುಗಳನ್ನಾಡಿದರೂ ತಾವು ನೈತಿಕವಾಗಿ ಸೋತಿಲ್ಲ ಎಂದು ಹೇಳಿಕೊಂಡಿದ್ದಾರೆ. ನಾಲ್ಕು ದಿನಗಳ ಸುದೀರ್ಘ ಚರ್ಚೆಯ ಬಳಿಕ ಕೊನೆಗೂ ವಿಶ್ವಾಸಮತ ಯಾಚನೆಗೆ ಮುಂದಾದ ಕುಮಾರಸ್ವಾಮಿ ಅವರು ಸಂಖ್ಯಾಬಲದ ಲೆಕ್ಕಾಚಾರದಲ್ಲಿ ಸೋತಿದ್ದಾರೆ.
ಅತ್ತ, ಬಿಜೆಪಿ ಪಾಳೆಯದಲ್ಲಿ ಸಂಭ್ರಮ ಮುಗಿಲುಮುಟ್ಟಿದೆ. ದೋಸ್ತಿ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೂ ಸರ್ಕಾರ ಪತನಗೊಳ್ಳಲಿದೆ ಎಂದು ಮುಹೂರ್ತ ನಿಗದಿಪಡಿಸುತ್ತಲೇ ಇದ್ದ ಬಿಜೆಪಿಯ ಬಯಕೆ ಕೊನೆಗೂ ಈಡೇರಿದೆ. ಬಿ.ಎಸ್. ಯಡಿಯೂರಪ್ಪ ಅವರು ಮತ್ತೆ ಗದ್ದುಗೆಗೆ ಏರಲು ಸಿದ್ಧತೆ ನಡೆಸಿದ್ದಾರೆ.

ಇನ್ನೊಂದೆಡೆ ಕಾಂಗ್ರೆಸ್ ಮತ್ತು ಜೆಡಿಎಸ್ಗೆ ರಾಜೀನಾಮೆ ನೀಡಿರುವ ಅತೃಪ್ತ ಶಾಸಕರು ತಮ್ಮ ಮುಂದಿನ ಹೆಜ್ಜೆ ಇರಿಸಲಿದ್ದಾರೆ. ಅವರ ರಾಜಕೀಯ ಭವಿಷ್ಯ ಏನಾಗಲಿದೆ ಎಂಬ ಕುತೂಹಲವೂ ಮೂಡಿದೆ. ಇಂದಿನ ರಾಜಕೀಯದಲ್ಲಿ ಏನೆಲ್ಲ ಬೆಳವಣಿಗೆಗಳು ನಡೆಯಬಹುದು ಎನ್ನುವ ಮಾಹಿತಿ ಇಲ್ಲಿ ಸಿಗಲಿದೆ.













Click it and Unblock the Notifications