ಏನಿದೆಯೋ ಸದನದಲ್ಲಿಯೇ ಎದುರಿಸುತ್ತೇನೆ: ಕುಮಾರಸ್ವಾಮಿ
ಬೆಂಗಳೂರು, ಜುಲೈ 12: ಅತೃಪ್ತ ಶಾಸಕರ ರಾಜೀನಾಮೆ ಮತ್ತು ಅನರ್ಹತೆಯ ಕುರಿತಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಂಗಳವಾರಕ್ಕೆ ಮುಂದೂಡಿದೆ. ಅಲ್ಲಿಯವರೆಗೂ ಯಥಾಸ್ಥಿತಿ ಕಾಪಾಡುವಂತೆ ಸೂಚನೆ ನೀಡಿದೆ.
ಸುಪ್ರೀಂಕೋರ್ಟ್ ಆದೇಶ : ಮೈತ್ರಿ ಸರ್ಕಾರ, ಅತೃಪ್ತ ಶಾಸಕರು ಸೇಫ್
ಇದರ ನಡುವೆ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ತಾವು ವಿಶ್ವಾಸಮತ ಯಾಚನೆಗೆ ಸಿದ್ಧರಾಗಿರುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ವಿಶ್ವಾಸ ಮತ ಯಾಚನೆ ತಮಗೆ ಅನಿವಾರ್ಯವಾಗಿದ್ದು, ಅದಕ್ಕಾಗಿ ಸಮಯಾವಕಾಶ ನಿಗದಿಪಡಿಸುವಂತೆ ಕುಮಾರಸ್ವಾಮಿ ಅವರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಕೋರಿದ್ದಾರೆ.
ಅತೃಪ್ತ ಶಾಸಕರ ಅನರ್ಹತೆ ಕುರಿತಾದ ಅರ್ಜಿ ಹಾಗೂ ರಾಜೀನಾಮೆ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಶಾಸಕರ ಪರ ವಕೀಲ ಮುಕುಲ್ ರೋಹಟಗಿ, ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ಮುಖ್ಯಮಂತ್ರಿ ಪರ ವಕೀಲ ರಾಜೀವ್ ಧವನ್ ವಾದ ಮಂಡಿಸಿದರು. ಈ ದಿನ ಮುಂದೇನು ನಡೆಯಲಿದೆ? ಈ ಎಲ್ಲ ವಿದ್ಯಮಾನಗಳ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.
Former Karnataka CM and Congress leader Siddaramaiah in Bengaluru: We are confident that is why we are moving vote of confidence motion. BJP is afraid because they know there are black sheep in their party. pic.twitter.com/EKyd1vDT0A
— ANI (@ANI) 12 July 2019
#Karnataka: Congress to move its MLAs to Clarks Exotica Convention Resorts in Bengaluru, after the Assembly proceedings today. pic.twitter.com/7EJOtwWLyi
— ANI (@ANI) 12 July 2019