ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹದಾಯಿ ಹೋರಾಟ, ಅನ್ನದಾತರ ಬಂಧನ

|
Google Oneindia Kannada News

ಬೆಂಗಳೂರು, ಜುಲೈ 29 : ಉತ್ತರ ಕರ್ನಾಟಕದಲ್ಲಿ ಮಹದಾಯಿ ನ್ಯಾಯಮಂಡಳಿ ತೀರ್ಪು ವಿರೋಧಿಸಿ ನಡೆಯುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆ ನಡೆಸುತ್ತಿರುವ 130ಕ್ಕೂ ಅಧಿಕ ರೈತರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಹೋರಾಟ ಹತ್ತಿಕ್ಕಲು ಸರ್ಕಾರ ಪೊಲೀಸರನ್ನು ಬಳಕೆ ಮಾಡಿಕೊಳ್ಳುತ್ತಿದೆ.

ಹುಬ್ಬಳ್ಳಿ-ಧಾರವಾಡದಲ್ಲಿ 120, ಗದಗದಲ್ಲಿ 18 ರೈತರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಹೋರಾಟ ಹಿಂಸಾಚಾರಕ್ಕೆ ತಿರುಗಿದ ನವಲಗುಂದದಲ್ಲಿ ನಿಷೇಧಾಜ್ಞೆಜಾರಿಯಲ್ಲಿದ್ದು, ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.[ಕಳಸಾ ಹೋರಾಟದ ಚಿತ್ರಗಳು]

kalasa banduri

ಪರಿಸ್ಥಿತಿಯಲ್ಲಿ ಹತೋಟಿಗೆ ತರಲು ಬಿಎಸ್‌ಎಫ್‌ ಪಡೆಯನ್ನು ಹುಬ್ಬಳ್ಳಿಗೆ ರವಾನಿಸಲಾಗಿದೆ. ಬಂಧಿತರಾಗರುವ ರೈತರನ್ನು ಧಾರವಾಡದ ಕೋರ್ಟ್‌ಗೆ ಇಂದು ಹಾಜರುಪಡಿಸಲಿದ್ದು, ಅಲ್ಲಿಯೂ ಬೃಹತ್ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ.[ಮಹದಾಯಿ ತೀರ್ಪು: ಕನ್ನಡಿಗರು ಗಮನಿಸಬೇಕಾದ್ದು ಏನು?]

* ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲು ಧಾರವಾಡದ ವಿದ್ಯಾವರ್ಧಕ ಸಂಘದಲ್ಲಿ ರೈತರು ಬೆಳಗ್ಗೆ 11 ಗಂಟೆಗೆ ಸಭೆ ನಡೆಸಲಿದ್ದಾರೆ.

* ನರಗುಂದ ಮತ್ತು ಗದಗ ಭಾಗದ ರೈತರು ಸಹ ಗದಗದಲ್ಲಿ ಇಂದು ಸಭೆ ನಡೆಸಲಿದ್ದು, ಮುಂದಿನ ಹೋರಾಟದ ರೂಪುರೇಷೆ ತಯಾರಿಸಲಿದ್ದಾರೆ.

English summary
More than 120 farmers arrested in Hubballli, Gadag who protest against interim order passed by the Mahadayi Tribunal that rejected Karnataka government interim petition.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X