ಭಾರತದಲ್ಲಿ ಹಿಂದೂಗಳಿಗಿರುವಷ್ಟೇ ಹಕ್ಕು ಕ್ರೈಸ್ತರಿಗಿದೆ: ಸೂಲಿಬೆಲೆ
ಉಡುಪಿ, ಡಿಸೆಂಬರ್, 09: ಭಾರತದಲ್ಲಿ ಹಿಂದೂಗಳು ಮತ್ತು ಕ್ರೈಸ್ತರು ಸಮನ್ವಯದಿಂದ ಬಾಳುತ್ತಿದ್ದಾರೆ. ದೇಶದ ಮೇಲೆ ಹಿಂದೂಗಳಿಗಿರುವಷ್ಟೇ ಹಕ್ಕು, ಅಧಿಕಾರ ಕ್ರೈಸ್ತ ಧರ್ಮೀಯರಿಗೂ ಇದೆ ಎಂದು ಅಂಕಣಕಾರ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಮೂಡುಪೆರಂಪಳ್ಳಿಯಲ್ಲಿ ಅದಮಾರು ಮಠದ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿಯವರಿಂದ ನವಚೈತನ್ಯ ಯುವಕ ಮಂಡಲ ಕಟ್ಟಿದ ವಿಶ್ವಪ್ರಿಯ ರಂಗಮಂಟಪದ ಸಮಾರೋಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೂ ಧರ್ಮೀಯರು ಸಹಿಷ್ಣುಗಳಲ್ಲ , ಒಪ್ಪಿಕೊಳ್ಳುವವರು ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ ಎಂದರು.[ತಾಜ್ ಮಹಲ್ ಹಿಂದೂ ದೇಗುಲವೇ? ಮೋದಿ ಸರ್ಕಾರದ ಉತ್ತರ]

ಉಡುಪಿಯ ಪೆರಂಪಲ್ಲಿ ಭಾಗದಲ್ಲಿ ಕ್ರೈಸ್ತರು ಹಾಗೂ ಹಿಂದೂಗಳು ಪರಸ್ಪರ ಸಹಕಾರ ಮನೋಭಾವ, ಪ್ರೀತಿಯಿಂದ ಬದುಕುತ್ತಿದ್ದಾರೆ. ನಟ ಆಮೀರ್ ಖಾನ್ ಅವರಿಗೆ ಈ ಸ್ಥಳ ಪರಿಚಯಿಸಬೇಕಿದೆ. ಇದರಿಂದ ಅವರ ಮನದಲ್ಲಿ ಮೂಡಿರುವ ಅಸಹಿಷ್ಣುತೆ ಮನೋಭಾವ ದೂರವಾಗಬಹುದು. ಹಿಂದೂ ಜನರಿಗೆ ಧರ್ಮವಾಗಲೀ, ಆಚರಣೆ ಬದುಕುವ ರೀತಿ ನೀತಿ ಇನ್ನೂ ಅರ್ಥವಾಗಿಲ್ಲ ಎಂದರು.[ಸಾಮಾಜಿಕ ತಾಣದಲ್ಲಿ ಬಿರುಗಾಳಿ ಎಬ್ಬಿಸಿರುವ ಅಮೀರ್ ಮಾತು]
ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಮಾತನಾಡಿ, 'ಯುವಕ ಮಂಡಲ ರಂಗಮಂಟಪ ಕಟ್ಟುವ ಕೆಲಸಕ್ಕೆ ವೈಯಕ್ತಿಕವಾಗಿ 1 ಲಕ್ಷ ಮತ್ತು ಸರ್ಕಾರದ ಮಲೆನಾಡು ಅಭಿವೃದ್ದಿ ಮಂಡಳಿಯಿಂದ 5 ಲಕ್ಷ ಯುವಕ ಮಂಡಲಕ್ಕೆ ನೀಡಿದ್ದೇನೆ.
ಪಾಸ್ ಕದ್ರುವಿನಲ್ಲಿ ನದಿ ತಡೆ ಗೋಡೆಗೆ 50 ಲಕ್ಷ ಬಿಡುಗಡೆ ಮಾಡಿದ್ದು ಉಪ್ಪೂರು ಮಣಿಪಾಲ ನದಿ ಸೇತುವೆಗೆ 10 ಕೋಟಿ ಬಿಡುಗಡೆ ಟೆಂಡರ್ ಗೆ ಸಂಪುಟದಲ್ಲಿ ಒಪ್ಪಿಗೆ ಬಾಕಿ ಇದೆ. ಎರಡೂವರೆ ವರ್ಷದಲ್ಲಿ ಕಾಮಗಾರಿ ಮುಗಿಯಲಿದೆ' ಎಂದು ಹೇಳಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications