Actress Ramya: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ನಟಿ ರಮ್ಯಾ ಹೇಳಿದ್ದೇನು ಗೊತ್ತಾ?
ಬೆಂಗಳೂರು, ಆಗಸ್ಟ್ 02: ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣ ಭಾರೀ ಸದ್ದು ಮಾಡಿತ್ತು. ಇದೀಗ ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಅಪಹರಣ ಮಾಡಿದ ಆರೋಪದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೀಗ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಈ ಕುರಿತು ಮಾಜಿ ಸಂಸದೆ ಹಾಗೂ ನಟಿ ಅವರು ಪ್ರತಿಕ್ರಿಯಿಸಿದ್ದಾರೆ.
ಮಾಜಿ ಸಂಸದೆ, ನಟಿ ರಮ್ಯಾ ಎಕ್ಸ್ ಖಾತೆಯಲ್ಲಿ ಕಾನೂನು ಎಲ್ಲರಿಗೂ ಒಂದೇ. ಮಹಿಳೆಯರ ಮೇಲಿನ ಅಪರಾಧಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ರಮ್ಯಾ ಪ್ರತಿಕ್ರಿಯಿಸಿದ್ದಾರೆ. ಶುಕ್ರವಾರ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದ ಸಂದರ್ಭದಲ್ಲಿಯೂ ರಮ್ಯಾ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಜೊತೆಗೆ 11 ಲಕ್ಷ ದಂಡವನ್ನ ವಿಧಿಸಿದೆ.

ಪ್ರಜ್ವಲ್ ರೇವಣ್ಣಗೆ ಇಂದಿನಿಂದಲೇ ಶಿಕ್ಷೆ ಆರಂಭ, ಇಲ್ಲಿಯವರೆಗಿನ ಜೈಲುವಾಸ ಮೈನಸ್ ಆಗುವುದಿಲ್ಲ. ಏಕೆಂದರೆ ಈ ಪ್ರಕರಣದಲ್ಲಿ ಮಾಜಿ ಸಂಸದರಾದ ಪ್ರಜ್ವಲ್ ರೇವಣ್ಣ ಬಂಧನವಾಗಿರಲಿಲ್ಲ, ಕೇವಲ ಬಾಡಿ ವಾರಂಟ್ ಮೇಲೆ ಪ್ರಜ್ವಲ್ ರೇವಣ್ಣ ಅವರನ್ನ ವಶಕ್ಕೆ ಪಡೆಯಲಾಗಿತ್ತು. ಕೇವಲ 4 ತಿಂಗಳ ದಾಖಲೆ ಸಮಯದಲ್ಲೇ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸಿದ್ದಾರೆ. ಇದರೊಂದಿಗೆ, ಮೂರು ಅತ್ಯಾಚಾರ ಪ್ರಕರಣ, 1 ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು 4 ಪ್ರಕರಣಗಳ ಪೈಕಿ ಒಂದರಲ್ಲಿ ತೀರ್ಪು ಹೊರಬಿದ್ದಂತಾಗಿದೆ. ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂಬುದು ಸಾಬೀತಾಗಿದೆ.
ಪ್ರಜ್ವಲ್ ರೇವಣ್ಣ ಶಿಕ್ಷೆಯ ವಿವರ ಇಲ್ಲಿದೆ.
* ಐಪಿಸಿ ಸೆಕ್ಷನ್ 376 (2)(k)ರಡಿ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ
*376(2)(n) ಅಡಿ ಪದೇಪದೆ ಅತ್ಯಾಚಾರಕ್ಕೆ ಜೀವನಪರ್ಯಂತ ಜೈಲು, 5 ಲಕ್ಷ ರೂ. ದಂಡ
*ಐಪಿಸಿ ಸೆಕ್ಷನ್ 354(A) ಅಡಿ 3 ವರ್ಷ ಸೆರೆವಾಸ, 25,000 ರೂಪಾಯಿ ದಂಡ
*ಐಪಿಸಿ ಸೆಕ್ಷನ್ 354 (B) ಅಡಿ 7 ವರ್ಷ ಸೆರೆವಾಸ, 50,000 ರೂಪಾಯಿ ದಂಡ
*ಐಪಿಸಿ ಸೆಕ್ಷನ್ 354 (c) ಅಡಿ 3 ವರ್ಷ ಸೆರೆವಾಸ, 25,000 ರೂಪಾಯಿ ದಂಡ
*ಸೆಕ್ಷನ್ 506 ಅಡಿ 2 ವರ್ಷ ಸೆರೆವಾಸ 10,000 ರೂ. ದಂಡ
*ಸೆಕ್ಷನ್ 201 ಅಡಿ 3 ವರ್ಷ ಸೆರೆವಾಸ 25,000 ರೂ. ದಂಡ
*ಐಟಿ ಕಾಯ್ದೆ ಸೆ.66(E) ಅಡಿ 3 ವರ್ಷ 25,000 ರೂ. ದಂಡ
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications