ಲೋಡ್ ಶೆಡ್ಡಿಂಗ್ ಜಾರಿ, ಕರ್ನಾಟಕಕ್ಕೆ ಕತ್ತಲ ಭಾಗ್ಯ!

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿಯೇ ಲೋಡ್ ಶೆಡ್ಡಿಂಗ್ ಜಾರಿಗೆ ಬಂದಿತ್ತು. ಸದ್ಯ ಡಿಸೆಂಬರ್ ಅಂತ್ಯದ ವೇಳಗೆ ಅನಧಿಕೃತ ಲೋಡ್ ಶೆಡ್ಡಿಂಗ್ ಆರಂಭವಾಗಿದೆ. ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ (ಆರ್ಟಿಪಿಎಸ್), ಉಡುಪಿ ಶಾಖೋತ್ಪನ್ನ ಕೇಂದ್ರ (ಯುಪಿಸಿಎಲ್)ಗಳಲ್ಲಿ ವಿದ್ಯುತ್ ಉತ್ಪಾದನೆ ಇಳಿಕೆ ಯಾಗಿದ್ದು, ರಾಜ್ಯದಲ್ಲಿ ವಿದ್ಯುತ್ ಕೊರತೆ ಎದುರಾಗಿದೆ.
ಡಿ.18ರಿಂದಲೇ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅನಧಿಕೃತ ಲೋಡ್ ಶೆಡ್ಡಿಂಗ್ ಆರಂಭವಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಹಗಲು 4 ಮತ್ತು ರಾತ್ರಿ 2 ಗಂಟೆ ತ್ರೀಫೇಸ್ ವಿದ್ಯುತ್ ಒದಗಿಸುವ ಭರವಸೆ ಈಡೇರುವ ಲಕ್ಷಣಗಳು ಕಾಣುತ್ತಿಲ್ಲ. ರಾಜ್ಯದ ಜಲ ವಿದ್ಯುತ್ ಕೇಂದ್ರಗಳು ಹೆಚ್ಚು ಉತ್ಪಾದನೆ ಮಾಡುತ್ತಿರುವುದರಿಂದ ತೀವ್ರ ವಿದ್ಯುತ್ ಕೊರತೆ ಉಂಟಾಗಿಲ್ಲ. [ವಿದ್ಯುತ್ ದರ ಹೆಚ್ಚಳ ಮಾಡಿ : ಎಸ್ಕಾಂ ಮನವಿ]
ಸದ್ಯ ರಾಜ್ಯಕ್ಕೆ 7,500 ಮೆ.ಗಾ. ವ್ಯಾಟ್ ವಿದ್ಯುತ್ ಅಗತ್ಯವಿದೆ. ಆದರೆ, 4,300 ಮೆ.ವ್ಯಾ. ಮಾತ್ರ ಉತ್ಪಾದನೆಯಾಗುತ್ತಿದೆ. ರಾಯಚೂರು ಮತ್ತು ಉಡುಪಿ ಕೇಂದ್ರಗಳಲ್ಲಿ ಉತ್ಪಾದನೆ ಕುಸಿದಿದ್ದರಿಂದ ಒಟ್ಟು 1,198 ಮೆ.ವ್ಯಾ. ವಿದ್ಯುತ್ ಕೊರತೆ ಉಂಟಾಗಿದೆ. ಇದರ ಜೊತೆಗೆ ಪವನ ವಿದ್ಯುತ್ ಉತ್ಪಾದನೆ ಸಹ ಸಂಪೂರ್ಣ ಸ್ಥಗಿತಗೊಂಡಿದೆ. ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿ ನಿಲ್ಲಿಸಲಾಗಿದೆ. ಆದ್ದರಿಂದ ಲೋಡ್ ಶೆಡ್ಡಿಂಗ್ ಜಾರಿಗೆ ಬಂದಿದೆ.
ಈ ಬಾರಿ ಉತ್ತಮ ಮಳೆ ಸುರಿದು ವಿದ್ಯುತ್ ಉತ್ಪಾದಿಸುವ ಎಲ್ಲಾ ಜಲಾಶಯಗಳು ಭರ್ತಿಯಾಗಿದ್ದವು. ಆದ್ದರಿಂದ ಜಲವಿದ್ಯುತ್ ಕೇಂದ್ರಗಳು ಹೆಚ್ಚಿನ ವಿದ್ಯುತ್ ಉತ್ಪಾದನೆ ಮಾಡುತ್ತಿವೆ. ಇಲ್ಲದಿದ್ದರೆ, ದಿನಕ್ಕೆ 6 ತಾಸು ಮಾತ್ರ ವಿದ್ಯುತ್ ಪೂರೈಸಲು ಶಕ್ತವಾಗುತ್ತಿತ್ತು ಎಂದು ಕೆಪಿಟಿಸಿಎಲ್ ಮೂಲಗಳು ತಿಳಿಸಿವೆ. ರಾಯಚೂರು, ಉಡುಪಿ ಕೇಂದ್ರಗಳಲ್ಲಿ ಹೆಚ್ಚಿನ ವಿದ್ಯುತ್ ಉತ್ಪಾದನೆ ಆಗುವ ತನಕ ಲೋಡ್ ಶೆಡ್ಡಿಂಗ್ ಮುಂದುವರೆಯಬಹುದು.
ಕೆಪಿಟಿಸಿಎಲ್ನ ಪ್ರಕಾರ ಪ್ರಮುಖ ನಗರಗಳಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗುವ ಸಂಜೆ ನಂತರದ ಅವಧಿಯಲ್ಲಿ 2 ತಾಸು, ಉಳಿದ ಕಡೆಗಳಲ್ಲಿ ಬೆಳಗ್ಗೆ, ಮಧ್ಯಾಹ್ನ, ರಾತ್ರಿ, ಮಧ್ಯರಾತ್ರಿ 2 ತಾಸು ಅನಧಿಕೃತ ಲೋಡ್ ಶೆಡ್ಡಿಂಗ್ ಜಾರಿಯಾಗಿದೆ. ಗ್ರಾಮಾಂತರ ಪ್ರದೇಶಗಳಿಗೆ 2 ತಾಸು ಮಾತ್ರ ವಿದ್ಯುತ್ ಪೂರೈಸಲಾಗುತ್ತಿದೆ.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications