7 ಪರಿಷತ್ ಸ್ಥಾನ ತೆರವು, ಮೇಲ್ಮನೆ ಸ್ಥಾನಕ್ಕೆ ಪ್ರಬಲ ಪೈಪೋಟಿ!
ಬೆಂಗಳೂರು, ಜುಲೈ 20 : 2013ರ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ವಿಧಾನ ಪರಿಷತ್ ಸದಸ್ಯತ್ವದ ಮೇಲೆ ಕಣ್ಣಿಟ್ಟಿದ್ದಾರೆ. ಆಗಸ್ಟ್ನಲ್ಲಿ ಹಲವು ಸ್ಥಾನಗಳು ಖಾಲಿ ಆಗಲಿದ್ದು, ಸದಸ್ಯರಾಗಲು ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಪೈಪೋಟಿ ನಡೆಯುತ್ತಿದೆ.
ವಿಧಾನಪರಿಷತ್ತಿಗೆ ನಾಮ ನಿರ್ದೇಶನಗೊಂಡ ಮೂವರು ಸದಸ್ಯರ ಅವಧಿ ಆಗಸ್ಟ್ 9ರಂದು ಅಂತ್ಯಗೊಳ್ಳಲಿದೆ. ರಾಜ್ಯಪಾಲರು ಮೂವರು ಸದಸ್ಯರನ್ನು ನೇಮಕ ಮಾಡಲಿದ್ದಾರೆ. ಮೂರು ಸ್ಥಾನಗಳಿಗೆ 6ಕ್ಕೂ ಹೆಚ್ಚು ನಾಯಕರು ಲಾಬಿ ಆರಂಭಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ತಾರಾ ಅನುರಾಧ ವಿದಾಯದ ಭಾಷಣ
ಆಗಸ್ಟ್ 9ರಂದು ಮೂರು ನಾಮ ನಿರ್ದೇಶಿತ ಸದಸ್ಯರು ಸೇರಿ ಒಟ್ಟು 7 ಸ್ಥಾನಗಳು ತೆರವಾಗಲಿವೆ. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಹಲವು ನಾಯಕರು ಪರಿಷತ್ ಸದಸ್ಯರಾಗಲು ಪೈಪೋಟಿ ಆರಂಭಿಸಿದ್ದಾರೆ.
ಯಾರ ನಿವೃತ್ತಿ? : ವಿ.ಸೋಮಣ್ಣ, ಡಾ.ಜಿ.ಪರಮೇಶ್ವರ, ಕೆ.ಎಸ್.ಈಶ್ವರಪ್ಪ, ಬಸನಗೌಡ ಪಾಟೀಲ್ ಯತ್ನಾಳ್ ಅವರ ಸ್ಥಾನಗಳು ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ತೆರವಾಗಿವೆ.
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಎಸ್.ಆರ್. ಪಾಟೀಲ್ ಹೆಸರು ಅಂತಿಮ?
ವಿಧಾನಪರಿಷತ್ತಿಗೆ ನಾಮರ್ದೇಶನಗೊಂಡಿದ್ದ ಕಾಂಗ್ರೆಸ್ನ ಎಂ.ಡಿ.ಲಕ್ಷ್ಮೀ ನಾರಾಯಣ ಅವರು 2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಾಮ ನಿರ್ದೇಶಿತ ಸದಸ್ಯರಾದ ತಾರಾ ಅನುರಾಧ ಮತ್ತು ಕೆ.ಬಿ.ಶಾಣಪ್ಪ ಅವರು ಆಗಸ್ಟ್ 9ರಂದು ನಿವೃತ್ತರಾಗಲಿದ್ದಾರೆ.
3 ನಾಮ ನಿರ್ದೇಶನ : ಸಂವಿಧಾನದ 171ನೇ ಕಾಲಂ ಅನ್ವಯ ರಾಜ್ಯಪಾಲರು ಮೂವರು ಸದಸ್ಯರನ್ನು ನಾಮ ನಿರ್ದೇಶನ ಮಾಡಲಿದ್ದಾರೆ. ಕಲೆ, ಸಾಹಿತ್ಯ, ಸಹಕಾರ, ಸಮಾಜ ಸೇವೆ ಕ್ಷೇತ್ರದ ಗಣ್ಯರನ್ನು ರಾಜ್ಯಪಾಲರು ನಾಮ ನಿರ್ದೇಶನ ಮಾಡಬಹುದು.
ಯಾರ-ಯಾರ ಹೆಸರು? : ಪರಿಷತ್ ಸದಸ್ಯರಾಗಲು ಕಾಂಗ್ರೆಸ್ನಲ್ಲಿ ಹಲವು ನಾಯಕರ ಹೆಸರು ಕೇಳಿಬರುತ್ತಿದೆ. ನಿವೇದಿತಾ ಆಳ್ವಾ, ಕೆ.ಇ.ರಾಧಾಕೃಷ್ಣ, ಯು.ಬಿ.ವೆಂಕಟೇಶ್, ಎಂ.ಸಿ.ವೇಣುಗೋಪಾಲ್ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ.