ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿ.ಎಸ್.ಉಗ್ರಪ್ಪ ಸಂಸತ್ತಿಗೆ, ಪರಿಷತ್ ಸ್ಥಾನ ಪಡೆಯಲು ಪೈಪೋಟಿ!

|
Google Oneindia Kannada News

ಬೆಂಗಳೂರು, ನವೆಂಬರ್ 08 : ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅವರು ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ಅವರ ರಾಜೀನಾಮೆಯಿಂದ ತೆರವಾಗುವ ಪರಿಷತ್ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ.

ಉಪ ಚುನಾವಣೆ ಫಲಿತಾಂಶ ಘೋಷಣೆಯಾದ 14 ದಿನದಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ವಿ.ಎಸ್.ಉಗ್ರಪ್ಪ ಅವರು ಇನ್ನೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಆದರೆ, ತೆರವಾಗುವ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ.

ವಿಧಾನ ಪರಿಷತ್‌ಗೆ ಮೂವರು ಗಣ್ಯರ ನಾಮ ನಿರ್ದೇಶನವಿಧಾನ ಪರಿಷತ್‌ಗೆ ಮೂವರು ಗಣ್ಯರ ನಾಮ ನಿರ್ದೇಶನ

ವಿ.ಎಸ್.ಉಗ್ರಪ್ಪ ಅವರು 2014ರ ಜೂನ್ 24ರಂದು ವಿಧಾನ ಪರಿಷತ್‌ ಸದಸ್ಯರಾಗಿ ನಾಮಕರಣಗೊಂಡಿದ್ದರು. 2018ರ ನವೆಂಬರ್‌ನಲ್ಲಿ ನಡೆದ ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ 628365 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಬಳ್ಳಾರಿ ಸಂಸದ ವಿ.ಎಸ್.ಉಗ್ರಪ್ಪ ಸಂಕ್ಷಿಪ್ತ ಪರಿಚಯಬಳ್ಳಾರಿ ಸಂಸದ ವಿ.ಎಸ್.ಉಗ್ರಪ್ಪ ಸಂಕ್ಷಿಪ್ತ ಪರಿಚಯ

ಮತ್ತೊಂದು ಕಡೆ ವಿಧಾನ ಪರಿಷತ್ ನಾಮಕರಣಕ್ಕೆ ಕಾಂಗ್ರೆಸ್ ಕೋಟಾ ಪೂರ್ಣಗೊಂಡಿದ್ದು, ಇಬ್ಬರು ನೇಮಕವಾಗಿದ್ದಾರೆ. ಜೆಡಿಎಸ್ ಒಂದು ಸ್ಥಾನವನ್ನು ಉಳಿಸಿಕೊಂಡಿದ್ದು, ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ನಾಮಕರಣಗೊಳ್ಳುವ ಸಾಧ್ಯತೆ ಇದೆ.....

ಬಳ್ಳಾರಿ ಅಂತಿಮ ಫಲಿತಾಂಶ: ಎಲ್ಲಾ ದಾಖಲೆ ಮುರಿದ ವಿಎಸ್ ಉಗ್ರಪ್ಪಬಳ್ಳಾರಿ ಅಂತಿಮ ಫಲಿತಾಂಶ: ಎಲ್ಲಾ ದಾಖಲೆ ಮುರಿದ ವಿಎಸ್ ಉಗ್ರಪ್ಪ

19 ತಿಂಗಳ ಅವಧಿ ಇದೆ

19 ತಿಂಗಳ ಅವಧಿ ಇದೆ

ವಿ.ಎಸ್.ಉಗ್ರಪ್ಪ ಅವರು 2014ರ ಜೂನ್ 24ರಂದು ವಿಧಾನ ಪರಿಷತ್ ಸದಸ್ಯರಾಗಿ ನಾಮಕರಣಗೊಂಡಿದ್ದರು. ಅವರ ಅವಧಿ 2020ರ ಜೂನ್ 23ರ ತನಕ ಇದೆ. ಸುಮಾರು 19 ತಿಂಗಳು ಇರುವ ಪರಿಷತ್ ಸ್ಥಾನವನ್ನು ಪಡೆಯಲು ಕಾಂಗ್ರೆಸ್‌ನಲ್ಲಿ ಪೈಪೋಟಿ ಆರಂಭವಾಗಿದೆ.

ರಾಜೀನಾಮೆ ನೀಡಿಲ್ಲ

ರಾಜೀನಾಮೆ ನೀಡಿಲ್ಲ

ವಿ.ಎಸ್.ಉಗ್ರಪ್ಪ ಅವರು ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಇನ್ನೂ ರಾಜೀನಾಮೆ ನೀಡಿಲ್ಲ. ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡ 14 ದಿನದಲ್ಲಿ ರಾಜೀನಾಮೆ ನೀಡಬೇಕು. ಮುಂದಿನವಾರ ಅವರು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಅದಕ್ಕೂ ಮೊದಲು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಉಗ್ರಪ್ಪ ರಾಜೀನಾಮೆಯಿಂದ ತೆರವಾಗುವ ಸ್ಥಾನ ಕಾಂಗ್ರೆಸ್ ಪಾಲಾಗಲಿದೆ.

ಯಾರ-ಯಾರ ಹೆಸರು?

ಯಾರ-ಯಾರ ಹೆಸರು?

ವಿ.ಎಸ್.ಉಗ್ರಪ್ಪ ಅವರ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕೆ ಹಲವು ನಾಯಕರ ಹೆಸರು ಕೇಳಿ ಬರುತ್ತಿದೆ. ರಾಜ್ಯ ಹಣಕಾಸು ಆಯೋಗದ ಮಾಜಿ ಸದಸ್ಯ, ಹಿರಿಯ ವಕೀಲ ಎಚ್.ಡಿ.ಅಮರನಾಥ್, ಮಾಜಿ ಮೇಯರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ರಾಮಚಂದ್ರಪ್ಪ, ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಾಂತಮ್ಮ ಗುಜ್ಜಾಲ್, ಮಾಜಿ ಸಚಿವ ರಾಣಿ ಸತೀಶ್ ಅವರ ಹೆಸರು ಮುಂಚೂಣಿಯಲ್ಲಿದೆ.

ಜೆಡಿಎಸ್‌ನ ಒಂದು ಸ್ಥಾನ ಖಾಲಿ

ಜೆಡಿಎಸ್‌ನ ಒಂದು ಸ್ಥಾನ ಖಾಲಿ

ವಿಧಾನ ಪರಿಷತ್ತಿನಲ್ಲಿ ಮೂರು ನಾಮ ನಿರ್ದೇಶನ ಸ್ಥಾನಗಳು ಖಾಲಿ ಇದ್ದವು. ಇವುಗಳಲ್ಲಿ ಕಾಂಗ್ರೆಸ್‌ ಪಕ್ಷದಿಂದ ಪ್ರಕಾಶ್ ರಾಥೋಡ್ ಮತ್ತು ಯು.ಬಿ.ವೆಂಕಟೇಶ್ ನಾಮಕರಣಗೊಂಡಿದ್ದಾರೆ. ಜೆಡಿಎಸ್ ಪಕ್ಷ ಒಂದು ಸ್ಥಾನವನ್ನು ಖಾಲಿ ಇಟ್ಟುಕೊಂಡಿದೆ. ಈ ಸ್ಥಾನಕ್ಕೆ ಮಧು ಬಂಗಾರಪ್ಪ ಅವರು ನೇಮಕವಾಗುವ ಸಾಧ್ಯತೆ ಇದೆ.

English summary
V.S.Ugrappa elected as member of parliament from Ballari Lok Sabha seat. He will submit resignation for the Legislative Council member seat. Lobbying is going on in Congress for the post that will vacant after resignation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X