ಲಕ್ಷ್ಮೇಶ್ವರದಲ್ಲಿ ಲಾಕಪ್ ಡೆತ್ ಪ್ರಕರಣ: ಸಿಐಡಿ ತನಿಖೆ ಚುರುಕು
ಗದಗ, ಫೆಬ್ರವರಿ 7: ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದನೆಂದು ಲಕ್ಷ್ಮೇಶ್ವರದಲ್ಲಿ ಪೊಲೀಸರು ಬಂಧಿಸಿದ್ದ, ಲಾರಿ ಚಾಲಕ ಸತ್ತಿದ್ದಾನೆಂಬ ಪ್ರಕರಣದ ತನಿಖೆಯನ್ನು ಸಿಐಡಿ ಪೊಲೀಸರು ಚುರುಕುಗೊಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಎಸ್ಪಿ ದಿವ್ಯಾಸಾರಾ ಥಾಮಸ್ ನೇತೃತ್ವದ 10 ಜನರ ತಂಡ ಸೋಮವಾರ ಗದಗಿನ ಲಕ್ಷ್ಮೇಶ್ವರಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ಕಳೆದ ಭಾನುವಾರ ಲಾರಿ ಚಾಲಕ ಶಿವಪ್ಪ ದುಂಡಪ್ಪ ಭದ್ರಾಪುರ ಅವರು ಪೊಲೀಸರ ವಶದಲ್ಲಿದ್ದಾಗಲೇ ಮೃತಪಟ್ಟಿದ್ದಾರೆಂದು ದೂರಿ, ಇಲ್ಲಿನ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ದಾಂದಲೆ ನಡೆಸಿದ್ದರು. ಪೊಲೀಸರ ತನಿಖೆ ಬೇಡವೆಂದ ಕಾರಣಕ್ಕೆ ಸರಕಾರ ಸಿಐಡಿ ತನಿಖೆ ವಹಿಸಿತ್ತು.[ಲಕ್ಷ್ಮೇಶ್ವರ ಲಾಕಪ್ ಡೆತ್ ಪ್ರಕರಣ: ಪಿಎಸ್ ಐ ಅಮಾನತು]

ಘಟನೆಯನ್ನು ಕಣ್ಣಾರೆ ನೋಡಿದ್ದಾರೆ ಎನ್ನಲಾದ ಜನರಿಂದ ಸಿಐಡಿ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ. ಈಗಲೂ ನಗರದಲ್ಲಿ ಪೊಲೀಸರ ಬಂದೋಬಸ್ತ್ ಹಾಗೆ ಇದೆ. ತನಿಖಾ ತಂಡದಲ್ಲಿ ಅಧಿಕಾರಿ ಡಿವೈ ಎಸ್ ಪಿ ಶ್ರಿಧರ, ಸಹಾಯಕ ತನಿಖಾಧಿಕಾರಿ ಎಂ.ಬಿ. ಗೊರವನಕೊಳ್ಳ ಇದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ 28 ಜನರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಾಗಿದೆ ಎಂದು ಗದಗ ಎಸ್ಪಿಕೆ.ಸಂತೋಷ ಬಾಬು ತಿಳಿಸಿದರು.
ಠಾಣೆಗೆ ನುಗ್ಗಿ ಬೆಂಕಿ ಹಚ್ಚಿದವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸುವುದಾಗಿ ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಸ್ಥಳಕ್ಕೆ ಬೇಟಿ ನೀಡಿದ ವೇಳೆ ತಿಳಿಸಿದ್ದಾರೆ.
ಘಟನೆಗೆ ಮರಳು ಮಾಫಿಯಾ ದಂಧೆ ಕೊರರೊಂದಿಗೆ ಅಕ್ರಮ ಸಾರಾಯಿ ದಂಧೆಯವರು ಸಾಥ್ ನೀಡಿದ್ದಾರೆ ಎನ್ನಲಾಗಿದ್ದು ಅವರನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications