ಟಾಮ್ ಟಾಮ್ ಸುದ್ದಿ: ಬೆಂಗಳೂರು ಬಿಟ್ಟು ಹೊರಟವರಿಗೆ 800 ಬಸ್!
ಬೆಂಗಳೂರು, ಜುಲೈ.13: "ಹುಟ್ಟಿದ ಊರನ್ನು ಬಿಟ್ಟು ಬಂದ ಮೇಲೆ ಇನ್ನೇನು ಬಿಡುವುದು ಬಾಕಿ ಇದೆ"- ಯೋಗರಾಜ್ ಭಟ್ಟರು ಬರೆದಿರುವ ಈ ಹಾಡಿನ ಸಾಲುಗಳು ಇದೀಗ ಬೆಂಗಳೂರಿನಲ್ಲಿ ಬದುಕುತ್ತಿದ್ದ ಜನರ ಹೃದಯಕ್ಕೆ ಹೊಕ್ಕಂತೆ ಕಾಣುತ್ತಿದೆ.
Recommended Video
ಕೊರೊನಾವೈರಸ್ ಸೋಂಕಿನ ಹರಡುವಿಕೆ ಭೀತಿ ಹಾಗೂ ಸರ್ಕಾರವು ಜಾರಿಗೊಳಿಸಲು ಹೊರಟಿರುವ ಲಾಕ್ ಡೌನ್ ನಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಬದುಕು ಕಟ್ಟಿಕೊಳ್ಳಲು ತೆರಳಿದ್ದ ಜನರೆಲ್ಲ ತಮ್ಮೂರಿನತ್ತ ಮುಖ ಮಾಡುತ್ತಿದ್ದಾರೆ.
ಈಗಾಗಲೇ ಕೊರೊನಾವೈರಸ್ ಸೋಂಕಿನ ಹರಡುವಿಕೆಗೆ ಕನ್ನಡಿಗರು ಬೆಚ್ಚಿ ಬೀಳುವಂತಾ ವಾತಾವರಣ ಸೃಷ್ಟಿಯಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ 2627 ಮಂದಿಗೆ ಕೊವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 38843ಕ್ಕೆ ಏರಿಕೆಯಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಲಾಕ್ ಆಗುತ್ತಾ ಬದುಕು?
ಜುಲೈ.14ರ ಮಂಗಳವಾರ ರಾತ್ರಿ 8 ಗಂಟೆಯಿಂದ ಏಳು ದಿನಗಳ ಕಾಲ ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸುವುದಾಗಿ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಲಾಕ್ ಡೌನ್ ನಿಂದ ಬೆದರಿದ ಸಾರ್ವಜನಿಕರು ಬೆಂಗಳೂರಿನಿಂದ ಸ್ವಂತ ಊರುಗಳಿಗೆ ವಾಪಸ್ ತೆರಳುತ್ತಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಲಾಕ್ ಆಗುತ್ತಾ ಬದುಕು?
ಜುಲೈ.14ರ ಮಂಗಳವಾರ ರಾತ್ರಿ 8 ಗಂಟೆಯಿಂದ ಏಳು ದಿನಗಳ ಕಾಲ ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸುವುದಾಗಿ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಲಾಕ್ ಡೌನ್ ನಿಂದ ಬೆದರಿದ ಸಾರ್ವಜನಿಕರು ಬೆಂಗಳೂರಿನಿಂದ ಸ್ವಂತ ಊರುಗಳಿಗೆ ವಾಪಸ್ ತೆರಳುತ್ತಿದ್ದಾರೆ.

ಬೆಂಗಳೂರು ಬಿಡುವವರಿಗೆ 800 ಬಸ್ ವ್ಯವಸ್ಥೆ
ರಾಜ್ಯ ರಾಜಧಾನಿ ಬೆಂಗಳೂರಿನಿಂದ ತಮ್ಮೂರುಗಳತ್ತ ಹೊರಟ ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಿದೆ. ಬೆಂಗಳೂರಿನಿಂದ ಸಂಚರಿಸುವವರಿಗೆ ಸೋಮವಾರ ಮತ್ತು ಮಂಗಳವಾರ 800 ಬಸ್ ಗಳ ವಿಶೇಷ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಕೆಎಸ್ಆರ್ ಟಿಸಿ ತಿಳಿಸಿದೆ.

ಸೋಮವಾರ ಮಾರ್ಗಸೂಚಿ ಬಿಡುಗಡೆ ಮಾಡಲಿರುವ ಸರ್ಕಾರ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಮೈಸೂರು, ಮಂಗಳೂರು, ಉಡುಪಿ, ಬೀದರ್, ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಲಿರುವ ಸಿಎಂ ಜಿಲ್ಲೆಯಲ್ಲಿನ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದುಕೊಳ್ಳಲಿದ್ದಾರೆ. ಕೊರೊನಾವೈರಸ್ ಸೋಂಕು ಕಡಿಮೆ ಇರುವ ಜಿಲ್ಲಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಲಿರುವ ಸಿಎಂ, ಎರಡು ಸಭೆ ಬಳಿಕ ಯಾವ್ಯಾವ ಜಿಲ್ಲೆಗಳನ್ನು ಲಾಕ್ಡೌನ್ ಮಾಡಬೇಕು ಎಂದು ನಿರ್ಧರಿಸಲಿದ್ಧಾರೆ. ಅಲ್ಲದೇ, ಲಾಕ್ಡೌನ್ ನಿಯಮಗಳು ಹೇಗಿರಬೇಕು ಎಂಬ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದ್ದಾರೆ.

ಕೊರೊನಾವೈರಸ್ ಕಂಡೀಷನ್ ಬೆಂಗಳೂರಿನಲ್ಲಿ ಹೇಗಿದೆ?
ಬೆಂಗಳೂರಿನಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ವಿಕೋಪಕ್ಕೆ ಹೋಗುತ್ತಿದೆ. ಒಂದೇ ದಿನ 1525 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿದ್ದು, ಸಿಲಿಕಾನ್ ಸಿಟಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 18387ಕ್ಕೆ ಏರಿಕೆಯಾಗಿದೆ. ಈ ಪೈಕಿ 4045 ಸೋಂಕಿತರು ಗುಣಮುಖರಾಗಿದ್ದು, ಬಾಕಿ ಉಳಿದ 14067 ಮಂದಿ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ಸಿಲಿಕಾನ್ ಸಿಟಿಯೊಂದರಲ್ಲೇ ಮಹಾಮಾರಿಗೆ ಈವರೆಗೂ 274 ಮಂದಿ ಪ್ರಾಣ ಬಿಟ್ಟಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications