ಕನಿಷ್ಠ 1ವಾರ, ಗರಿಷ್ಠ 15ದಿನ ಲಾಕ್ಡೌನ್ ಮುಂದುವರಿಕೆ? ಹಿಂದಿನಂತಲ್ಲಾ ಈ ಬಾರಿ!
ಹದಿನಾಲ್ಕು ದಿನಗಳ ಲಾಕ್ಡೌನ್ ಸೋಮವಾರ (ಮೇ 24) ಬೆಳಗ್ಗೆಗೆ ಮುಕ್ತಾಯಗೊಳ್ಳಲಿದೆ. ಇದಾದ ನಂತರ ಲಾಕ್ಡೌನ್ ಮುಂದುವರಿಯಲಿದೆಯೇ ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳು ಇನ್ನೂ ಅಧಿಕೃತವಾಗಿ ಏನನ್ನೂ ಹೇಳದೇ, ಮೇ 23ರಂದು ಪ್ರಕಟಿಸುವುದಾಗಿ ಹೇಳಿದ್ದಾರೆ.
ಸದ್ಯದ ಖಚಿತ ಮಾಹಿತಿಯ ಪ್ರಕಾರ, ಲಾಕ್ಡೌನ್ ಅನ್ನು ಕನಿಷ್ಠ ಒಂದು ವಾರ ಅಥವಾ ಗರಿಷ್ಠ ಹದಿನೈದು ದಿನ ಮುಂದುವರಿಸುವುದು ಪಕ್ಕಾ. ಅಧಿಕೃತ ಆದೇಶ ಮಾತ್ರ ಬಿಡುಗಡೆಯಾಗಬೇಕಿದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ, ಗೃಹ ಮತ್ತು ಕಂದಾಯ ಸಚಿವರು ಮುಂದಿನ ಲಾಕ್ಡೌನ್ ಹೇಗಿರಲಿದೆ ಎನ್ನುವುದರ ಬಗ್ಗೆ ಸೂಕ್ಷ್ಮವಾಗಿ ಹೇಳಿದ್ದಾರೆ. ಹೆಚ್ಚಿನ ಸಚಿವರು/ಅಧಿಕಾರಿಗಳು ಮುಂದುವರಿಸುವುದೇ ಸೂಕ್ತ ಎನ್ನುವ ಸಲಹೆಯನ್ನು ಸಿಎಂಗೆ ನೀಡಿದ್ದಾರೆ.
ಇನ್ನು ಐಸಿಎಂಆರ್ ಮತ್ತು ವಿಪತ್ತು ನಿರ್ವಹಣಾ ಸಮಿತಿಯ ಅಧಿಕಾರಿಗಳು ಮುಂದಿನ ಹದಿನೈದು ದಿನ ಲಾಕ್ಡೌನ್ ಮಾಡುವುದೇ ಸೂಕ್ತ ಎನ್ನುವ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಮೂಲಗಳ ಪ್ರಕಾರ, ಹಿಂದಿನಂತೆ ಲಾಕ್ಡೌನ್ ಮಾರ್ಗಸೂಚಿಗಳು ಇರುವುದಿಲ್ಲ ಎಂದು ಹೇಳಲಾಗುತ್ತಿದೆ.

ಗೃಹಸಚಿವ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್.ಅಶೋಕ್
ಗೃಹಸಚಿವ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್.ಅಶೋಕ್, "ಮುಂದಿನ ವಾರದಿಂದ ಲಾಕ್ಡೌನ್ ನಿಯಮ ಇನ್ನಷ್ಟು ಬಿಗಿಗೊಳ್ಳಲಿದೆ. ಸಾರ್ವಜನಿಕರು ಸಹಕರಿಸಬೇಕು, ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ"ಎನ್ನುವ ಹೇಳಿಕೆಯನ್ನು ನೀಡಿದ್ದಾರೆ.

ಬೆಂಗಳೂರು ಮಹಾನಗರಕ್ಕೆ ಪ್ರತ್ಯೇಕ ಮಾರ್ಗಸೂಚಿ ಸಾಧ್ಯತೆ
ರಾಜ್ಯದ ಆರ್ಥಿಕ ಸ್ಥಿತಿಯ ಬಗ್ಗೆಯೂ ಅಧಿಕಾರಿಗಳು ಕಳವಳ ವ್ಯಕ್ತ ಪಡಿಸಿರುವುದರಿಂದ ಮುಖ್ಯಮಂತ್ರಿಗಳು ಆ ನಿಟ್ಟಿನಲ್ಲೂ ಗಮನ ಹರಿಸಬೇಕಾಗಿದೆ. ಹಾಗಾಗಿ, ಬೆಂಗಳೂರಿಗೆ ಒಂದು ಮಾರ್ಗಸೂಚಿ ಮತ್ತು ಸೋಂಕು ಹೆಚ್ಚಿರುವ ಜಿಲ್ಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಆಕ್ಸಿಜನ್, ಬೆಡ್ ಇನ್ನಿತರ ಸಮಸ್ಯೆಗಳು ತಕ್ಕಮಟ್ಟಿಗೆ ಸರಿದಾರಿಗೆ ಬರುತ್ತಿರುವ ಹಿನ್ನಲೆ
ಬೆಂಗಳೂರಿನಲ್ಲಿ ಕೊರೊನಾ ತಕ್ಕಮಟ್ಟಿಗೆ ಕಂಟ್ರೋಲ್ ಬರುತ್ತಿರುವುದರಿಂದ ಮತ್ತು ಆಕ್ಸಿಜನ್, ಬೆಡ್ ಇನ್ನಿತರ ಸಮಸ್ಯೆಗಳು ತಕ್ಕಮಟ್ಟಿಗೆ ಸರಿದಾರಿಗೆ ಬರುತ್ತಿರುವ ಹಿನ್ನಲೆಯಲ್ಲಿ, ರಾಜಧಾನಿಯ ಮಾರ್ಗಸೂಚಿಯಲ್ಲಿ ಬದಲಾವಣೆಗಳನ್ನು ಮಾಡಿ ಆರ್ಥಿಕ ಚಟುವಟಿಕೆಗಳಿಗೆ ಇನ್ನೂ ಹೆಚ್ಚಿನ ಅವಕಾಶ ನೀಡುವ ಸಾಧ್ಯತೆಯಿದೆ ಎನ್ನುವ ಮಾತು ಕೇಳಿಬರುತ್ತಿದೆ. ಕೊರೊನಾ ಕಮ್ಮಿಯಿರುವ ಜಿಲ್ಲೆಗಳಲ್ಲೂ ಇದೇ ನಿಯಮವನ್ನು ಜಾರಿಗೆ ತರುವ ಸಾಧ್ಯತೆಯಿದೆ.
Recommended Video

ಕನಿಷ್ಠ 1ವಾರ, ಗರಿಷ್ಠ 15ದಿನ ಲಾಕ್ಡೌನ್ ಮುಂದುವರಿಕೆ: ಹಿಂದಿನಂತಲ್ಲಾ..
ಆದರೆ, ಕೊರೊನಾ ಹೆಚ್ಚಾಗುತ್ತಿರುವ ಮತ್ತು ಕೇಂದ್ರ ಸರಕಾರ ಘೋಷಿಸಿರುವ ರೆಡ್ ಅಲರ್ಟ್ ಜಿಲ್ಲೆಗಳಲ್ಲಿ ಕಠಿಣ ಮಾರ್ಗಸೂಚಿ ಹೊರಬೀಳುವ ಸಾಧ್ಯತೆಯಿದೆ. ಜೊತೆಗೆ, ಆಯಾಯ ಜಿಲ್ಲಾಧಿಕಾರಿಗಳಿಗೆ ಫುಲ್ ಪವರ್ ನೀಡುವ ಸಾಧ್ಯತೆಯಿಲ್ಲದಿಲ್ಲ. ಈಗಾಗಲೇ, ಕಠಿಣ ನಿಯಮ ಹಲವು ಜಿಲ್ಲೆಗಳಲ್ಲಿ ಜಾರಿಯಲ್ಲಿದೆ, ಅದು ಮುಂದುವರಿಯುವ ಸಾಧ್ಯತೆಯಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications