ಐಪಿಎಸ್ ಅಧಿಕಾರಿಗಳ ನೇಮಕ; ಕರ್ನಾಟಕ ಸರ್ಕಾರದ ಹೊಸ ಆದೇಶ
ಬೆಂಗಳೂರು, ನವೆಂಬರ್ 15; ಕರ್ನಾಟಕ ಸರ್ಕಾರ ಐಪಿಎಸ್ ಅಧಿಕಾರಿಗಳ ನೇಮಕದಲ್ಲಿ ಬದಲಾವಣೆ ಮಾಡಿದೆ. ಮುಂಬರುವ ಲೋಕಸಭೆ, ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಐಪಿಎಸ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಿದೆ.
ಐಪಿಎಸ್ ಅಧಿಕಾರಿಗಳ ನೇಮಕದ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಮೂವರು ಐಪಿಎಸ್ ಅಧಿಕಾರಿಗಳನ್ನು ಲೋಕಸಭೆ, ವಿಧಾನಸಭೆ ಚುನಾವಣೆಯ ನೋಡಲ್ ಅಧಿಕಾರಿಗಳಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದೆ.

ಮೂವರು ಐಪಿಎಸ್ ಅಧಿಕಾರಿಗಳು ಈಗಿರುವ ಹುದ್ದೆಯ ಜೊತೆಗೆ ಮುಂದಿನ ಆದೇಶದ ತನಕ ರಾಜ್ಯದಲ್ಲಿ ಮುಂಬರುವ ಲೋಕಸಭೆ, ವಿಧಾನಸಭೆ ಚುನಾವಣೆಗೆ ನೋಡಲ್ ಅಧಿಕಾರಿಗಳಾಗಿ ಕಾರ್ಯ ನಿರ್ವಹಣೆ ಮಾಡಲಿದ್ದಾರೆ ಎಂದು ಆದೇಶ ಹೇಳಿದೆ.
ಯಾವ-ಯಾವ ಅಧಿಕಾರಿಗಳು?; ಆರ್. ಹಿತೇಂದ್ರ, ಐಪಿಎಸ್ (ಕೆಎನ್: 1996) ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅವರನ್ನು ಕರ್ನಾಟಕದ ಮುಂಬರುವ ಲೋಕಸಭೆ, ವಿಧಾನಸಭೆ ಚುನಾವಣೆಯ ರಾಜ್ಯ ನೋಡಲ್ ಅಧಿಕಾರಿ (SPNO) ಆಗಿ ಅವರ ಈಗಿರುವ ಹುದ್ದೆಗೆ ಹೆಚ್ಚುವರಿಯಾಗಿ ನೇಮಕ ಮಾಡಿದೆ. ತಕ್ಷಣದಿಂದ ಜಾರಿಗೆ ಬರುವಂತೆ 3 ವರ್ಷಗಳಿಗೆ ಈ ನೇಮಕಾತಿ ನಡೆದಿದೆ.
ಸಂದೀಪ್ ಪಾಟೀಲ್, ಐಪಿಎಸ್. ಐಜಿಪಿ, ಕೆಎಸ್ಆರ್ಪಿ ಬೆಂಗಳೂರು. ಕರ್ನಾಟಕದ ಮುಂಬರುವ ಲೋಕಸಭೆ, ವಿಧಾನಸಭೆ ಚುನಾವಣೆಯ ರಾಜ್ಯ CARF ನೋಡಲ್ ಅಧಿಕಾರಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದೆ. ರಾಜ್ಯ ನೋಡಲ್ ಅಧಿಕಾರಿಗೆ ಮುಂದಿನ ಆದೇಶದ ತನಕ ಸಹಾಯಕರಾಗಿ ಇವರು ಈಗಿರುವ ಹುದ್ದೆಯ ಜೊತೆಗೆ ಹೆಚ್ಚುವರಿಯಾಗಿ ಕಾರ್ಯ ನಿರ್ವಹಣೆ ಮಾಡಲಿದ್ದಾರೆ.
ದೇವಜ್ಯೋತಿ ರೇ, ಐಪಿಎಸ್. ಐಜಿಪಿ ಜಿ & ಹೆಚ್ ಆರ್ ಬೆಂಗಳೂರು. ಕರ್ನಾಟಕದ ಮುಂಬರುವ ಲೋಕಸಭೆ, ವಿಧಾನಸಭೆ ಚುನಾವಣೆಯ ನೋಡಲ್ ಅಧಿಕಾರಿ (ವೆಚ್ಚ) ಆಗಿ ನೇಮಕ ಮಾಡಲಾಗಿದೆ. ಇವರು ಈಗಿರುವ ಹುದ್ದೆಯ ಜೊತೆಗೆ ಮುಂದಿನ ಆದೇಶದ ತನಕ ರಾಜ್ಯ ನೋಡಲ್ ಅಧಿಕಾರಿಗೆ ಸಹಾಯಕರಾಗಿ ಕಾರ್ಯ ನಿರ್ವಹಣೆ ಮಾಡಲಿದ್ದಾರೆ.
ಕರ್ನಾಟಕ ಸರ್ಕಾರ ಆದೇಶದಲ್ಲಿ ರಾಜ್ಯ ನೋಡಲ್ ಅಧಿಕಾರಿ, ಸಿಎಆರ್ಎಫ್ ಮತ್ತು ನೋಡಲ್ ಅಧಿಕಾರಿ (ವೆಚ್ಚ) ಇವರ ಕಾರ್ಯ ಮತ್ತು ಜವಾಬ್ದಾರಿಗಳು ಭಾರತದ ಚುನಾವಣಾ ಆಯೋಗದ 7/6/2023ರ ಪತ್ರದಲ್ಲಿ ಉಲ್ಲೇಖಿಸಿದಂತೆ ಇರುತ್ತದೆ ಎಂದು ಹೇಳಿದೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಪೂರ್ಣಗೊಂಡಿದೆ. ಸದ್ಯಕ್ಕೆ ಯಾವುದೇ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಇಲ್ಲ. ಲೋಕಸಭಾ ಚುನಾವಣೆ 2024ರಲ್ಲಿ ನಡೆಯಲಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications