ಬಿಜಾಪುರದಲ್ಲಿ ಏಳು ಶಾಸಕರ ಶ್ರಮವೂ ಫಲನೀಡಲಿಲ್ಲ
ಬಿಜಾಪುರ, ಮೇ 20 : ಬಿಜಾಪುರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ಸೋಲುಣಿಸುವ ಕಾಂಗ್ರೆಸ್ ಕಾರ್ಯತಂತ್ರ ವಿಫಲವಾಗಿದೆ. 69,819 ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಜಿಗಜಿಣಗಿ ಎರಡನೇ ಬಾರಿ ಸಂಸತ್ ಪ್ರವೇಶಿಸಿದ್ದಾರೆ. ಸದ್ಯ, ಅವರಿಗೆ ಸಚಿವರಾಗುವ ಯೋಗವೂ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.
ರಮೇಶ ಚಂದ್ರಪ್ಪ ಜಿಗಜಿಣಿಗಿ 2009ರಲ್ಲಿ ಬಿಜಾಪುರ ಕ್ಷೇತ್ರದಿಂದ ಗೆದ್ದು ಸಂಸತ್ ಪ್ರವೇಶಿಸಿದ್ದರು. ಈ ಬಾರಿ ಜಿಗಜಿಣಗಿ ಸೋಲಿಸಬೇಕು ಎಂದು ಪಣತೊಟ್ಟಿದ್ದ ಕಾಂಗ್ರೆಸ್, ಪ್ರಕಾಶ್ ಕೆ.ರಾಥೋಡ್ ಅವರನ್ನು ಕಣಕ್ಕಿಳಿಸಿತ್ತು. ಆದರೆ, 4,01,938 ಮತಗಳನ್ನು ಪಡೆದ ಅವರು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಜಿಲ್ಲೆಯಲ್ಲಿ ಕಾಂಗ್ರೆಸ್ನ 7 ಶಾಸಕರ ಒಗ್ಗಟ್ಟಿನ ಶ್ರಮವೂ ರಾಥೋಡ್ ಅವರ ಗೆಲುವಿಗೆ ಸಹಕಾರ ನೀಡಲಿಲ್ಲ.

ಈ ಚುನಾವಣೆಯಲ್ಲಿ ಕಾಂಗ್ರೆಸ್ ರಮೇಶ ಜಿಗಜಿಣಗಿ ಕಳೆದ ಅವಧಿಯಲ್ಲಿ ಕೆಲಸವನ್ನೇ ಮಾಡಲಿಲ್ಲ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಲೋಕಸಭೆಯಲ್ಲಿ ಒಮ್ಮೆಯೂ ಮಾತನಾಡಲಿಲ್ಲ ಎಂದು ಟೀಕಿಸುತ್ತಾ ಪ್ರಚಾರ ಮಾಡಿದ್ದರು. ನರೇಂದ್ರ ಮೋದಿ ವಿಜಾಪುರದಲ್ಲಿ ಪ್ರಚಾರ ನಡೆಸಿದ್ದು ಹಾಗೂ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ ಯತ್ನಾಳ್ ಪಕ್ಷಕ್ಕೆ ಮರಳಿದ್ದು, ಜಿಗಜಿಣಗಿ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದವು. [ಬಿಜಾಪುರದಲ್ಲಿನ ಕಾಂಗ್ರೆಸ್ ಬಲಾಬಲ]
ಒಟ್ಟು 20 ಸುತ್ತಿನ ಮತ ಎಣಿಕೆಯಲ್ಲಿ ರಮೇಶ ಜಿಗಜಿಣಗಿ ಮುನ್ನಡೆ ಕಾಯ್ದುಕೊಂಡಿದ್ದರು. 8 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಥೋಡ್ ಗೆ ಬಬಲೇಶ್ವರ ಹಾಗೂ ವಿಜಾಪುರ ನಗರ ಕ್ಷೇತ್ರಗಳಲ್ಲಿ ಅಲ್ಪ ಮುನ್ನಡೆ ಸಿಕ್ಕಿದ್ದು ಬಿಟ್ಟರೆ ಉಳಿದ 6 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿತು.
ಏ.17ರಂದು ನಡೆದ ಚುನಾವಣೆಯಲ್ಲಿ ಬಿಜಾಪುರ ಕ್ಷೇತ್ರದಲ್ಲಿ ಶೇ 60ರಷ್ಟು ಮತದಾನವಾಗಿತ್ತು. ಒಟ್ಟು ಚಲಾವಣೆಯಾದ 9,66,707ಮತಗಳಲ್ಲಿ ಬಿಜೆಪಿಯ ರಮೇಶ ಜಗಜಿಣಗಿ 4,71,757 ಮತಗಳನ್ನು ಪಡೆದರೆ, ಕಾಂಗ್ರೆಸ್ನ ಪ್ರಕಾಶ ರಾಠೋಡ 4,0,1,938 ಮತಗಳನ್ನು ಪಡೆದು ಸೋಲು ಅನುಭವಿಸಿದರು.
| ಬಿಜಾಪುರ | ಪಡೆದ ಸ್ಥಾನ | ಪಕ್ಷ | ಪಡೆದ ಮತಗಳು |
| ರಮೇಶ್ ಜಿಗಜಿಣಗಿ | 1 | ಬಿಜೆಪಿ | 4,71,757 |
| ಪ್ರಕಾಶ್ ಕೆ.ರಾಥೋಡ್ | 2 | ಕಾಂಗ್ರೆಸ್ | 4,01,938 |
| ಕೆ.ಎಸ್.ಶಿವರಾಂ | 3 | ಜೆಡಿಎಸ್ | 57,551 |
| ಶ್ರೀಧರ್ ನಾರಾಯಣಕರ್ | 4 | ಎಎಪಿ | 4,717 |
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications