ಬೇಡವೆಂದರೂ ಪ್ರಕಾಶ್ ಹುಕ್ಕೇರಿಗೆ ಒಲಿಯಿತು ಗೆಲುವು
ಬೆಂಗಳೂರು, ಮೇ 19 : ಕರ್ನಾಟಕ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಿಸಬೇಕು ಎಂಬ ಉದ್ದೇಶದಿಂದ ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವ ಪ್ರಕಾಶ್ ಹುಕ್ಕೇರಿ ಅವರನ್ನು ಒತ್ತಾಯಪೂರ್ವಕವಾಗಿ ಕಣಕ್ಕಿಳಿಸಿತ್ತು. ಪಕ್ಷ ನಾಯಕರ ನಿರೀಕ್ಷೆ ಹುಸಿ ಮಾಡದ ಹುಕ್ಕೇರಿ ಅವರು ಮೂರು ಸಾವಿರ ಮತಗಳ ಅಂತರದಿಂದ ಜಯಗಳಿಸಿದರು, ಆ ಮೂಲಕ ಬಿಜೆಪಿ ಕೈಯಿಂದ ಒಂದು ಸ್ಥಾನವನ್ನು ಕಿತ್ತುಕೊಂಡರು.
ಮುಜರಾಯಿ ಮತ್ತು ಸಕ್ಕೆರೆ ಖಾತೆ ಸಚಿವ ಪ್ರಕಾಶ್ ಹುಕ್ಕೇರಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಚಿಕ್ಕೋಡಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದರೂ ಅವರು ಮಾತ್ರ ಸ್ಪರ್ಧಿಸುವುದಿಲ್ಲ ಎಂದು ಹಠ ಹಿಡಿದಿದ್ದರು. ನಾನು ರಾಜ್ಯದಲ್ಲೇ ಇರುವೆ ದೆಹಲಿಗೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದರು. [ಕರ್ನಾಟಕದಲ್ಲಿ ಸೋತವರು, ಗೆದ್ದವರು]

ಕಾಂಗ್ರೆಸ್ ನಾಯಕರ ಸಂಧಾನದ ನಂತರ ಚುನಾವಣೆಯಲ್ಲಿ ಸ್ಪರ್ಧಿಸಲು ಒಪ್ಪಿಕೊಂಡರು. ಚಿಕ್ಕೋಡಿ ಕ್ಷೇತ್ರದ ಜನರು ಸಹ ಹುಕ್ಕೇರಿ ಅವರಿಗೆ ಬೆಂಬಲ ನೀಡಿದರು. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಾಗ ಪ್ರಕಾಶ್ ಹುಕ್ಕೇರಿ ಅವರು 3,003 ಮತಗಳ ಅಂತರದಿಂದ ಜಯಗಳಿಸಿದ್ದರು. [ಸಚಿವಸ್ಥಾನ ತೊರೆಯುತ್ತೇನೆ : ಹುಕ್ಕೇರಿ]
ಸದ್ಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಪ್ರಕಾಶ್ ಹುಕ್ಕೇರಿ ಅವರು ಸಂಸದರಾಗಿ ಮುಂದುವರೆಯಲಿದ್ದಾರೆ. ಚಿಕ್ಕೋಡಿ ಕ್ಷೇತ್ರ ಬಿಜೆಪಿ ವಶದಲ್ಲಿತ್ತು, ರಮೇಶ್ ಕತ್ತಿ ಸಂಸದರಾಗಿದ್ದರು. ಪ್ರಕಾಶ್ ಹುಕ್ಕೇರಿ ಕಣಕ್ಕಿಳಿಯುವ ಮೂಲಕ ಬಿಜೆಪಿ ಕೈಯಿಂದ ಒಂದ ಸ್ಥಾನವನ್ನು ಕಿತ್ತುಕೊಂಡಿದ್ದಾರೆ.
ಒಟ್ಟು 14,35,510 ಮತದಾರರಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಏ.17ರಂದು ನಡೆದ ಚುನಾವಣೆಯಲ್ಲಿ ಶೇ 74ರಷ್ಟು ಮತದಾನವಾಗಿತ್ತು. ಕ್ಷೇತ್ರದಲ್ಲಿ ಪ್ರಕಾಶ್ ಹುಕ್ಕೇರಿ ಜಯಗಳಿಸಿದರೆ, ಬಿಜೆಪಿ ಅಭ್ಯರ್ಥಿ ರಮೇಶ್ ಕತ್ತಿ ಎರಡನೇ ಸ್ಥಾನ ಪಡೆದರು. ಎನ್ ಸಿಪಿ ಪಕ್ಷದ ಪ್ರತಾಪರಾವ್ ಪಾಟೀಲ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.
| ಚಿಕ್ಕೋಡಿ | ಪಡೆದ ಸ್ಥಾನ | ಪಕ್ಷ | ಪಡೆದ ಮತಗಳು |
| ಪ್ರಕಾಶ್ ಹುಕ್ಕೇರಿ | 1 | ಕಾಂಗ್ರೆಸ್ | 4,74,373 |
| ರಮೇಶ್ ಕತ್ತಿ | 2 | ಬಿಜೆಪಿ | 4,71,370 |
| ಪ್ರತಾಪರಾವ್ ಪಾಟೀಲ | 3 | ಎನ್ ಸಿಪಿ | 42,735 |
| ಶ್ರೀಮಂತ್ ಬಾಳಾಸಾಬ್ ಪಾಟೀಲ್ | 4 | ಜೆಡಿಎಸ್ | 39,992 |
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications