ಬೇಡವೆಂದರೂ ಪ್ರಕಾಶ್ ಹುಕ್ಕೇರಿಗೆ ಒಲಿಯಿತು ಗೆಲುವು
ಬೆಂಗಳೂರು, ಮೇ 19 : ಕರ್ನಾಟಕ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಿಸಬೇಕು ಎಂಬ ಉದ್ದೇಶದಿಂದ ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವ ಪ್ರಕಾಶ್ ಹುಕ್ಕೇರಿ ಅವರನ್ನು ಒತ್ತಾಯಪೂರ್ವಕವಾಗಿ ಕಣಕ್ಕಿಳಿಸಿತ್ತು. ಪಕ್ಷ ನಾಯಕರ ನಿರೀಕ್ಷೆ ಹುಸಿ ಮಾಡದ ಹುಕ್ಕೇರಿ ಅವರು ಮೂರು ಸಾವಿರ ಮತಗಳ ಅಂತರದಿಂದ ಜಯಗಳಿಸಿದರು, ಆ ಮೂಲಕ ಬಿಜೆಪಿ ಕೈಯಿಂದ ಒಂದು ಸ್ಥಾನವನ್ನು ಕಿತ್ತುಕೊಂಡರು.
ಮುಜರಾಯಿ ಮತ್ತು ಸಕ್ಕೆರೆ ಖಾತೆ ಸಚಿವ ಪ್ರಕಾಶ್ ಹುಕ್ಕೇರಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಚಿಕ್ಕೋಡಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದರೂ ಅವರು ಮಾತ್ರ ಸ್ಪರ್ಧಿಸುವುದಿಲ್ಲ ಎಂದು ಹಠ ಹಿಡಿದಿದ್ದರು. ನಾನು ರಾಜ್ಯದಲ್ಲೇ ಇರುವೆ ದೆಹಲಿಗೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದರು. [ಕರ್ನಾಟಕದಲ್ಲಿ ಸೋತವರು, ಗೆದ್ದವರು]

ಕಾಂಗ್ರೆಸ್ ನಾಯಕರ ಸಂಧಾನದ ನಂತರ ಚುನಾವಣೆಯಲ್ಲಿ ಸ್ಪರ್ಧಿಸಲು ಒಪ್ಪಿಕೊಂಡರು. ಚಿಕ್ಕೋಡಿ ಕ್ಷೇತ್ರದ ಜನರು ಸಹ ಹುಕ್ಕೇರಿ ಅವರಿಗೆ ಬೆಂಬಲ ನೀಡಿದರು. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಾಗ ಪ್ರಕಾಶ್ ಹುಕ್ಕೇರಿ ಅವರು 3,003 ಮತಗಳ ಅಂತರದಿಂದ ಜಯಗಳಿಸಿದ್ದರು. [ಸಚಿವಸ್ಥಾನ ತೊರೆಯುತ್ತೇನೆ : ಹುಕ್ಕೇರಿ]
ಸದ್ಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಪ್ರಕಾಶ್ ಹುಕ್ಕೇರಿ ಅವರು ಸಂಸದರಾಗಿ ಮುಂದುವರೆಯಲಿದ್ದಾರೆ. ಚಿಕ್ಕೋಡಿ ಕ್ಷೇತ್ರ ಬಿಜೆಪಿ ವಶದಲ್ಲಿತ್ತು, ರಮೇಶ್ ಕತ್ತಿ ಸಂಸದರಾಗಿದ್ದರು. ಪ್ರಕಾಶ್ ಹುಕ್ಕೇರಿ ಕಣಕ್ಕಿಳಿಯುವ ಮೂಲಕ ಬಿಜೆಪಿ ಕೈಯಿಂದ ಒಂದ ಸ್ಥಾನವನ್ನು ಕಿತ್ತುಕೊಂಡಿದ್ದಾರೆ.
ಒಟ್ಟು 14,35,510 ಮತದಾರರಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಏ.17ರಂದು ನಡೆದ ಚುನಾವಣೆಯಲ್ಲಿ ಶೇ 74ರಷ್ಟು ಮತದಾನವಾಗಿತ್ತು. ಕ್ಷೇತ್ರದಲ್ಲಿ ಪ್ರಕಾಶ್ ಹುಕ್ಕೇರಿ ಜಯಗಳಿಸಿದರೆ, ಬಿಜೆಪಿ ಅಭ್ಯರ್ಥಿ ರಮೇಶ್ ಕತ್ತಿ ಎರಡನೇ ಸ್ಥಾನ ಪಡೆದರು. ಎನ್ ಸಿಪಿ ಪಕ್ಷದ ಪ್ರತಾಪರಾವ್ ಪಾಟೀಲ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.
| ಚಿಕ್ಕೋಡಿ | ಪಡೆದ ಸ್ಥಾನ | ಪಕ್ಷ | ಪಡೆದ ಮತಗಳು |
| ಪ್ರಕಾಶ್ ಹುಕ್ಕೇರಿ | 1 | ಕಾಂಗ್ರೆಸ್ | 4,74,373 |
| ರಮೇಶ್ ಕತ್ತಿ | 2 | ಬಿಜೆಪಿ | 4,71,370 |
| ಪ್ರತಾಪರಾವ್ ಪಾಟೀಲ | 3 | ಎನ್ ಸಿಪಿ | 42,735 |
| ಶ್ರೀಮಂತ್ ಬಾಳಾಸಾಬ್ ಪಾಟೀಲ್ | 4 | ಜೆಡಿಎಸ್ | 39,992 |
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications