ಲೋಕಸಭಾ ಚುನಾವಣೆ ಬೆನ್ನಲ್ಲೆ ಕೆಪಿಸಿಸಿಗೆ ಮೇಜರ್ ಸರ್ಜರಿ: ಹೊಸ ಜಿಲ್ಲಾಧ್ಯಕ್ಷರ ನೇಮಕ
ಬೆಂಗಳೂರು, ಏಪ್ರಿಲ್. 01: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದಲ್ಲಿ ಕಾಂಗ್ರೆಸ್ ಸಲತ್ ಆಕ್ಟಿವ್ ಆಗಿದೆ. ಕಳೆದ ಬಾರಿಯ ಹೀನಾಯ ಸೋಲನ್ನು ವಿಧಾನಸಭಾ ಚುನಾವಣೆಯ ಗೆಲುವಿನ ಜೊತೆಗೆ ಸರಿ ಮಾಡಿರುವ ಕಾಂಗ್ರೆಸ್, ಗೆಲುವಿನ ಓಟವನ್ನು ಲೋಕಸಭಾ ಚುನಾವಣೆಯಲ್ಲೂ ಮುಂದುವರೆಸಲು ಬಯಸುತ್ತಿದೆ.
ಇದೆ ನಿಟ್ಟಿನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಗೆ ಮೇಜರ್ ಸರ್ಜರಿ ಮಾಡುತ್ತಿದೆ. ರಾಜ್ಯದಲ್ಲಿ ಇರುವ ಕೆಪಿಸಿಸಿ ಜಿಲ್ಲಾ ಸಮಿತಿಗಳಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಹೊಸ ಜಿಲ್ಲಾಧ್ಯಕ್ಷರನ್ನು ನೇಮಿಸಿದ್ದು, ಪ್ರಕಟಣೆ ಹೊರಡಿಸಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಈ ಕೆಳಕಂಡ ಜಿಲ್ಲಾ/ನಗರ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ನೇಮಕದ ಪ್ರಸ್ತಾವನೆಯನ್ನು ಮಾನ್ಯ ಕಾಂಗ್ರೆಸ್ ಅಧ್ಯಕ್ಷರು ಈ ಕೆಳಗಿನಂತೆ ತಕ್ಷಣವೇ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ ಎಂದು ಏಳು ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಏಪ್ರಿಲ್ 1, 2024 ರಂದು ಆದೇಶಿಸಿದ್ದಾರೆ.
ಹೊಸ ಜಿಲ್ಲಾಧ್ಯಕ್ಷರ ಪಟ್ಟಿ ಹೀಗಿದೆ
1. ಬಳ್ಳಾರಿ ನಗರ - ಪ್ರಶಾಂತ್ ಅಲ್ಲಂ ವೀರಭದ್ರಪ್ಪ
2. ಬೆಂಗಳೂರು ಪೂರ್ವ - ಕೆ ನಂದಕುಮಾರ್
3. ಹಾವೇರಿ - ಸಂಜೀವಕುಮಾರ ನೇರಲಂಗಿ
4. ಕೊಪ್ಪಳ - ಅಮರೇಗೌಡ ಬಯ್ಯಾಪುರ
5. ಉಡುಪಿ - ಕಿಶನ್ ಹೆಗ್ಡೆ
6. ರಾಯಚೂರು - ಬಸವರಾಜ ಇಟಗಿ
7. ಶಿವಮೊಗ್ಗ - ಆರ್ ಪ್ರಸನ್ನ ಕುಮಾರ್
ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ
ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಮಾಡುವ ನಲವತ್ತು ಮಂದಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಎಐಸಿಸಿ ಜನರಲ್ ಪ್ರಿಯಾಂಕಾ ಗಾಂಧಿ ಕೂಡ ಈ ಪಟ್ಟಿಯಲ್ಲಿದ್ದಾರೆ.

ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಹಿರಿಯ ನಾಯಕ ಬಿ ಕೆ ಹರಿಪ್ರಸಾದ್ ಮತ್ತು ಸಂಪುಟದ ಸಚಿವರಾದ ದಿನೇಶ್ ಗುಂಡೂರಾವ್, ಡಾ ಜಿ ಪರಮೇಶ್ವರ, ಎಚ್ ಕೆ ಪಾಟೀಲ್, ಜಮೀರ್ ಅಹಮದ್ ಖಾನ್ ಮತ್ತು ಸತೀಶ್ ಜಾರಕಿಹೊಳಿ ಕೂಡ ಪಟ್ಟಿಯಲ್ಲಿ ಸ್ಥಾನ ಗಳಿಸಿದ್ದಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications